‘ಕೃಷಿ ಸಂಬಂಧಿತ ಸಬ್ಸಿಡಿಗಳನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ ₹6,000 ಸಂದಾಯ ಮಾಡಲಾಗುತ್ತಿದೆ. ಬೆಳೆ ಪರಿಹಾರ, ಬೆಳೆ ವಿಮೆ ಇವುಗಳ ಪರಿಹಾರಕ್ಕೆ ಎಫ್ಐಡಿ ನೋಂದಣಿ ಕಡ್ಡಾಯವಾಗಿದೆ. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ಕೊಡಿ. ಇಲಾಖೆಯಿಂದ ನೋಂದಣಿ ಮಾಡಿಸಲು ಕ್ರಮ ವಹಿಸುತ್ತೇವೆ’ ಎಂದು ಮಲೇಬೆನ್ನೂರು ಉಪ ತಹಶೀಲ್ದಾರ್ ರವಿ ಹೇಳಿದರು.