<p>ಮಲೇಬೆನ್ನೂರು: ಸಮೀಪದ ಕುಂಬಳೂರು ಗ್ರಾಮದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಹನುಮಂತ ದೇವಸ್ಥಾನದ ಅರ್ಚಕರನ್ನು ಬದಲಿಸುವಂತೆ ಗುರುವಾರ ಗ್ರಾಮಸ್ಥರು ಪಟ್ಟು ಹಿಡಿದರು. ದೇವಾಲಯದ ಆಡಳಿತಾಧಿಕಾರಿ ಹಾಗೂ ಅಧಿಕಾರಿಗಳ ತಂಡ ತಾತ್ಕಾಲಿಕವಾಗಿ ಬೇರೊಬ್ಬ ಅರ್ಚಕರನ್ನು ನೇಮಿಸಿ, ಈ ಬಗ್ಗೆ ತಹಶೀಲ್ದಾರ್ಗೆ ಮಾಹಿತಿ ರವಾನಿಸುವುದಾಗಿ ತಿಳಿಸಿದರು.</p>.<p>ಅರ್ಚಕರು ಸಮರ್ಪಕವಾಗಿ ಪೂಜೆ ಮಾಡುತ್ತಿಲ್ಲ. ಜೊತೆಗೆ ಭಕ್ತರಿಂದ ಪೂಜೆಗೆ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಾರೆ. ಅಷ್ಟೇ ಅಲ್ಲದೆ ರಥೋತ್ಸವದ ವೇಳೆ ಆಹ್ವಾನ ಪತ್ರಿಕೆಯಲ್ಲಿ ತಪ್ಪು ಮಾಹಿತಿ ಪ್ರಕಟಿಸಿ ಹಂಚಿದ್ದರು ಎಂದು ಗ್ರಾಮಸ್ಥರು ಆರೋಪಿಸಿ, ಹೊಸ ಅರ್ಚಕರ ನಿಯೋಜನೆಗೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಈ ಹಿಂದೆ ಲಿಖಿತ ದೂರು ಸಲ್ಲಿಸಿದ್ದರು.</p>.<p>ದೂರಿನ ಮೇರೆಗೆ ನಾಡಕಚೇರಿ ಉಪತಹಶೀಲ್ದಾರ್ ಆರ್. ರವಿ, ರಾಜಸ್ವ ನಿರೀಕ್ಷಕ ಆನಂದ್, ಆಡಳಿತಾಧಿಕಾರಿ ಶ್ರೀಧರ್ ಆಗಮಿಸಿ, ದೂರಿನ ಬಗ್ಗೆ ವಿಚಾರಣೆ ನಡೆಸುವಾಗ ಅರ್ಚಕರಾದ ಸಂಜಯ್, ರಾಜೀವ್ ಹಾಗೂ ಗ್ರಾಮಸ್ಥರ ನಡುವೆ ಭಾರಿ ವಾಗ್ವಾದ ನಡೆದಿದ್ದು, ಕೈ–ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ಹಾರೂನ್ ಅಖ್ತರ್ ಸ್ಥಳಕ್ಕೆ ಬಂದು ದೇವಾಲಯದ ಆವರಣದಲ್ಲಿ ಶಾಂತಿ ಸಾಮರಸ್ಯ ಕಾಪಾಡದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.</p>.<p>ಬಳಿಕ ದೇವಾಲಯದ ಆಡಳಿತಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ತಾತ್ಕಾಲಿಕವಾಗಿ ಸೀತಾರಾಂ ಎಂಬುವವರನ್ನು ನೂತನ ಅರ್ಚಕರಾಗಿ ನಿಯೋಜಿಸಿದ್ದಾಗಿ ತಿಳಿಸಿದರು.</p>.<p>ಗ್ರಾಮಸ್ಥರಾದ ಆರ್.ಎಚ್, ಬಸವರಾಜಪ್ಪ, ಕಲ್ಲೇಶ್, ಲೋಕೇಶ್, ರಮೇಶ್, ಎ.ಕೆ. ಆಂಜನೇಯ, ರೇವಣಸಿದ್ದಪ್ಪ, ಗಿರೀಶ್, ಲಿಂಗರಾಜ್, ಕುಬೇರಪ್ಪ, ಕರಡೇರ ಸೋಮಣ್ಣ, ತೀರ್ಥಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-837789962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಸಮೀಪದ ಕುಂಬಳೂರು ಗ್ರಾಮದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಹನುಮಂತ ದೇವಸ್ಥಾನದ ಅರ್ಚಕರನ್ನು ಬದಲಿಸುವಂತೆ ಗುರುವಾರ ಗ್ರಾಮಸ್ಥರು ಪಟ್ಟು ಹಿಡಿದರು. ದೇವಾಲಯದ ಆಡಳಿತಾಧಿಕಾರಿ ಹಾಗೂ ಅಧಿಕಾರಿಗಳ ತಂಡ ತಾತ್ಕಾಲಿಕವಾಗಿ ಬೇರೊಬ್ಬ ಅರ್ಚಕರನ್ನು ನೇಮಿಸಿ, ಈ ಬಗ್ಗೆ ತಹಶೀಲ್ದಾರ್ಗೆ ಮಾಹಿತಿ ರವಾನಿಸುವುದಾಗಿ ತಿಳಿಸಿದರು.</p>.<p>ಅರ್ಚಕರು ಸಮರ್ಪಕವಾಗಿ ಪೂಜೆ ಮಾಡುತ್ತಿಲ್ಲ. ಜೊತೆಗೆ ಭಕ್ತರಿಂದ ಪೂಜೆಗೆ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಾರೆ. ಅಷ್ಟೇ ಅಲ್ಲದೆ ರಥೋತ್ಸವದ ವೇಳೆ ಆಹ್ವಾನ ಪತ್ರಿಕೆಯಲ್ಲಿ ತಪ್ಪು ಮಾಹಿತಿ ಪ್ರಕಟಿಸಿ ಹಂಚಿದ್ದರು ಎಂದು ಗ್ರಾಮಸ್ಥರು ಆರೋಪಿಸಿ, ಹೊಸ ಅರ್ಚಕರ ನಿಯೋಜನೆಗೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಈ ಹಿಂದೆ ಲಿಖಿತ ದೂರು ಸಲ್ಲಿಸಿದ್ದರು.</p>.<p>ದೂರಿನ ಮೇರೆಗೆ ನಾಡಕಚೇರಿ ಉಪತಹಶೀಲ್ದಾರ್ ಆರ್. ರವಿ, ರಾಜಸ್ವ ನಿರೀಕ್ಷಕ ಆನಂದ್, ಆಡಳಿತಾಧಿಕಾರಿ ಶ್ರೀಧರ್ ಆಗಮಿಸಿ, ದೂರಿನ ಬಗ್ಗೆ ವಿಚಾರಣೆ ನಡೆಸುವಾಗ ಅರ್ಚಕರಾದ ಸಂಜಯ್, ರಾಜೀವ್ ಹಾಗೂ ಗ್ರಾಮಸ್ಥರ ನಡುವೆ ಭಾರಿ ವಾಗ್ವಾದ ನಡೆದಿದ್ದು, ಕೈ–ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ಹಾರೂನ್ ಅಖ್ತರ್ ಸ್ಥಳಕ್ಕೆ ಬಂದು ದೇವಾಲಯದ ಆವರಣದಲ್ಲಿ ಶಾಂತಿ ಸಾಮರಸ್ಯ ಕಾಪಾಡದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.</p>.<p>ಬಳಿಕ ದೇವಾಲಯದ ಆಡಳಿತಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ತಾತ್ಕಾಲಿಕವಾಗಿ ಸೀತಾರಾಂ ಎಂಬುವವರನ್ನು ನೂತನ ಅರ್ಚಕರಾಗಿ ನಿಯೋಜಿಸಿದ್ದಾಗಿ ತಿಳಿಸಿದರು.</p>.<p>ಗ್ರಾಮಸ್ಥರಾದ ಆರ್.ಎಚ್, ಬಸವರಾಜಪ್ಪ, ಕಲ್ಲೇಶ್, ಲೋಕೇಶ್, ರಮೇಶ್, ಎ.ಕೆ. ಆಂಜನೇಯ, ರೇವಣಸಿದ್ದಪ್ಪ, ಗಿರೀಶ್, ಲಿಂಗರಾಜ್, ಕುಬೇರಪ್ಪ, ಕರಡೇರ ಸೋಮಣ್ಣ, ತೀರ್ಥಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-837789962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>