<p>ದಾವಣಗೆರೆ: ನಗರದಲ್ಲಿ ಶುಕ್ರವಾರ ಮುಂಜಾನೆ ಮಳೆರಾಯ ಆರ್ಭಟಿಸಿದ. ಜನ ನಿದ್ರೆಯಿಂದ ಎದ್ದೇಳುವ ಹೊತ್ತಿಗಾಗಲೇ ಶುರುವಾಗಿದ್ದ ಮಳೆಯು ಕೆಲ ಹೊತ್ತು ರಭಸವಾಗಿ ಸುರಿಯಿತು. ಇದರ ಪರಿಣಾಮ ನಗರದ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿತು.</p>.<p>ಗುರುವಾರ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮರುದಿನ ಸುರಿದ ಗುಡುಗು –ಸಿಡಿಲು, ಬಿರುಗಾಳಿ ಸಹಿತ ಮಳೆಯು ತಂಪಾದ ವಾತಾವರಣವನ್ನು ಸೃಷ್ಟಿಸಿತು.</p>.<p>ಜಗಳೂರು ರಸ್ತೆಯ ಬಸವನಾಳ್ ಬಳಿ ಮುಖ್ಯರಸ್ತೆಯ ಬದಿಯಲ್ಲಿ ಭಾರಿ ಮರವೊಂದು ಧರೆಗೆ ಉರುಳಿತು. ಮುಂಜಾನೆಯೇ ಮರ ಉರುಳಿ ಬಿದ್ದಿದ್ದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕೆಲಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಬಳಿಕ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು.</p>.<p>ಜಯನಗರ, ಹಳೆ ಚಿಕ್ಕಮ್ಮಣ್ಣಿ ದೇವರಾಜ ಅರಸು ಬಡಾವಣೆ, ಹಳೆ ಪಿ.ಬಿ ರಸ್ತೆಯ ಶಂಕರ್ ಬಡಾವಣೆ, ಹಳೆ ಬೇತೂರು ರಸ್ತೆ, ಭಾರತ್ ಕಾಲೊನಿ, ಎಚ್ಕೆಆರ್ ನಗರ ಸೇರಿದಂತೆ ಹಲವು ಬಡಾವಣೆಗಳಿಗೆ ನೀರು ನುಗ್ಗಿದ್ದರಿಂದ ಸ್ಥಳೀಯ ನಿವಾಸಿಗಳು ಸಮಸ್ಯೆ ಅನುಭವಿಸಿದರು.</p>.<p>‘ಜೋರು ಮಳೆಯಾದಾಗೆಲ್ಲಾ ಬಡಾವಣೆಯು ಜಲಾವೃತವಾಗುತ್ತದೆ. ಮನೆಗಳಿಗೂ ನೀರು ನುಗ್ಗುತ್ತದೆ. ಚರಂಡಿ ತುಂಬಿ ಹರಿಯುತ್ತವೆ. ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ’ ಎಂದು ಶಂಕರ ಲೇಔಟ್ ನಿವಾಸಿಗಳು ದೂರಿದರು.</p>.<p>ಮಳೆಯಿಂದಾಗಿ ಈಗಾಗಲೇ ಜಿಲ್ಲೆಯಲ್ಲಿ ಅಡಿಕೆ, ತೆಂಗು, ಪಪ್ಪಾಯ ಸೇರಿದಂತೆ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿದೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಗಳಿಂದ ಬೆಳೆ ಹಾನಿ ಸಮೀಕ್ಷೆಯೂ ನಡೆಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳೆ ಸಮೀಕ್ಷೆಗೂ ಅಡ್ಡಿಯಾಗಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಜಿಲ್ಲೆಯಲ್ಲಿ ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಹೊಲಗಳನ್ನು ಸಜ್ಜುಗೊಳಿಸುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೂ ಮುಂದಾಗುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-700638323</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದಲ್ಲಿ ಶುಕ್ರವಾರ ಮುಂಜಾನೆ ಮಳೆರಾಯ ಆರ್ಭಟಿಸಿದ. ಜನ ನಿದ್ರೆಯಿಂದ ಎದ್ದೇಳುವ ಹೊತ್ತಿಗಾಗಲೇ ಶುರುವಾಗಿದ್ದ ಮಳೆಯು ಕೆಲ ಹೊತ್ತು ರಭಸವಾಗಿ ಸುರಿಯಿತು. ಇದರ ಪರಿಣಾಮ ನಗರದ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿತು.</p>.<p>ಗುರುವಾರ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮರುದಿನ ಸುರಿದ ಗುಡುಗು –ಸಿಡಿಲು, ಬಿರುಗಾಳಿ ಸಹಿತ ಮಳೆಯು ತಂಪಾದ ವಾತಾವರಣವನ್ನು ಸೃಷ್ಟಿಸಿತು.</p>.<p>ಜಗಳೂರು ರಸ್ತೆಯ ಬಸವನಾಳ್ ಬಳಿ ಮುಖ್ಯರಸ್ತೆಯ ಬದಿಯಲ್ಲಿ ಭಾರಿ ಮರವೊಂದು ಧರೆಗೆ ಉರುಳಿತು. ಮುಂಜಾನೆಯೇ ಮರ ಉರುಳಿ ಬಿದ್ದಿದ್ದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕೆಲಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಬಳಿಕ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು.</p>.<p>ಜಯನಗರ, ಹಳೆ ಚಿಕ್ಕಮ್ಮಣ್ಣಿ ದೇವರಾಜ ಅರಸು ಬಡಾವಣೆ, ಹಳೆ ಪಿ.ಬಿ ರಸ್ತೆಯ ಶಂಕರ್ ಬಡಾವಣೆ, ಹಳೆ ಬೇತೂರು ರಸ್ತೆ, ಭಾರತ್ ಕಾಲೊನಿ, ಎಚ್ಕೆಆರ್ ನಗರ ಸೇರಿದಂತೆ ಹಲವು ಬಡಾವಣೆಗಳಿಗೆ ನೀರು ನುಗ್ಗಿದ್ದರಿಂದ ಸ್ಥಳೀಯ ನಿವಾಸಿಗಳು ಸಮಸ್ಯೆ ಅನುಭವಿಸಿದರು.</p>.<p>‘ಜೋರು ಮಳೆಯಾದಾಗೆಲ್ಲಾ ಬಡಾವಣೆಯು ಜಲಾವೃತವಾಗುತ್ತದೆ. ಮನೆಗಳಿಗೂ ನೀರು ನುಗ್ಗುತ್ತದೆ. ಚರಂಡಿ ತುಂಬಿ ಹರಿಯುತ್ತವೆ. ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ’ ಎಂದು ಶಂಕರ ಲೇಔಟ್ ನಿವಾಸಿಗಳು ದೂರಿದರು.</p>.<p>ಮಳೆಯಿಂದಾಗಿ ಈಗಾಗಲೇ ಜಿಲ್ಲೆಯಲ್ಲಿ ಅಡಿಕೆ, ತೆಂಗು, ಪಪ್ಪಾಯ ಸೇರಿದಂತೆ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿದೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಗಳಿಂದ ಬೆಳೆ ಹಾನಿ ಸಮೀಕ್ಷೆಯೂ ನಡೆಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳೆ ಸಮೀಕ್ಷೆಗೂ ಅಡ್ಡಿಯಾಗಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಜಿಲ್ಲೆಯಲ್ಲಿ ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಹೊಲಗಳನ್ನು ಸಜ್ಜುಗೊಳಿಸುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೂ ಮುಂದಾಗುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-700638323</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>