<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರ ವೈದ್ಯಕೀಯ ಸೌಲಭ್ಯಕ್ಕಾಗಿ 100 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಯನ್ನು ಮಾಗನಹಳ್ಳಿ ಮುಖ್ಯರಸ್ತೆಯ ಮುಸ್ತಾಫಾ ನಗರದಲ್ಲಿ ನಿರ್ಮಾಣ ಮಾಡಬೇಕು ಎಂದು ಅಂಬೇಡ್ಕರ್ ಮಹಾಸೇನೆ ಯುವ ಘಟಕ ರಾಜ್ಯ ಘಟಕದ ಅಧ್ಯಕ್ಷ ನೂರುಲ್ಲಾ ಒತ್ತಾಯಿಸಿದರು.</p>.<p>‘ರಾಮಕೃಷ್ಣ ಹೆಗಡೆ ನಗರದಲ್ಲಿ ಅಗತ್ಯ ಭೂಮಿ ಲಭ್ಯವಿದೆ. ಇಲ್ಲಿ ಆಸ್ಪತ್ರೆ ನಿರ್ಮಿಸಿದರೆ ಜನರಿಗೂ ಅನುಕೂಲವಾಗಲಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಮುಖಂಡರಾದ ಅನಿಲ್ಕುಮಾರ್, ಸೈಯದ್ ಆರೀಫ್, ಜಿಲಾನಿ, ಮುಬಾರಕ್ ಅಲಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-43-189502104</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರ ವೈದ್ಯಕೀಯ ಸೌಲಭ್ಯಕ್ಕಾಗಿ 100 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಯನ್ನು ಮಾಗನಹಳ್ಳಿ ಮುಖ್ಯರಸ್ತೆಯ ಮುಸ್ತಾಫಾ ನಗರದಲ್ಲಿ ನಿರ್ಮಾಣ ಮಾಡಬೇಕು ಎಂದು ಅಂಬೇಡ್ಕರ್ ಮಹಾಸೇನೆ ಯುವ ಘಟಕ ರಾಜ್ಯ ಘಟಕದ ಅಧ್ಯಕ್ಷ ನೂರುಲ್ಲಾ ಒತ್ತಾಯಿಸಿದರು.</p>.<p>‘ರಾಮಕೃಷ್ಣ ಹೆಗಡೆ ನಗರದಲ್ಲಿ ಅಗತ್ಯ ಭೂಮಿ ಲಭ್ಯವಿದೆ. ಇಲ್ಲಿ ಆಸ್ಪತ್ರೆ ನಿರ್ಮಿಸಿದರೆ ಜನರಿಗೂ ಅನುಕೂಲವಾಗಲಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಮುಖಂಡರಾದ ಅನಿಲ್ಕುಮಾರ್, ಸೈಯದ್ ಆರೀಫ್, ಜಿಲಾನಿ, ಮುಬಾರಕ್ ಅಲಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-43-189502104</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>