<p><strong>ದಾವಣಗೆರೆ</strong>: ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಠಾಣೆ ಪೊಲೀಸರು ಸೋಮವಾರ ಆರೋಪಿಯೊಬ್ಬನನ್ನು ಬಂಧಿಸಿ ₹2.29 ಲಕ್ಷ ಮೌಲ್ಯದ 41 ಗ್ರಾಂ ಬಂಗಾರದ ಆಭರಣ ಹಾಗೂ 1 ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ ಬಂಧಿತ ಆರೋಪಿ.</p>.<p>ನಗರದ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಚಲಿಸುವ ರೈಲಿನಲ್ಲೇ 2022ರ ಮಾರ್ಚ್ನಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ನಿವಾಸಿ ಸಂದೀಪ್ ಅವರಿಗೆ ಸೇರಿದ ಬಂಗಾರದ ಒಡವೆ, ಮೊಬೈಲ್ ಹಾಗೂ ₹5,000 ನಗದು ಇದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಈ ಬಗ್ಗೆ ಸಂದೀಪ್ ಪ್ರಕರಣ ದಾಖಲಿಸಿದ್ದರು.</p>.<p>ಸಿಬ್ಬಂದಿಯನ್ನು ಕಂಡು ಓಡಿಹೋಗಲು ಯತ್ನಿಸಿದ್ದ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ., ಎಎಸ್ಐ ನಾಗರಾಜ್ ಹಾಗೂ ಸಿಬ್ಬಂದಿಯಾದ ಶ್ರೀನಿವಾಸ್, ಹರೀಶ್ ನಾಯ್ಕ, ಹಾಲೇಶ್, ಚೇತನ್, ಸುನೀಲ್, ತಿಪ್ಪೇಶ್, ಹನುಮಂತಪ್ಪ ಭಜಂತ್ರಿ, ರಾಜು ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಠಾಣೆ ಪೊಲೀಸರು ಸೋಮವಾರ ಆರೋಪಿಯೊಬ್ಬನನ್ನು ಬಂಧಿಸಿ ₹2.29 ಲಕ್ಷ ಮೌಲ್ಯದ 41 ಗ್ರಾಂ ಬಂಗಾರದ ಆಭರಣ ಹಾಗೂ 1 ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ ಬಂಧಿತ ಆರೋಪಿ.</p>.<p>ನಗರದ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಚಲಿಸುವ ರೈಲಿನಲ್ಲೇ 2022ರ ಮಾರ್ಚ್ನಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ನಿವಾಸಿ ಸಂದೀಪ್ ಅವರಿಗೆ ಸೇರಿದ ಬಂಗಾರದ ಒಡವೆ, ಮೊಬೈಲ್ ಹಾಗೂ ₹5,000 ನಗದು ಇದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಈ ಬಗ್ಗೆ ಸಂದೀಪ್ ಪ್ರಕರಣ ದಾಖಲಿಸಿದ್ದರು.</p>.<p>ಸಿಬ್ಬಂದಿಯನ್ನು ಕಂಡು ಓಡಿಹೋಗಲು ಯತ್ನಿಸಿದ್ದ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ., ಎಎಸ್ಐ ನಾಗರಾಜ್ ಹಾಗೂ ಸಿಬ್ಬಂದಿಯಾದ ಶ್ರೀನಿವಾಸ್, ಹರೀಶ್ ನಾಯ್ಕ, ಹಾಲೇಶ್, ಚೇತನ್, ಸುನೀಲ್, ತಿಪ್ಪೇಶ್, ಹನುಮಂತಪ್ಪ ಭಜಂತ್ರಿ, ರಾಜು ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>