ದಾವಣಗೆರೆ: ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಠಾಣೆ ಪೊಲೀಸರು ಸೋಮವಾರ ಆರೋಪಿಯೊಬ್ಬನನ್ನು ಬಂಧಿಸಿ ₹2.29 ಲಕ್ಷ ಮೌಲ್ಯದ 41 ಗ್ರಾಂ ಬಂಗಾರದ ಆಭರಣ ಹಾಗೂ 1 ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ ಬಂಧಿತ ಆರೋಪಿ.
ನಗರದ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಚಲಿಸುವ ರೈಲಿನಲ್ಲೇ 2022ರ ಮಾರ್ಚ್ನಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ನಿವಾಸಿ ಸಂದೀಪ್ ಅವರಿಗೆ ಸೇರಿದ ಬಂಗಾರದ ಒಡವೆ, ಮೊಬೈಲ್ ಹಾಗೂ ₹5,000 ನಗದು ಇದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಈ ಬಗ್ಗೆ ಸಂದೀಪ್ ಪ್ರಕರಣ ದಾಖಲಿಸಿದ್ದರು.
ಸಿಬ್ಬಂದಿಯನ್ನು ಕಂಡು ಓಡಿಹೋಗಲು ಯತ್ನಿಸಿದ್ದ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ., ಎಎಸ್ಐ ನಾಗರಾಜ್ ಹಾಗೂ ಸಿಬ್ಬಂದಿಯಾದ ಶ್ರೀನಿವಾಸ್, ಹರೀಶ್ ನಾಯ್ಕ, ಹಾಲೇಶ್, ಚೇತನ್, ಸುನೀಲ್, ತಿಪ್ಪೇಶ್, ಹನುಮಂತಪ್ಪ ಭಜಂತ್ರಿ, ರಾಜು ಕಾರ್ಯಾಚರಣೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.