‘ಶಿಷ್ಯವೇತನ ನೀಡುವ ಸಂಬಂಧ ಆಶ್ವಾಸನೆ ಮಾತ್ರ ಸಿಕ್ಕಿದೆ. ಆದರೆ ಯಾರು ಶಿಷ್ಯವೇತನ ನೀಡುತ್ತಾರೆ ಎಂಬ ಬಗ್ಗೆ ನಮಗೆ ತಿಳಿಸಿಲ್ಲ. ಹಾಗಾಗಿ ಶಿಷ್ಯವೇತನ ನೀಡುವ ಸಂಬಂಧ ಸರ್ಕಾರ ಲಿಖಿತ ಭರವಸೆ ನೀಡಬೇಕು. ಧರಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಹಿಂಪಡೆದಿಲ್ಲ. ಒಂದು ವೇಳೆ ಲಿಖಿತ ಭರವಸೆ ಸಿಗದಿದ್ದರೆ ಸೋಮವಾರದಿಂದ ಮತ್ತೆ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.