ದಾವಣಗೆರೆ: ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣವು ಈಗಿರುವ 6.20 ಎಕರೆ ಜಮೀನಿನಲ್ಲಿ ಆರು ಅಂತಸ್ತಿನ ಕಟ್ಟಡದಲ್ಲಿ ಆಗಬೇಕು. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಕೊಂಡಿಲ್ಲ.
ಈ ಬಗ್ಗೆ ಚರ್ಚಿಸಲು ಜೂನ್ 21ರಂದು ಬೆಳಿಗ್ಗೆ 11ಕ್ಕೆ ಗಡಿಯಾರ ಕಂಬದ ಬಳಿ ಕರ್ನಾಟಕ ಪ್ರದೇಶ ರೈತ ಸಂಘದ ಅಧ್ಯಕ್ಷ ಎಂ.ಎಸ್.ಕೆ ಶಾಸ್ತ್ರಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.
2006ರಲ್ಲಿಯೇ ಜಿಲ್ಲಾ ನ್ಯಾಯಾಲಯದ ಕಟ್ಟಡಕ್ಕೆ ₹ 7.65 ಕೋಟಿ ಅನುದಾನ ನೀಡಲು ಲೋಕೋಪಯೋಗಿ ಎಂಜಿನಿಯರ್ಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಆದರೆ ಇನ್ನೂ ಕಾರ್ಯಗತಗೊಂಡಿಲ್ಲ ಎಂದು ಶಾಸ್ತ್ರಿ ತಿಳಿಸಿದ್ದಾರೆ.