ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ಮಾಡಿದರು. ಬಳಿಕ ತೆರೆದ ಧ್ವಜವಂದನೆ ಸ್ವೀಕರಿಸಿದರು. ಪೊಲೀಸ್, ಅರಣ್ಯ ಇಲಾಖೆ, ಎನ್ ಸಿಸಿ, ಸ್ಕೌಟ್ಸ್, ಗೈಡ್ಸ್ ಸಹಿತ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.