<p><strong>ದಾವಣಗೆರೆ:</strong> ಶರಣರು ಸಮಾಜಕ್ಕೆ ನೀಡಿದ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕ ಶರಣರ ಜಯಂತಿಯಲ್ಲಿ ಅವರು ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಮತ್ತು ಸಮಗಾರ ಹರಳಯ್ಯ ಅವರ ಕುರಿತು ಉಪನ್ಯಾಸ ನೀಡಿದರು.</p>.<p>‘ಪ್ರತಿಯೊಬ್ಬರೂ ಶ್ರಮಜೀವಿಗಳಾಗಬೇಕು, ಕಾಯಕದಲ್ಲಿಯೇ ದೈವತ್ವವನ್ನು ಕಾಣಬೇಕು ಎಂಬುದು ಶರಣರ ಆಶಯವಾಗಿತ್ತು. 12ನೇ ಶತಮಾನದಲ್ಲಿನ ಅನುಭವ ಮಂಟಪ ಎಲ್ಲರನ್ನೂ ಒಗ್ಗೂಡಿಸಿ ಸಂಸ್ಕಾರ ಮತ್ತು ಸಮಾನತೆಯನ್ನು ನೀಡಿತು’ ಎಂದು ಹೇಳಿದರು.</p>.<p>‘ಭಾರತೀಯ ಸಂವಿಧಾನದಲ್ಲಿರುವ ಸಮಾನತೆ ಮತ್ತು ಭ್ರಾತೃತ್ವದ ಗುಣಗಳು ಬಸವಾದಿ ಶರಣರ ಕೊಡುಗೆ. ಸೋಮಾರಿತನವಿಲ್ಲದ ಬದುಕನ್ನು ಶರಣರು ಕಲಿಸಿಕೊಟ್ಟರು’ ಎಂದರು.</p>.<p>ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಯೋಜನಾ ನಿರ್ದೇಶಕ ಮಹತೇಂಶ್, ‘ಧೂಡಾ’ ಆಯುಕ್ತ ಹುಲಿಮನೆ ತಿಮ್ಮಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಶರಣರು ಸಮಾಜಕ್ಕೆ ನೀಡಿದ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕ ಶರಣರ ಜಯಂತಿಯಲ್ಲಿ ಅವರು ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಮತ್ತು ಸಮಗಾರ ಹರಳಯ್ಯ ಅವರ ಕುರಿತು ಉಪನ್ಯಾಸ ನೀಡಿದರು.</p>.<p>‘ಪ್ರತಿಯೊಬ್ಬರೂ ಶ್ರಮಜೀವಿಗಳಾಗಬೇಕು, ಕಾಯಕದಲ್ಲಿಯೇ ದೈವತ್ವವನ್ನು ಕಾಣಬೇಕು ಎಂಬುದು ಶರಣರ ಆಶಯವಾಗಿತ್ತು. 12ನೇ ಶತಮಾನದಲ್ಲಿನ ಅನುಭವ ಮಂಟಪ ಎಲ್ಲರನ್ನೂ ಒಗ್ಗೂಡಿಸಿ ಸಂಸ್ಕಾರ ಮತ್ತು ಸಮಾನತೆಯನ್ನು ನೀಡಿತು’ ಎಂದು ಹೇಳಿದರು.</p>.<p>‘ಭಾರತೀಯ ಸಂವಿಧಾನದಲ್ಲಿರುವ ಸಮಾನತೆ ಮತ್ತು ಭ್ರಾತೃತ್ವದ ಗುಣಗಳು ಬಸವಾದಿ ಶರಣರ ಕೊಡುಗೆ. ಸೋಮಾರಿತನವಿಲ್ಲದ ಬದುಕನ್ನು ಶರಣರು ಕಲಿಸಿಕೊಟ್ಟರು’ ಎಂದರು.</p>.<p>ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಯೋಜನಾ ನಿರ್ದೇಶಕ ಮಹತೇಂಶ್, ‘ಧೂಡಾ’ ಆಯುಕ್ತ ಹುಲಿಮನೆ ತಿಮ್ಮಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>