<p><strong>ದಾವಣಗೆರೆ:</strong> ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿ ರೋಬೋಟಿಕ್ ಹಾಗೂ ಕೃತಕ ಮಂಡಿ ಕೀಲು ಬದಲಾವಣೆಯ 10 ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.</p>.<p>ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ರವಿಕುಮಾರ್ ಟಿ.ಜಿ. ಮಾರ್ಗದರ್ಶನದಲ್ಲಿ ಈ ಚಿಕಿತ್ಸೆಗಳು ನಡೆದಿವೆ. ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸಕರಾದ ಡಾ.ಲಿಂಗರಾಜು ಎ.ಪಿ. ಮತ್ತು ಡಾ.ಧ್ರುವ ವಿ. ಹಾಗೂ ಅರಿವಳಿಕೆ ತಜ್ಞ ಡಾ.ದೀಪಕ್ ಆರ್.ಎಂ. ನೇತೃತ್ವದ ತಂಡದ ವೈದ್ಯಕೀಯ ನೈಪುಣ್ಯತೆ ಚಿಕಿತ್ಸೆಯ ಯಶಸ್ಸಿಗೆ ಕಾರಣವಾಗಿದೆ.</p>.<p>‘ರೋಬೋಟಿಕ್ ಮಂಡಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯಂತಹ ಆಧುನಿಕ ತಂತ್ರಜ್ಞಾನವನ್ನು ಮಾನವೀಯ ಆರೈಕೆಯೊಂದಿಗೆ ನೀಡಲಾಗುತ್ತಿದೆ. ಇದು ಆಸ್ಪತ್ರೆಯ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಈ ಮೂಲಕ ಅತ್ಯಾಧುನಿಕ ಚಿಕಿತ್ಸೆಗಳು ಕೂಡ ಸ್ಥಳೀಯರಿಗೆ ಸುಲಭವಾಗಿ ಕೈಗೆಟಕುತ್ತಿವೆ’ ಎಂದು ಡಾ.ರವಿಕುಮಾರ್ ಟಿ.ಜಿ. ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-324913307</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿ ರೋಬೋಟಿಕ್ ಹಾಗೂ ಕೃತಕ ಮಂಡಿ ಕೀಲು ಬದಲಾವಣೆಯ 10 ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.</p>.<p>ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ರವಿಕುಮಾರ್ ಟಿ.ಜಿ. ಮಾರ್ಗದರ್ಶನದಲ್ಲಿ ಈ ಚಿಕಿತ್ಸೆಗಳು ನಡೆದಿವೆ. ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸಕರಾದ ಡಾ.ಲಿಂಗರಾಜು ಎ.ಪಿ. ಮತ್ತು ಡಾ.ಧ್ರುವ ವಿ. ಹಾಗೂ ಅರಿವಳಿಕೆ ತಜ್ಞ ಡಾ.ದೀಪಕ್ ಆರ್.ಎಂ. ನೇತೃತ್ವದ ತಂಡದ ವೈದ್ಯಕೀಯ ನೈಪುಣ್ಯತೆ ಚಿಕಿತ್ಸೆಯ ಯಶಸ್ಸಿಗೆ ಕಾರಣವಾಗಿದೆ.</p>.<p>‘ರೋಬೋಟಿಕ್ ಮಂಡಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯಂತಹ ಆಧುನಿಕ ತಂತ್ರಜ್ಞಾನವನ್ನು ಮಾನವೀಯ ಆರೈಕೆಯೊಂದಿಗೆ ನೀಡಲಾಗುತ್ತಿದೆ. ಇದು ಆಸ್ಪತ್ರೆಯ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಈ ಮೂಲಕ ಅತ್ಯಾಧುನಿಕ ಚಿಕಿತ್ಸೆಗಳು ಕೂಡ ಸ್ಥಳೀಯರಿಗೆ ಸುಲಭವಾಗಿ ಕೈಗೆಟಕುತ್ತಿವೆ’ ಎಂದು ಡಾ.ರವಿಕುಮಾರ್ ಟಿ.ಜಿ. ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-324913307</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>