<p><strong>ದಾವಣಗೆರೆ</strong>: ಪರಸ್ಪರ ಗುರಾಯಿಸಿದರು ಎಂಬ ಕಾರಣಕ್ಕೆ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಇರಿತಕ್ಕೆ ಒಳಗಾದ ಗಾಂಧಿನಗರದ ನಿವಾಸಿ ಮನೋಜ್ಕುಮಾರ್ (22) ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಇಲ್ಲಿನ ವಿಜಯ ನಗರ ಬಡಾವಣೆಯಲ್ಲಿ ಶನಿವಾರ ರಾತ್ರಿ ಜಗಳ ನಡೆದಿದೆ.</p>.<p>ಆಗಿದ್ದೇನು: ಮನೋಜ್ಕುಮಾರ್ ಸ್ನೇಹಿತರು ಜನ್ಮದಿನದ ಪಾರ್ಟಿಗೆಂದು ವಿಜಯನಗರ ಬಡಾವಣೆಗೆ ತೆರಳಿದ್ದರು. ಈ ವೇಳೆ ಮನೋಜ್ಕುಮಾರ್ ಸ್ನೇಹಿತ ಹಾಗೂ ವಿಜಯ ನಗರ ಬಡಾವಣೆಯ ನಿವಾಸಿ ರಾಹುಲ್ ನಡುವೆ ‘ಗುರಾಯಿಸಿದ’ ಎಂಬ ಕಾರಣಕ್ಕೆ ಜಗಳ ನಡೆದಿದೆ. ಸ್ಥಳೀಯರು ಬಿಡಿಸಿ ಇಬ್ಬರನ್ನೂ ಮನೆಗೆ ಕಳಿಸಿದ್ದಾರೆ.</p>.<p>ಬಳಿಕ ವಿಷಯ ತಿಳಿದ ಮನೋಜ್ ಹಾಗೂ ಸ್ನೇಹಿತರು ರಾಹುಲ್ ಮನೆ ಬಳಿ ತೆರಳಿ ಗಲಾಟೆ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ರಾಹುಲ್ನ ಚಿಕ್ಕಪ್ಪ ಹಾಗೂ ಇನ್ನಿತರರು ಮನೋಜ್ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ. ಬಳಿಕ ಮನೋಜ್ ಕಡೆಯವರೂ ರಾಹುಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ವಿಷಯ ತಿಳಿದ ಗಾಂಧಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಗಲಾಟೆ ಪ್ರಕರಣದಲ್ಲಿ ರಾಹುಲ್ ಚಿಕ್ಕಪ್ಪನನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಎರಡೂ ಕಡೆಯವರು ದೂರು ನೀಡಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-1629997008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಪರಸ್ಪರ ಗುರಾಯಿಸಿದರು ಎಂಬ ಕಾರಣಕ್ಕೆ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಇರಿತಕ್ಕೆ ಒಳಗಾದ ಗಾಂಧಿನಗರದ ನಿವಾಸಿ ಮನೋಜ್ಕುಮಾರ್ (22) ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಇಲ್ಲಿನ ವಿಜಯ ನಗರ ಬಡಾವಣೆಯಲ್ಲಿ ಶನಿವಾರ ರಾತ್ರಿ ಜಗಳ ನಡೆದಿದೆ.</p>.<p>ಆಗಿದ್ದೇನು: ಮನೋಜ್ಕುಮಾರ್ ಸ್ನೇಹಿತರು ಜನ್ಮದಿನದ ಪಾರ್ಟಿಗೆಂದು ವಿಜಯನಗರ ಬಡಾವಣೆಗೆ ತೆರಳಿದ್ದರು. ಈ ವೇಳೆ ಮನೋಜ್ಕುಮಾರ್ ಸ್ನೇಹಿತ ಹಾಗೂ ವಿಜಯ ನಗರ ಬಡಾವಣೆಯ ನಿವಾಸಿ ರಾಹುಲ್ ನಡುವೆ ‘ಗುರಾಯಿಸಿದ’ ಎಂಬ ಕಾರಣಕ್ಕೆ ಜಗಳ ನಡೆದಿದೆ. ಸ್ಥಳೀಯರು ಬಿಡಿಸಿ ಇಬ್ಬರನ್ನೂ ಮನೆಗೆ ಕಳಿಸಿದ್ದಾರೆ.</p>.<p>ಬಳಿಕ ವಿಷಯ ತಿಳಿದ ಮನೋಜ್ ಹಾಗೂ ಸ್ನೇಹಿತರು ರಾಹುಲ್ ಮನೆ ಬಳಿ ತೆರಳಿ ಗಲಾಟೆ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ರಾಹುಲ್ನ ಚಿಕ್ಕಪ್ಪ ಹಾಗೂ ಇನ್ನಿತರರು ಮನೋಜ್ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ. ಬಳಿಕ ಮನೋಜ್ ಕಡೆಯವರೂ ರಾಹುಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ವಿಷಯ ತಿಳಿದ ಗಾಂಧಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಗಲಾಟೆ ಪ್ರಕರಣದಲ್ಲಿ ರಾಹುಲ್ ಚಿಕ್ಕಪ್ಪನನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಎರಡೂ ಕಡೆಯವರು ದೂರು ನೀಡಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-1629997008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>