<p>ದಾವಣಗೆರೆ: ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸಿದ ‘ಕೃಷಿ ಹೊಂಡ’ದ ಉತ್ತಮ ಮಾದರಿಯನ್ನು ಪ್ರಸ್ತುತಪಡಿಸಿದ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.</p>.<p>ಬೆಂಗಳೂರಿನಲ್ಲಿ ನಡೆದ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ ಪ್ರಶಸ್ತಿ ವಿತರಿಸಲಾಯಿತು.</p>.<p>2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕೃಷಿ ಸಚಿವ ಚಲುವರಾಯಸ್ವಾಮಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ್ದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಕೃಷಿ ಭಾಗ್ಯ’ ಅಡಿಯಲ್ಲಿ ನಿರ್ಮಿಸಿದ ಕೃಷಿ ಹೊಂಡಗಳ ಅನುಷ್ಠಾನದ ಕುರಿತು ಅತ್ಯುತ್ತಮ ಮಾದರಿಯೊಂದನ್ನು ಪ್ರಸ್ತುತಪಡಿಸಲಾಯಿತು.</p>.<p>ಕೃಷಿ ಆಯುಕ್ತ ವೈ.ಎಸ್. ಪಾಟೀಲ, ಕೃಷಿ ನಿರ್ದೇಶಕ ಜಿ.ಟಿ. ಪುತ್ರ, ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ., ಉಪನಿರ್ದೇಶಕರಾದ ಭಾರತಮ್ಮ, ರೇವಣಸಿದ್ದನಗೌಡ ಎಚ್.ಕೆ., ತಿಪ್ಪೇಸ್ವಾಮಿ ಆರ್., ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ., ನಟರಾಜ್, ವಿಶ್ವನಾಥ್, ಅರುಣ್ ಕುಮಾರ್, ಶ್ವೇತಾ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-43-866122021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸಿದ ‘ಕೃಷಿ ಹೊಂಡ’ದ ಉತ್ತಮ ಮಾದರಿಯನ್ನು ಪ್ರಸ್ತುತಪಡಿಸಿದ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.</p>.<p>ಬೆಂಗಳೂರಿನಲ್ಲಿ ನಡೆದ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ ಪ್ರಶಸ್ತಿ ವಿತರಿಸಲಾಯಿತು.</p>.<p>2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕೃಷಿ ಸಚಿವ ಚಲುವರಾಯಸ್ವಾಮಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ್ದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಕೃಷಿ ಭಾಗ್ಯ’ ಅಡಿಯಲ್ಲಿ ನಿರ್ಮಿಸಿದ ಕೃಷಿ ಹೊಂಡಗಳ ಅನುಷ್ಠಾನದ ಕುರಿತು ಅತ್ಯುತ್ತಮ ಮಾದರಿಯೊಂದನ್ನು ಪ್ರಸ್ತುತಪಡಿಸಲಾಯಿತು.</p>.<p>ಕೃಷಿ ಆಯುಕ್ತ ವೈ.ಎಸ್. ಪಾಟೀಲ, ಕೃಷಿ ನಿರ್ದೇಶಕ ಜಿ.ಟಿ. ಪುತ್ರ, ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ., ಉಪನಿರ್ದೇಶಕರಾದ ಭಾರತಮ್ಮ, ರೇವಣಸಿದ್ದನಗೌಡ ಎಚ್.ಕೆ., ತಿಪ್ಪೇಸ್ವಾಮಿ ಆರ್., ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ., ನಟರಾಜ್, ವಿಶ್ವನಾಥ್, ಅರುಣ್ ಕುಮಾರ್, ಶ್ವೇತಾ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-43-866122021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>