<p><strong>ದಾವಣಗೆರೆ</strong>: ಹಿಟ್ಟಿನ ಗಿರಣಿ ಮನೆಯ ಇ–ಸ್ವತ್ತು ಮಾಡಿಕೊಡಲು ₹ 15,000 ಲಂಚದ ಸ್ವೀಕರಿಸುತ್ತಿದ್ದಾಗ ಇಲ್ಲಿನ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ (ಪ್ರಭಾರ) ಹಾಗೂ ಎಸ್ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.<p>ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ (ಪ್ರಭಾರ) ಬಿ. ಅನ್ನಪೂರ್ಣಾ ಹಾಗೂ ಮಹಾನಗರ ಪಾಲಿಕೆ ವಲಯ–1ರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಲಕ್ಕಪ್ಪ ವೈ. ಲೋಕಾಯುಕ್ತ ಬಲೆಗೆ ಬಿದ್ದವರು.</p>.<p>ನಗರದ ಬೇತೂರು ರಸ್ತೆಯ ಇಮಾಂ ನಗರದ 4ನೇ ಕ್ರಾಸ್ ನಿವಾಸಿ ಚಂದ್ರಶೇಖರ ಬಿ. ಅವರು ಹಿಟ್ಟಿನ ಗಿರಣಿ ಮನೆಯ ಇ–ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇ–ಸ್ವತ್ತು ನೀಡಲು ₹ 15,000 ಲಂಚ ನೀಡುವಂತೆ ಲಕ್ಕಪ್ಪ ವೈ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಚಂದ್ರಶೇಖರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. </p>.<p>ಗುರುವಾರ ₹ 15,000 ಲಂಚ ಕೊಡಲು ಬಂದಾಗ ಕಂದಾಯ ಅಧಿಕಾರಿ ಬಿ. ಅನ್ನಪೂರ್ಣಾ ₹ 25,000ಕ್ಕೆ ಬೇಡಿಕೆ ಇಟ್ಟಿದ್ದರು. ಆಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೂರೆ, ಲೋಕಾಯುಕ್ತ ಡಿವೈಎಸ್ಪಿ ಕಲಾವತಿ, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಎಚ್.ಎಸ್. ರಾಷ್ಟ್ರಪತಿ, ಪ್ರಭು ಬಿ. ಸೂರಿನ, ಸಿಬ್ಬಂದಿ ಆಂಜನೇಯ, ಸುಂದರೇಶ್, ಆಶಾ, ಮಲ್ಲಿಕಾರ್ಜುನ, ಲಿಂಗೇಶ್, ಧನರಾಜ್, ಮಂಜುನಾಥ್, ಗಿರೀಶ್, ಬಸವರಾಜ, ಜಂಷಿದ್ ಖಾನಂ ಅವರ ತಂಡ ಕಾರ್ಯಾಚರಣೆ ನಡೆಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಹಿಟ್ಟಿನ ಗಿರಣಿ ಮನೆಯ ಇ–ಸ್ವತ್ತು ಮಾಡಿಕೊಡಲು ₹ 15,000 ಲಂಚದ ಸ್ವೀಕರಿಸುತ್ತಿದ್ದಾಗ ಇಲ್ಲಿನ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ (ಪ್ರಭಾರ) ಹಾಗೂ ಎಸ್ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.<p>ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ (ಪ್ರಭಾರ) ಬಿ. ಅನ್ನಪೂರ್ಣಾ ಹಾಗೂ ಮಹಾನಗರ ಪಾಲಿಕೆ ವಲಯ–1ರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಲಕ್ಕಪ್ಪ ವೈ. ಲೋಕಾಯುಕ್ತ ಬಲೆಗೆ ಬಿದ್ದವರು.</p>.<p>ನಗರದ ಬೇತೂರು ರಸ್ತೆಯ ಇಮಾಂ ನಗರದ 4ನೇ ಕ್ರಾಸ್ ನಿವಾಸಿ ಚಂದ್ರಶೇಖರ ಬಿ. ಅವರು ಹಿಟ್ಟಿನ ಗಿರಣಿ ಮನೆಯ ಇ–ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇ–ಸ್ವತ್ತು ನೀಡಲು ₹ 15,000 ಲಂಚ ನೀಡುವಂತೆ ಲಕ್ಕಪ್ಪ ವೈ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಚಂದ್ರಶೇಖರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. </p>.<p>ಗುರುವಾರ ₹ 15,000 ಲಂಚ ಕೊಡಲು ಬಂದಾಗ ಕಂದಾಯ ಅಧಿಕಾರಿ ಬಿ. ಅನ್ನಪೂರ್ಣಾ ₹ 25,000ಕ್ಕೆ ಬೇಡಿಕೆ ಇಟ್ಟಿದ್ದರು. ಆಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೂರೆ, ಲೋಕಾಯುಕ್ತ ಡಿವೈಎಸ್ಪಿ ಕಲಾವತಿ, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಎಚ್.ಎಸ್. ರಾಷ್ಟ್ರಪತಿ, ಪ್ರಭು ಬಿ. ಸೂರಿನ, ಸಿಬ್ಬಂದಿ ಆಂಜನೇಯ, ಸುಂದರೇಶ್, ಆಶಾ, ಮಲ್ಲಿಕಾರ್ಜುನ, ಲಿಂಗೇಶ್, ಧನರಾಜ್, ಮಂಜುನಾಥ್, ಗಿರೀಶ್, ಬಸವರಾಜ, ಜಂಷಿದ್ ಖಾನಂ ಅವರ ತಂಡ ಕಾರ್ಯಾಚರಣೆ ನಡೆಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>