<p><strong>ನ್ಯಾಮತಿ</strong>: ತಾಲ್ಲೂಕಿನ ಹೊನ್ನಾಳಿ ಶಿವಮೊಗ್ಗ ರಸ್ತೆಯ ಸಾಲಬಾಳು ಕ್ರಾಸ್ ಸಮೀಪ ಕಲ್ಬಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೋಗುವ ಕಚ್ಚಾ ರಸ್ತೆಯ ಪಕ್ಕದ ಅರಣ್ಯ ಇಲಾಖೆಗೆ ಸೇರಿದ ಅರಣ್ಯ ಪ್ರದೇಶದಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿ ಇದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.</p><p>ಅರ್ಬಾಜ್ ಖಾನ್ ಶಿವಮೊಗ್ಗ, ಶಂಕರನಾಯ್ಕ ಹೊಸಜೋಗ, ಮಹಮ್ಮದ್ ಹುಸೈನ್ ರಝ ಶಿವಮೊಗ್ಗ, ಜಾಫರ್ ಸಾದೀಖ್ ಶಿವಮೊಗ್ಗ, ಮಹಮ್ಮದ್ ರೂಹಿತ್ ರಾಮನಗರ ಬಂಧಿತ ಆರೋಪಿಗಳು.</p><p>ನ್ಯಾಮತಿ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಅವರು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ 3 ಕೆ.ಜಿ.154 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್, ಎರಡು ಬೈಕ್, ಒಂದು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ ಮತ್ತು ಖಾಲಿ ಸಣ್ಣ ಪಾರದರ್ಶಕ ಪ್ಲಾಸ್ಟಿಕ್ ಜಿಪ್ ಕವರ್ನ ಬಂಡಲ್ನ್ನು ವಶಡಿಸಿಕೊಂಡಿದ್ದು ಒಟ್ಟು ಅದರ ಮೌಲ್ಯ 3,,20,೦೦೦ ಅಂದಾಜಿಸಲಾಗಿದೆ.</p><p>ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್. ರವಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ತಾಲ್ಲೂಕಿನ ಹೊನ್ನಾಳಿ ಶಿವಮೊಗ್ಗ ರಸ್ತೆಯ ಸಾಲಬಾಳು ಕ್ರಾಸ್ ಸಮೀಪ ಕಲ್ಬಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೋಗುವ ಕಚ್ಚಾ ರಸ್ತೆಯ ಪಕ್ಕದ ಅರಣ್ಯ ಇಲಾಖೆಗೆ ಸೇರಿದ ಅರಣ್ಯ ಪ್ರದೇಶದಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿ ಇದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.</p><p>ಅರ್ಬಾಜ್ ಖಾನ್ ಶಿವಮೊಗ್ಗ, ಶಂಕರನಾಯ್ಕ ಹೊಸಜೋಗ, ಮಹಮ್ಮದ್ ಹುಸೈನ್ ರಝ ಶಿವಮೊಗ್ಗ, ಜಾಫರ್ ಸಾದೀಖ್ ಶಿವಮೊಗ್ಗ, ಮಹಮ್ಮದ್ ರೂಹಿತ್ ರಾಮನಗರ ಬಂಧಿತ ಆರೋಪಿಗಳು.</p><p>ನ್ಯಾಮತಿ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಅವರು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ 3 ಕೆ.ಜಿ.154 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್, ಎರಡು ಬೈಕ್, ಒಂದು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ ಮತ್ತು ಖಾಲಿ ಸಣ್ಣ ಪಾರದರ್ಶಕ ಪ್ಲಾಸ್ಟಿಕ್ ಜಿಪ್ ಕವರ್ನ ಬಂಡಲ್ನ್ನು ವಶಡಿಸಿಕೊಂಡಿದ್ದು ಒಟ್ಟು ಅದರ ಮೌಲ್ಯ 3,,20,೦೦೦ ಅಂದಾಜಿಸಲಾಗಿದೆ.</p><p>ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್. ರವಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>