<p><strong>ಮಾಯಕೊಂಡ</strong>: ಕೃಷಿ ಭಾಗ್ಯ ಯೋಜನೆ ರೈತರಿಗೆ ವರದಾನವಾಗಿದೆ. ಯೋಜನೆಯ ಸದ್ಬಳಕೆಯಿಂದ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದರು. </p>.<p>ಸಮೀಪದ ಆನಗೋಡು ಗ್ರಾಮದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ 2023-24 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ರೈತ ವಿಶ್ವವಿಜೇತ ಎಂಬುವವರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. </p>.<p>ಮಳೆಯಾಧಾರಿತ ಕೃಷಿ ಮಾಡುವ ರೈತರಿಗೆ ನೀರಿನ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಕೃಷಿ ಭಾಗ್ಯ ಯೋಜನೆ ಪ್ರಾರಂಭಿಸಿದೆ. ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿಹೊಂಡವನ್ನು ನಿರ್ಮಿಸಿಕೊಂಡು ನೀರಿನ ಸಮಸ್ಯೆಯನ್ನು ದೂರವಾಗಿಸಬೇಕು ಎಂದರು. </p>.<p>ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ಶ್ರೀಧರ್ಮೂರ್ತಿ ಮಾತನಾಡಿ, ಇಲಾಖೆ ರೈತರ ನೆರವಿಗೆ ಸದಾ ಇರುತ್ತದೆ. ರೈತರು ಅಧಿಕಾರಿಗಳ ಸಲಹೆ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದರು. </p>.<p>ಈ ವೇಳೆ ಕೃಷಿ ಅಧಿಕಾರಿ ಶ್ರೀನಿವಾಸ್ ಆರ್., ಎಸ್.ಬಿ. ಯೋಗೇಶಪ್ಪ, ಹುಣ್ಸೆಹಳ್ಳಿ ಚಂದ್ರಪ್ಪ, ಆರ್.ವಿ.ತೇಜವರ್ಧನ್, ರೈತ ವಿಶ್ವವಿಜೇತ ಆನಗೋಡು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಯಕೊಂಡ</strong>: ಕೃಷಿ ಭಾಗ್ಯ ಯೋಜನೆ ರೈತರಿಗೆ ವರದಾನವಾಗಿದೆ. ಯೋಜನೆಯ ಸದ್ಬಳಕೆಯಿಂದ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದರು. </p>.<p>ಸಮೀಪದ ಆನಗೋಡು ಗ್ರಾಮದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ 2023-24 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ರೈತ ವಿಶ್ವವಿಜೇತ ಎಂಬುವವರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. </p>.<p>ಮಳೆಯಾಧಾರಿತ ಕೃಷಿ ಮಾಡುವ ರೈತರಿಗೆ ನೀರಿನ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಕೃಷಿ ಭಾಗ್ಯ ಯೋಜನೆ ಪ್ರಾರಂಭಿಸಿದೆ. ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿಹೊಂಡವನ್ನು ನಿರ್ಮಿಸಿಕೊಂಡು ನೀರಿನ ಸಮಸ್ಯೆಯನ್ನು ದೂರವಾಗಿಸಬೇಕು ಎಂದರು. </p>.<p>ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ಶ್ರೀಧರ್ಮೂರ್ತಿ ಮಾತನಾಡಿ, ಇಲಾಖೆ ರೈತರ ನೆರವಿಗೆ ಸದಾ ಇರುತ್ತದೆ. ರೈತರು ಅಧಿಕಾರಿಗಳ ಸಲಹೆ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದರು. </p>.<p>ಈ ವೇಳೆ ಕೃಷಿ ಅಧಿಕಾರಿ ಶ್ರೀನಿವಾಸ್ ಆರ್., ಎಸ್.ಬಿ. ಯೋಗೇಶಪ್ಪ, ಹುಣ್ಸೆಹಳ್ಳಿ ಚಂದ್ರಪ್ಪ, ಆರ್.ವಿ.ತೇಜವರ್ಧನ್, ರೈತ ವಿಶ್ವವಿಜೇತ ಆನಗೋಡು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>