<p>ದಾವಣಗೆರೆ: ಜಿಲ್ಲೆಯ ರಾಣೇಬೆನ್ನೂರು ಸಮೀಪದ ಚಳಗೇರಿ ಬಳಿ ಬುಧವಾರ ರಾತ್ರಿ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ತಂದೆಯೇ ಕೊಲೆ ಮಾಡಿದ್ದಾರೆ.</p>.<p>ನಗರದ ಆಂಜನೇಯ ಬಡಾವಣೆಯ ನಿವಾಸಿ ಅಮರ್ ಕೊಲೆ ಮಾಡಿದ ವ್ಯಕ್ತಿ. ನಾಲ್ಕೂವರೆ ವರ್ಷದ ಅವಳಿ ಮಕ್ಕಳಾದ ಅದ್ವೈತ್ ಹಾಗೂ ಅನ್ವಿತ್ ಕೊಲೆಯಾದವರು.</p>.<p>ಗೋಕಾಕ್ ಮೂಲದ ಅಮರ್ ಹರಿಹರ ಸಮೀಪದ ಕಾರ್ಖಾನೆಯೊಂದರಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಜಯಲಕ್ಷ್ಮಿ ತಮ್ಮ ತಂದೆಯ ಸಾವಿನ ಹಿನ್ನೆಲೆಯಲ್ಲಿ ತವರೂರು ವಿಜಯಪುರಕ್ಕೆ ತೆರಳಿದ್ದರು. ದಾವಣಗೆರೆಯ ವಿದ್ಯಾನಗರ ಠಾಣೆಯ ಪೊಲೀಸರು ಆರೋಪಿ ತಂದೆಯನ್ನು ಗುರುವಾರ ಬಂಧಿಸಿದ್ದಾರೆ.</p>.<p>ಅಜ್ಜಿ ಸಾವಿತ್ರಮ್ಮ ಅವರ ಜೊತೆಯಲ್ಲಿ ಮಲಗಿದ್ದ ಇಬ್ಬರೂ ಮಕ್ಕಳನ್ನು ರಾತ್ರಿ ಕಾರ್ನಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಸಮೀಪದ ಟೋಲ್ ಹತ್ತಿರ ಕರೆದುಕೊಂಡು ಹೋದ ಅಮರ್, ಅಲ್ಲಿನ ಸರ್ವೀಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಮಕ್ಕಳ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.</p>.<p>‘ಬುದ್ದಿಮಾಂದ್ಯರಾದ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಎಲ್ಲದಕ್ಕೂ ಹಠ ಮಾಡುತ್ತಿದ್ದರು. ಇದರಿಂದ ಬೇಸತ್ತು ಕೊಲೆ ಮಾಡಿದ್ದೇನೆ’ ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಜಿಲ್ಲೆಯ ರಾಣೇಬೆನ್ನೂರು ಸಮೀಪದ ಚಳಗೇರಿ ಬಳಿ ಬುಧವಾರ ರಾತ್ರಿ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ತಂದೆಯೇ ಕೊಲೆ ಮಾಡಿದ್ದಾರೆ.</p>.<p>ನಗರದ ಆಂಜನೇಯ ಬಡಾವಣೆಯ ನಿವಾಸಿ ಅಮರ್ ಕೊಲೆ ಮಾಡಿದ ವ್ಯಕ್ತಿ. ನಾಲ್ಕೂವರೆ ವರ್ಷದ ಅವಳಿ ಮಕ್ಕಳಾದ ಅದ್ವೈತ್ ಹಾಗೂ ಅನ್ವಿತ್ ಕೊಲೆಯಾದವರು.</p>.<p>ಗೋಕಾಕ್ ಮೂಲದ ಅಮರ್ ಹರಿಹರ ಸಮೀಪದ ಕಾರ್ಖಾನೆಯೊಂದರಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಜಯಲಕ್ಷ್ಮಿ ತಮ್ಮ ತಂದೆಯ ಸಾವಿನ ಹಿನ್ನೆಲೆಯಲ್ಲಿ ತವರೂರು ವಿಜಯಪುರಕ್ಕೆ ತೆರಳಿದ್ದರು. ದಾವಣಗೆರೆಯ ವಿದ್ಯಾನಗರ ಠಾಣೆಯ ಪೊಲೀಸರು ಆರೋಪಿ ತಂದೆಯನ್ನು ಗುರುವಾರ ಬಂಧಿಸಿದ್ದಾರೆ.</p>.<p>ಅಜ್ಜಿ ಸಾವಿತ್ರಮ್ಮ ಅವರ ಜೊತೆಯಲ್ಲಿ ಮಲಗಿದ್ದ ಇಬ್ಬರೂ ಮಕ್ಕಳನ್ನು ರಾತ್ರಿ ಕಾರ್ನಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಸಮೀಪದ ಟೋಲ್ ಹತ್ತಿರ ಕರೆದುಕೊಂಡು ಹೋದ ಅಮರ್, ಅಲ್ಲಿನ ಸರ್ವೀಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಮಕ್ಕಳ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.</p>.<p>‘ಬುದ್ದಿಮಾಂದ್ಯರಾದ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಎಲ್ಲದಕ್ಕೂ ಹಠ ಮಾಡುತ್ತಿದ್ದರು. ಇದರಿಂದ ಬೇಸತ್ತು ಕೊಲೆ ಮಾಡಿದ್ದೇನೆ’ ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>