<p><strong>ದಾವಣಗೆರೆ:</strong> ಕಂದಾಯ ಇಲಾಖೆ ಅನುಷ್ಠಾನಕ್ಕೆ ತಂದಿರುವ ಕಾಗದ ರಹಿತ ಆಸ್ತಿ ನೋಂದಣಿ ವಂಚನೆಗೆ ರಹದಾರಿ ಮಾಡಿಕೊಡಲಿದ್ದು, ಭೂಮಾಫಿಯಾಗೆ ಅವಕಾಶ ಕಲ್ಪಿಸಲಿದೆ ಎಂದು ಜಿಲ್ಲಾ ದಸ್ತಾವೇಜು (ಪತ್ರ) ಬರಹಗಾರರ ಸಂಘದ ಅಧ್ಯಕ್ಷ ಡಿ.ಕೆ. ಸಂಗಮೇಶ್ ಎಲಿಗಾರ್ ಆರೋಪಿಸಿದರು.</p>.<p>‘ಕಾಗದ ರಹಿತ ಆಸ್ತಿ ನೋಂದಣಿಯಲ್ಲಿ ಖರೀದಿದಾರರು ಹಾಗೂ ಮಾರಾಟಗಾರರ ಚಿತ್ರ ಇರುವುದಿಲ್ಲ. ಸಹಿ ಹಾಕುವ ವ್ಯವಸ್ಥೆ ಕೂಡ ರದ್ದುಪಡಿಸಲಾಗಿದೆ. ಕೇವಲ ಮೊಬೈಲ್ ಫೋನ್ ಒಟಿಪಿ ಪಡೆದು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಇದು ಅಕ್ರಮಗಳಿಗೆ ಎಡೆ ಮಾಡಿಕೊಡುತ್ತದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದಲ್ಲಿ ಶೇ 60ಕ್ಕೂ ಹೆಚ್ಚು ರೈತ ಕುಟುಂಬಗಳಿವೆ. ಕೃಷಿ ಭೂಮಿಯನ್ನು ಹೊಂದಿರುವ ರೈತರು ಇದರಿಂದ ಸಮಸ್ಯೆಗೆ ಸಿಲುಕಲಿದ್ದಾರೆ. ವಿದೇಶದ ಈ ವ್ಯವಸ್ಥೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕರ್ನಾಟಕಕ್ಕೆ ತಂದು ಪ್ರಮಾದ ಎಸಗಿದ್ದಾರೆ. ಇದರ ವಿರುದ್ಧ ಮೇ 11ರಂದು ಬೆಳಿಗ್ಗೆ 10ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ನೋಂದಣಾಧಿಕಾರಿ ಕಚೇರಿಯವರೆಗೆ ದ್ವಿಚಕ್ರ ವಾಹನಗಳ ಜಾಥಾ ನಡೆಸಲಾಗುವುದು’ ಎಂದು ವಿವರಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾನಂದ, ಖಜಾಂಚಿ ಎಸ್.ರಾಜಶೇಖರ್, ಡಿ.ಆರ್.ಗಿರಿರಾಜು, ಧನರಾಜ್, ಕರಿಬಸಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-43-2141343860</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕಂದಾಯ ಇಲಾಖೆ ಅನುಷ್ಠಾನಕ್ಕೆ ತಂದಿರುವ ಕಾಗದ ರಹಿತ ಆಸ್ತಿ ನೋಂದಣಿ ವಂಚನೆಗೆ ರಹದಾರಿ ಮಾಡಿಕೊಡಲಿದ್ದು, ಭೂಮಾಫಿಯಾಗೆ ಅವಕಾಶ ಕಲ್ಪಿಸಲಿದೆ ಎಂದು ಜಿಲ್ಲಾ ದಸ್ತಾವೇಜು (ಪತ್ರ) ಬರಹಗಾರರ ಸಂಘದ ಅಧ್ಯಕ್ಷ ಡಿ.ಕೆ. ಸಂಗಮೇಶ್ ಎಲಿಗಾರ್ ಆರೋಪಿಸಿದರು.</p>.<p>‘ಕಾಗದ ರಹಿತ ಆಸ್ತಿ ನೋಂದಣಿಯಲ್ಲಿ ಖರೀದಿದಾರರು ಹಾಗೂ ಮಾರಾಟಗಾರರ ಚಿತ್ರ ಇರುವುದಿಲ್ಲ. ಸಹಿ ಹಾಕುವ ವ್ಯವಸ್ಥೆ ಕೂಡ ರದ್ದುಪಡಿಸಲಾಗಿದೆ. ಕೇವಲ ಮೊಬೈಲ್ ಫೋನ್ ಒಟಿಪಿ ಪಡೆದು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಇದು ಅಕ್ರಮಗಳಿಗೆ ಎಡೆ ಮಾಡಿಕೊಡುತ್ತದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದಲ್ಲಿ ಶೇ 60ಕ್ಕೂ ಹೆಚ್ಚು ರೈತ ಕುಟುಂಬಗಳಿವೆ. ಕೃಷಿ ಭೂಮಿಯನ್ನು ಹೊಂದಿರುವ ರೈತರು ಇದರಿಂದ ಸಮಸ್ಯೆಗೆ ಸಿಲುಕಲಿದ್ದಾರೆ. ವಿದೇಶದ ಈ ವ್ಯವಸ್ಥೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕರ್ನಾಟಕಕ್ಕೆ ತಂದು ಪ್ರಮಾದ ಎಸಗಿದ್ದಾರೆ. ಇದರ ವಿರುದ್ಧ ಮೇ 11ರಂದು ಬೆಳಿಗ್ಗೆ 10ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ನೋಂದಣಾಧಿಕಾರಿ ಕಚೇರಿಯವರೆಗೆ ದ್ವಿಚಕ್ರ ವಾಹನಗಳ ಜಾಥಾ ನಡೆಸಲಾಗುವುದು’ ಎಂದು ವಿವರಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾನಂದ, ಖಜಾಂಚಿ ಎಸ್.ರಾಜಶೇಖರ್, ಡಿ.ಆರ್.ಗಿರಿರಾಜು, ಧನರಾಜ್, ಕರಿಬಸಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-43-2141343860</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>