<p>ದಾವಣಗೆರೆ: ‘ಧೂಡಾ‘ ಅಧ್ಯಕ್ಷ ದಿನೇಶ್ ಶೆಟ್ಟಿ ಅವರು ಶಾಮನೂರು ಕುಟುಂಬವನ್ನು ಓಲೈಸುವ ಉದ್ದೇಶದಿಂದ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೊಗ್ಗಳ್ಳಿ ವೀರೇಶ್ ಆರೋಪಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ತಮ್ಮ ಕುರ್ಚಿಗೆ ಕುತ್ತು ಬರುವ ಮುನ್ಸೂಚನೆ ದಿನೇಶ್ ಅವರಿಗೆ ಸಿಕ್ಕಿದ್ದು, ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಶಾಸಕರ ವಿರುದ್ಧ ವಿನಾಕಾರಣ ಆರೋಪ ಹೊರಿಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶವಿಲ್ಲ’ ಎಂದರು.</p>.<p>‘ನಗರದಲ್ಲಿ ಜರ್ಮನ್ ಶೈಲಿಯ ವೃತ್ತ ನಿರ್ಮಾಣ, ಗುಂಡಿ ವೃತ್ತದ ನವೀಕರಣ ಹೆಸರಿನಲ್ಲಿ ಹಣವನ್ನು ಪೋಲು ಮಾಡಲಾಗುತ್ತಿದೆ. ಈ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಸಬಹುದಿತ್ತು’ ಎಂದು ಅವರು ಹೇಳಿದರು.</p>.<p>‘ಉಪಚುನಾವಣೆಯಲ್ಲಿ ಟಿಕೆಟ್ ಕೇಳಿದ ಅಲ್ಪಸಂಖ್ಯಾತರ ಮೇಲೆ ಕಾಂಗ್ರೆಸ್ ಗದಾಪ್ರಹಾರ ಮಾಡಿದೆ. ಇದನ್ನು ನೋಡಿದರೆ ಪಕ್ಷದ ಮುಖಂಡರು ಸೋಲನ್ನು ಒಪ್ಪಿಕೊಂಡಂತೆ ಕಾಣುತ್ತಿದೆ’ ಎಂದು ಆರೋಪಿಸಿದರು.</p>.<p>ಅಣಬೇರು ಜೀವನ್ಮೂರ್ತಿ, ವಸಂತ್ ಕುಮಾರ್, ಎ.ವೈ ಪ್ರಕಾಶ್, ಕಾಡಪ್ಪ, ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-69490330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಧೂಡಾ‘ ಅಧ್ಯಕ್ಷ ದಿನೇಶ್ ಶೆಟ್ಟಿ ಅವರು ಶಾಮನೂರು ಕುಟುಂಬವನ್ನು ಓಲೈಸುವ ಉದ್ದೇಶದಿಂದ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೊಗ್ಗಳ್ಳಿ ವೀರೇಶ್ ಆರೋಪಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ತಮ್ಮ ಕುರ್ಚಿಗೆ ಕುತ್ತು ಬರುವ ಮುನ್ಸೂಚನೆ ದಿನೇಶ್ ಅವರಿಗೆ ಸಿಕ್ಕಿದ್ದು, ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಶಾಸಕರ ವಿರುದ್ಧ ವಿನಾಕಾರಣ ಆರೋಪ ಹೊರಿಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶವಿಲ್ಲ’ ಎಂದರು.</p>.<p>‘ನಗರದಲ್ಲಿ ಜರ್ಮನ್ ಶೈಲಿಯ ವೃತ್ತ ನಿರ್ಮಾಣ, ಗುಂಡಿ ವೃತ್ತದ ನವೀಕರಣ ಹೆಸರಿನಲ್ಲಿ ಹಣವನ್ನು ಪೋಲು ಮಾಡಲಾಗುತ್ತಿದೆ. ಈ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಸಬಹುದಿತ್ತು’ ಎಂದು ಅವರು ಹೇಳಿದರು.</p>.<p>‘ಉಪಚುನಾವಣೆಯಲ್ಲಿ ಟಿಕೆಟ್ ಕೇಳಿದ ಅಲ್ಪಸಂಖ್ಯಾತರ ಮೇಲೆ ಕಾಂಗ್ರೆಸ್ ಗದಾಪ್ರಹಾರ ಮಾಡಿದೆ. ಇದನ್ನು ನೋಡಿದರೆ ಪಕ್ಷದ ಮುಖಂಡರು ಸೋಲನ್ನು ಒಪ್ಪಿಕೊಂಡಂತೆ ಕಾಣುತ್ತಿದೆ’ ಎಂದು ಆರೋಪಿಸಿದರು.</p>.<p>ಅಣಬೇರು ಜೀವನ್ಮೂರ್ತಿ, ವಸಂತ್ ಕುಮಾರ್, ಎ.ವೈ ಪ್ರಕಾಶ್, ಕಾಡಪ್ಪ, ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-69490330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>