<p><strong>ದಾವಣಗೆರೆ:</strong> ‘ಕುಡಿಯುವ ನೀರು ಪೂರೈಕೆ ಹಾಗೂ ಮೂಲಸೌಲಭ್ಯಕ್ಕೆ ಸಂಬಂಧಿಸಿದ ದೂರುಗಳು ಜನಪ್ರತಿನಿಧಿಗಳ ಬಳಿಗೆ ಬರಬಾರದು. ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯತೆ ಕಾಪಾಡಿಕೊಂಡು ಕೆಲಸ ಮಾಡಬೇಕು’ ಎಂದು ಶಾಸಕ ಸಮರ್ಥ್ ಶಾಮನೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಇಲ್ಲಿನ ಪಶುಸಂಗೋಪನಾ ಮತ್ತು ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀರಿನ ಸಮಸ್ಯೆ ಹಾಗೂ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ಇನ್ನೂ ಕೆಲವು ಪ್ರಗತಿಯಲ್ಲಿರುವುದು ಗಮನಕ್ಕೆ ಬಂದಿದೆ. ಇಂತಹ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಹೊಸ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ನಡೆಸಬೇಕು’ ಎಂದರು.</p>.<p>‘ಕುಡಿಯುವ ನೀರು, ವಿದ್ಯುತ್, ಸ್ಮಶಾನ ಸೇರಿ ಹಲವು ಸಮಸ್ಯೆಗಳು ಕ್ಷೇತ್ರದಲ್ಲಿ ಇರುವುದು ಗೊತ್ತಾಗಿದೆ. ಜನರು ಅಹವಾಲುಗಳನ್ನು ಹಿಡಿದು ಶಾಸಕರ ಬಳಿಗೆ ಬರುತ್ತಿದ್ದಾರೆ. ದೂರವಾಣಿ ಮೂಲಕವೂ ಗಮನಕ್ಕೆ ತರುತ್ತಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು’ ಎಂದು ತಾಕೀತು ಮಾಡಿದರು.</p>.<p>ಸ್ಮಶಾನ ನಿರ್ಮಾಣಕ್ಕೆ ಭೂಮಿ: ‘ಕೈದಾಳೆ ಕ್ಯಾಂಪ್ ಹೊಸ ಗ್ರಾಮವಾಗಿ ಘೋಷಣೆಯಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ಸ್ಮಶಾನ ನಿರ್ಮಾಣಕ್ಕೆ ಅರ್ಧ ಎಕರೆ ಭೂಮಿ ಬೇಕಿದೆ. ಇಲ್ಲಿ ಒಂದು ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಇದನ್ನು ಕೂಡಲೇ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು’ ಎಂದು ತಹಶಿಲ್ದಾರ್ ಎಂ.ಬಿ. ಅಶ್ವತ್ಥ್ ವಿವರಿಸಿದರು.</p>.<p>‘ಕುಕ್ಕವಾಡ ಗ್ರಾಮದ ಸ್ಮಶಾನ ಒತ್ತುವರಿಯನ್ನು ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. ಇದನ್ನು ರಕ್ಷಣೆ ಮಾಡಿಕೊಳ್ಳುವ ಹೊಣೆ ಪಂಚಾಯಿತಿಗೆ ಸೇರಿದ್ದು. ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಗೆ 2 ಎಕರೆ ಅಡಿಕೆ ಹಾಗೂ 4 ಎಕರೆ ಭತ್ತಕ್ಕೆ ಹಾನಿಯಾಗಿದೆ. ಮುದಹದಡಿ ಬಳಿ ಸಿಡಿಲಿಗೆ ಬಲಿಯಾದ ಕುರಿಗಾಹಿ ಕುಟುಂಬಕ್ಕೆ ಪರಿಹಾರ ವಿತರಿಸುವ ಸಿದ್ಧತೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ವಸತಿ, ‘ಇ–ಸ್ವತ್ತಿ’ಗೆ ಒತ್ತು: ‘ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ವಸತಿ ಸೌಲಭ್ಯಕ್ಕೆ ಹೆಚ್ಚು ಒತ್ತು ನೀಡಿದ್ದರು. ವಸತಿ ಸೌಲಭ್ಯಕ್ಕೆ ಕ್ಷೇತ್ರದಲ್ಲಿ ಸಾಕಷ್ಟು ಬೇಡಿಕೆ ಇದೆ. ರಾಜ್ಯ ಸರ್ಕಾರದ ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ನಿವೇಶನ ಇರುವವರಿಗೆ ಈ ಸೌಲಭ್ಯ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ ಭೋವಿ ತಿಳಿಸಿದರು.</p>.<p>‘ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ‘ಇ–ಸ್ವತ್ತು’ಗಳನ್ನು ನೀಡಲಾಗುತ್ತಿದೆ. ಈವರೆಗೆ ಇದ್ದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಕಂದಾಯ ಭೂಮಿಯಲ್ಲಿರುವ ಮನೆಗಳಿಗೆ ‘ಇ–ಸ್ವತ್ತು’ ವಿತರಿಸುವಲ್ಲಿ ಕೆಲ ಅಡತಡೆಗಳು ಎದುರಾಗುತ್ತಿವೆ. ಆದರೂ, ಜನರನ್ನು ವಿಶ್ವಾಸಕ್ಕೆ ಪಡೆದು ‘ಇ–ಸ್ವತ್ತು’ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಮಹೇಶ್ವರಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1677066181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಕುಡಿಯುವ ನೀರು ಪೂರೈಕೆ ಹಾಗೂ ಮೂಲಸೌಲಭ್ಯಕ್ಕೆ ಸಂಬಂಧಿಸಿದ ದೂರುಗಳು ಜನಪ್ರತಿನಿಧಿಗಳ ಬಳಿಗೆ ಬರಬಾರದು. ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯತೆ ಕಾಪಾಡಿಕೊಂಡು ಕೆಲಸ ಮಾಡಬೇಕು’ ಎಂದು ಶಾಸಕ ಸಮರ್ಥ್ ಶಾಮನೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಇಲ್ಲಿನ ಪಶುಸಂಗೋಪನಾ ಮತ್ತು ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀರಿನ ಸಮಸ್ಯೆ ಹಾಗೂ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ಇನ್ನೂ ಕೆಲವು ಪ್ರಗತಿಯಲ್ಲಿರುವುದು ಗಮನಕ್ಕೆ ಬಂದಿದೆ. ಇಂತಹ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಹೊಸ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ನಡೆಸಬೇಕು’ ಎಂದರು.</p>.<p>‘ಕುಡಿಯುವ ನೀರು, ವಿದ್ಯುತ್, ಸ್ಮಶಾನ ಸೇರಿ ಹಲವು ಸಮಸ್ಯೆಗಳು ಕ್ಷೇತ್ರದಲ್ಲಿ ಇರುವುದು ಗೊತ್ತಾಗಿದೆ. ಜನರು ಅಹವಾಲುಗಳನ್ನು ಹಿಡಿದು ಶಾಸಕರ ಬಳಿಗೆ ಬರುತ್ತಿದ್ದಾರೆ. ದೂರವಾಣಿ ಮೂಲಕವೂ ಗಮನಕ್ಕೆ ತರುತ್ತಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು’ ಎಂದು ತಾಕೀತು ಮಾಡಿದರು.</p>.<p>ಸ್ಮಶಾನ ನಿರ್ಮಾಣಕ್ಕೆ ಭೂಮಿ: ‘ಕೈದಾಳೆ ಕ್ಯಾಂಪ್ ಹೊಸ ಗ್ರಾಮವಾಗಿ ಘೋಷಣೆಯಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ಸ್ಮಶಾನ ನಿರ್ಮಾಣಕ್ಕೆ ಅರ್ಧ ಎಕರೆ ಭೂಮಿ ಬೇಕಿದೆ. ಇಲ್ಲಿ ಒಂದು ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಇದನ್ನು ಕೂಡಲೇ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು’ ಎಂದು ತಹಶಿಲ್ದಾರ್ ಎಂ.ಬಿ. ಅಶ್ವತ್ಥ್ ವಿವರಿಸಿದರು.</p>.<p>‘ಕುಕ್ಕವಾಡ ಗ್ರಾಮದ ಸ್ಮಶಾನ ಒತ್ತುವರಿಯನ್ನು ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. ಇದನ್ನು ರಕ್ಷಣೆ ಮಾಡಿಕೊಳ್ಳುವ ಹೊಣೆ ಪಂಚಾಯಿತಿಗೆ ಸೇರಿದ್ದು. ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಗೆ 2 ಎಕರೆ ಅಡಿಕೆ ಹಾಗೂ 4 ಎಕರೆ ಭತ್ತಕ್ಕೆ ಹಾನಿಯಾಗಿದೆ. ಮುದಹದಡಿ ಬಳಿ ಸಿಡಿಲಿಗೆ ಬಲಿಯಾದ ಕುರಿಗಾಹಿ ಕುಟುಂಬಕ್ಕೆ ಪರಿಹಾರ ವಿತರಿಸುವ ಸಿದ್ಧತೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ವಸತಿ, ‘ಇ–ಸ್ವತ್ತಿ’ಗೆ ಒತ್ತು: ‘ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ವಸತಿ ಸೌಲಭ್ಯಕ್ಕೆ ಹೆಚ್ಚು ಒತ್ತು ನೀಡಿದ್ದರು. ವಸತಿ ಸೌಲಭ್ಯಕ್ಕೆ ಕ್ಷೇತ್ರದಲ್ಲಿ ಸಾಕಷ್ಟು ಬೇಡಿಕೆ ಇದೆ. ರಾಜ್ಯ ಸರ್ಕಾರದ ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ನಿವೇಶನ ಇರುವವರಿಗೆ ಈ ಸೌಲಭ್ಯ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ ಭೋವಿ ತಿಳಿಸಿದರು.</p>.<p>‘ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ‘ಇ–ಸ್ವತ್ತು’ಗಳನ್ನು ನೀಡಲಾಗುತ್ತಿದೆ. ಈವರೆಗೆ ಇದ್ದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಕಂದಾಯ ಭೂಮಿಯಲ್ಲಿರುವ ಮನೆಗಳಿಗೆ ‘ಇ–ಸ್ವತ್ತು’ ವಿತರಿಸುವಲ್ಲಿ ಕೆಲ ಅಡತಡೆಗಳು ಎದುರಾಗುತ್ತಿವೆ. ಆದರೂ, ಜನರನ್ನು ವಿಶ್ವಾಸಕ್ಕೆ ಪಡೆದು ‘ಇ–ಸ್ವತ್ತು’ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಮಹೇಶ್ವರಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1677066181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>