<p><strong>ದಾವಣಗೆರೆ</strong>: ‘ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಆಗ್ರಹಿಸಿದರು.</p>.<p>‘ಯುದ್ಧ ಪ್ರಾರಂಭವಾಗಿ ಹಲವು ತಿಂಗಳು ಕಳೆದಿದ್ದರೂ, ಪಂಚ ರಾಜ್ಯಗಳ ಚುನಾವಣೆ ಮುಗಿದ ತಕ್ಷಣವೇ ಜ್ಞಾನೋದಯ ವಾಗಿ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆಯ ಜೊತೆಗೆ ದರ ಹೆಚ್ಚಳ ಮಾಡಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ವಿದೇಶಾಂಗ ವ್ಯವಹಾರ, ಹಣಕಾಸು ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ವೈಫಲ್ಯ ಕಂಡಿರುವ ಮೋದಿ ಅವರು ಈ ದೇಶದ ಜನರಿಗೆ ಒಳಿತು ಮಾಡುವ ಉದ್ದೇಶವಿದ್ದರೆ ತಕ್ಷಣವೇ ರಾಜೀನಾಮೆ ನೀಡಲಿ. ಅವರು ಮುಂದುವರಿದರೆ ದೇಶಕ್ಕೇ ಬಹು ದೊಡ್ಡ ಅಪಾಯ ಎದುರಾಗಲಿದೆ’ ಎಂದರು.</p>.<p>‘ದೇಶದ ಜನರಿಗೆ ಮಿತವ್ಯಯದ ಉಪದೇಶ ಮಾಡುವ ಮೋದಿ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ 5 ದೇಶಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಅವರು ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಅದರಲ್ಲಿ ದೇಶದ ಹಿತಾಸಕ್ತಿ ಅಡಗಿರುವುದಿಲ್ಲ’ ಎಂದು ದೂರಿದರು.</p>.<p>‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ’ ಎಂದರು.</p>.<p>ಇಂಟಕ್ ಅಧ್ಯಕ್ಷ ಕೆ.ಎಂ. ಮಂಜುನಾಥ್, ಬಿ.ಎಚ್. ಉದಯ್ಕುಮಾರ್, ಡಿ. ಶಿವಕುಮಾರ್, ಡಿ. ಕೇಶವನಾಯ್ಕ, ಬಿ.ಎಸ್. ಸುರೇಶ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-43-1148137085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಆಗ್ರಹಿಸಿದರು.</p>.<p>‘ಯುದ್ಧ ಪ್ರಾರಂಭವಾಗಿ ಹಲವು ತಿಂಗಳು ಕಳೆದಿದ್ದರೂ, ಪಂಚ ರಾಜ್ಯಗಳ ಚುನಾವಣೆ ಮುಗಿದ ತಕ್ಷಣವೇ ಜ್ಞಾನೋದಯ ವಾಗಿ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆಯ ಜೊತೆಗೆ ದರ ಹೆಚ್ಚಳ ಮಾಡಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ವಿದೇಶಾಂಗ ವ್ಯವಹಾರ, ಹಣಕಾಸು ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ವೈಫಲ್ಯ ಕಂಡಿರುವ ಮೋದಿ ಅವರು ಈ ದೇಶದ ಜನರಿಗೆ ಒಳಿತು ಮಾಡುವ ಉದ್ದೇಶವಿದ್ದರೆ ತಕ್ಷಣವೇ ರಾಜೀನಾಮೆ ನೀಡಲಿ. ಅವರು ಮುಂದುವರಿದರೆ ದೇಶಕ್ಕೇ ಬಹು ದೊಡ್ಡ ಅಪಾಯ ಎದುರಾಗಲಿದೆ’ ಎಂದರು.</p>.<p>‘ದೇಶದ ಜನರಿಗೆ ಮಿತವ್ಯಯದ ಉಪದೇಶ ಮಾಡುವ ಮೋದಿ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ 5 ದೇಶಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಅವರು ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಅದರಲ್ಲಿ ದೇಶದ ಹಿತಾಸಕ್ತಿ ಅಡಗಿರುವುದಿಲ್ಲ’ ಎಂದು ದೂರಿದರು.</p>.<p>‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ’ ಎಂದರು.</p>.<p>ಇಂಟಕ್ ಅಧ್ಯಕ್ಷ ಕೆ.ಎಂ. ಮಂಜುನಾಥ್, ಬಿ.ಎಚ್. ಉದಯ್ಕುಮಾರ್, ಡಿ. ಶಿವಕುಮಾರ್, ಡಿ. ಕೇಶವನಾಯ್ಕ, ಬಿ.ಎಸ್. ಸುರೇಶ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-43-1148137085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>