<p><strong>ದಾವಣಗೆರೆ:</strong> ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ 12 ಮನೆಗಳು ಹಾಗೂ 79 ಎಕರೆ ಬೆಳೆ ಹಾನಿಯಾಗಿದೆ. ₹ 16 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಮಳೆಯ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಹರಿಹರ ತಾಲ್ಲೂಕಿನಲ್ಲಿ 70 ಎಕರೆಗೂ ಹೆಚ್ಚು ಪ್ರದೇಶದ ಭತ್ತದ ಬೆಳೆ ಚಾಪೆ ಹಾಸಿದೆ. ಅಡಿಕೆ, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಚನ್ನಗಿರಿ ತಾಲ್ಲೂಕಿನ 7, ಹರಿಹರ ತಾಲ್ಲೂಕಿನ 1 ಪಕ್ಕ ಮನೆ, ದಾವಣಗೆರೆ ತಾಲ್ಲೂಕಿನ 3 ಕಚ್ಚಾ ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<p>ಹರಿಹರ ತಾಲ್ಲೂಕಿನಲ್ಲಿ 12 ಮಿ.ಮೀ, ಹೊನ್ನಾಳಿ ತಾಲ್ಲೂಕಿನಲ್ಲಿ 9.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 7 ಮಿ.ಮೀ., ಚನ್ನಗಿರಿಯಲ್ಲಿ 6 ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 5 ಮಿ.ಮೀ ಮಳೆ ಸುರಿದಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ.</p>.<p>ನೆಲಕಚ್ಚಿದ ಅಪಾರ ಭತ್ತ (ಸಂತೇಬೆನ್ನೂರು ವರದಿ): ಸಮೀಪದ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಬೀಸಿದ ಬಿರುಗಾಳಿ ಹಾಗೂ ಮಳೆಗೆ ಅಪಾರ ಪ್ರಮಾಣದ ಭತ್ತ ನೆಲ ಕಚ್ಚಿದೆ. ಅಡಿಕೆ ಹಾಗೂ ತೆಂಗಿನ ಮರಗಳು ಉರುಳಿವೆ.</p>.<p>ಕೆಂಪನಹಳ್ಳಿ, ಈರಗನಹಳ್ಳಿ, ವೆಂಕಟೇಶ್ವರ ಕ್ಯಾಂಪ್, ಕಾಮನಹಳ್ಳಿ ಸುತ್ತಮುತ್ತಲಿನ ರೈತರ ಗದ್ದೆಗಳಲ್ಲಿ ಭತ್ತದ ಬೆಳೆ ಚಾಪೆ ಹಾಸಿದಂತಾಗಿದೆ.</p>.<p>‘ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ವರದಿ ಸಲ್ಲಿಸಲಾಗುವುದು’ ಎಂದು ತಹಶೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದರು.</p>.<p>ಕಂದಾಯ ನಿರೀಕ್ಷಕ ಶ್ರೀನಿವಾಸ್, ಕೃಷಿ ಅಧಿಕಾರಿ ಕುಮಾರ್, ಸಹಾಯಕ ತೋಟಗಾರಿಕೆ ಅಧಿಕಾರಿ ಏಕಾಂತ್ ಅವರು ಸ್ಥಳಕ್ಕೆ ಬೇಟಿ ನೀಡಿ ನಷ್ಟದ ಮಾಹಿತಿ ಸಂಗ್ರಹಿಸಿದರು.</p>.<p>ಹರಿಹರ ವರದಿ: ಮಳೆ ಹಾನಿಗೀಡಾದ ಸ್ಥಳಗಳಿಗೆ ಶಾಸಕ ಬಿ.ಪಿ. ಹರೀಶ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಷ್ಟ ಅನುಭವಿಸಿರುವ ರೈತರಿಗೆ ಹೆಚ್ಚಿನ ಪರಿಹಾರ ಸಿಗುವಂತೆ ಕೂಡಲೇ ಸಮಗ್ರ ವರದಿ ಸಿದ್ಧಪಡಿಸಿ ಮೇಲಧಿಕಾರಿಗಳಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಟರಾಜ್ ಇದ್ದರು.</p>.<p>ವ್ಯಾಪಕ ಹಾನಿ (ಕಡರನಾಯ್ಕನಹಳ್ಳಿ ವರದಿ): ಸಮೀಪದ ವಿವಿಧ ಗ್ರಾಮಗಳಲ್ಲಿ ಗಾಳಿ, ಬಿರು ಮಳೆಯಿಂದಾಗಿ ಮನೆಗಳು, ಅಡಿಕೆ ಹಾಗೂ ತೆಂಗಿನ ಮರಗಳು ನೆಲಕ್ಕುರುಳಿ ವ್ಯಾಪಕ ಹಾನಿಯಾಗಿದೆ. ಅಧಿಕಾರಿಗಳು ಹಾನಿಯ ಪರಿಶೀಲನೆ ಮಾಡಿದರು.</p>.<p>ಕೊಕ್ಕನೂರು, ಗೋವಿನ ಹಾಳು, ಹೊಳೆ ಸಿರಿಗೆರೆ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರಿಳಿದ್ದವು. ಅವುಗಳನ್ನು ಬದಲಾಯಿಸಿದ ಬೆಸ್ಕಾಂ ಸಿಬ್ಬಂದಿ, ವಿದ್ಯುತ್ ಸರಬರಾಜು ಪುನರ್ ಆರಂಭಿಸಿದರು.</p>.<p>ಕಡರನಾಯ್ಕನಹಳ್ಳಿ–ಕೊಕ್ಕನೂರು ಮಾರ್ಗ ಮಧ್ಯದಲ್ಲಿ ಮರವೊಂದು ನೆಲಕ್ಕುರುಳಿದೆ. ಇದನ್ನು ತೆರವುಗೊಳಿಸಲು ಯಾರೂ ಮುಂದೆ ಬಾರದ ಕಾರಣ, ದಿನಪೂರ್ತಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಹೊನ್ನಾಳಿ ವರದಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ತಡರಾತ್ರಿ ಉತ್ತಮ ಮಳೆಯಾಗಿದೆ. ಸಂಜೆ 7 ಗಂಟೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ, ಗಾಳಿ ಆರಂಭವಾಯಿತು. ರಾತ್ರಿ 12 ಗಂಟೆ ನಂತರ ಉತ್ತಮವಾಗಿ ಸುರಿಯಿತು.</p>.<p>ತುಂಗಭದ್ರಾ ನದಿನೀರಿನ ಮಟ್ಟ 5.2 ಮೀಟರ್ಗೆ ಏರಿಕೆಯಾಗಿದೆ.</p>.<p>ಯಾವುದೇ ಅನಾಹುತಗಳು ಸಂಭವಿಸಿಲ್ಲ ತಹಶೀಲ್ದಾರ್ ಸಿ. ರಾಜೇಶ್ಕುಮಾರ್ ಹೇಳಿದ್ದಾರೆ.</p>.<p>ಮಲೇಬೆನ್ನೂರು ವರದಿ: ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸುರಿದ ಗಾಳಿ, ಮಳೆಗೆ ಕುಣಿಬೆಳೆಕೆರೆ, ಜಿಗಳಿ ಹೊರವಲಯದ ಯಲವಟ್ಟಿ ರಸ್ತೆ ಅಕ್ಕಪಕ್ಕದ ಜಮೀನುಗಳು, ಆದಾಪುರ, ನಿಟ್ಟೂರು, ಸಂಕ್ಲೀಪುರ, ಗುಳದಹಳ್ಳಿ, ಭಾಗದಲ್ಲಿ ಅಂದಾಜು 40 ಎಕರೆ ಭತ್ತ ಜಲಾವೃತವಾಗಿದೆ.</p>.<p>ಕಟಾವಿಗೆ ಸಿದ್ಧವಾಗಿದ್ದ ಭತ್ತದ ಗದ್ದೆಗಳಲ್ಲಿ ನೀರು ನಿಂತಿರುವ ಕಾರಣ, ಭತ್ತದ ಒಕ್ಕಲು ಮುಂದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೊಸಳ್ಳಿ ಕರಿಬಸಪ್ಪ, ಸಂಕ್ಲೀಪುರದ ಚಂದ್ರು ಬೇಸರ ವ್ಯಕ್ತಪಡಿಸಿದರು.</p>.<p>ನಂದಿತಾವರೆ, ಕುಣಿಬೆಳಕೆರೆ ಭಾಗದಲ್ಲಿ ಬಿದ್ದಿದ್ದ ಕಂಬಗಳ ಬದಲಿಗೆ ಹೊಸದಾಗಿ ಅಳವಡಿಸಲಾಗುತ್ತಿದೆ. ತಂತಿ ಜೋಡಣೆ ಕಾರ್ಯ ಭರದಿಂದ ನಡೆಯಿತು.</p>.<p>ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಮರೋಪಾದಿಯಲ್ಲಿ ಕೆಲಸ ಮಾಡಿಸಲಾಗುತ್ತಿದೆ ಎಂದು ಬೆಸ್ಕಾಂ ಶಾಖಾಧಿಖಾರಿ ಮೇಘರಾಜ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-648536700</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ 12 ಮನೆಗಳು ಹಾಗೂ 79 ಎಕರೆ ಬೆಳೆ ಹಾನಿಯಾಗಿದೆ. ₹ 16 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಮಳೆಯ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಹರಿಹರ ತಾಲ್ಲೂಕಿನಲ್ಲಿ 70 ಎಕರೆಗೂ ಹೆಚ್ಚು ಪ್ರದೇಶದ ಭತ್ತದ ಬೆಳೆ ಚಾಪೆ ಹಾಸಿದೆ. ಅಡಿಕೆ, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಚನ್ನಗಿರಿ ತಾಲ್ಲೂಕಿನ 7, ಹರಿಹರ ತಾಲ್ಲೂಕಿನ 1 ಪಕ್ಕ ಮನೆ, ದಾವಣಗೆರೆ ತಾಲ್ಲೂಕಿನ 3 ಕಚ್ಚಾ ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<p>ಹರಿಹರ ತಾಲ್ಲೂಕಿನಲ್ಲಿ 12 ಮಿ.ಮೀ, ಹೊನ್ನಾಳಿ ತಾಲ್ಲೂಕಿನಲ್ಲಿ 9.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 7 ಮಿ.ಮೀ., ಚನ್ನಗಿರಿಯಲ್ಲಿ 6 ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 5 ಮಿ.ಮೀ ಮಳೆ ಸುರಿದಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ.</p>.<p>ನೆಲಕಚ್ಚಿದ ಅಪಾರ ಭತ್ತ (ಸಂತೇಬೆನ್ನೂರು ವರದಿ): ಸಮೀಪದ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಬೀಸಿದ ಬಿರುಗಾಳಿ ಹಾಗೂ ಮಳೆಗೆ ಅಪಾರ ಪ್ರಮಾಣದ ಭತ್ತ ನೆಲ ಕಚ್ಚಿದೆ. ಅಡಿಕೆ ಹಾಗೂ ತೆಂಗಿನ ಮರಗಳು ಉರುಳಿವೆ.</p>.<p>ಕೆಂಪನಹಳ್ಳಿ, ಈರಗನಹಳ್ಳಿ, ವೆಂಕಟೇಶ್ವರ ಕ್ಯಾಂಪ್, ಕಾಮನಹಳ್ಳಿ ಸುತ್ತಮುತ್ತಲಿನ ರೈತರ ಗದ್ದೆಗಳಲ್ಲಿ ಭತ್ತದ ಬೆಳೆ ಚಾಪೆ ಹಾಸಿದಂತಾಗಿದೆ.</p>.<p>‘ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ವರದಿ ಸಲ್ಲಿಸಲಾಗುವುದು’ ಎಂದು ತಹಶೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದರು.</p>.<p>ಕಂದಾಯ ನಿರೀಕ್ಷಕ ಶ್ರೀನಿವಾಸ್, ಕೃಷಿ ಅಧಿಕಾರಿ ಕುಮಾರ್, ಸಹಾಯಕ ತೋಟಗಾರಿಕೆ ಅಧಿಕಾರಿ ಏಕಾಂತ್ ಅವರು ಸ್ಥಳಕ್ಕೆ ಬೇಟಿ ನೀಡಿ ನಷ್ಟದ ಮಾಹಿತಿ ಸಂಗ್ರಹಿಸಿದರು.</p>.<p>ಹರಿಹರ ವರದಿ: ಮಳೆ ಹಾನಿಗೀಡಾದ ಸ್ಥಳಗಳಿಗೆ ಶಾಸಕ ಬಿ.ಪಿ. ಹರೀಶ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಷ್ಟ ಅನುಭವಿಸಿರುವ ರೈತರಿಗೆ ಹೆಚ್ಚಿನ ಪರಿಹಾರ ಸಿಗುವಂತೆ ಕೂಡಲೇ ಸಮಗ್ರ ವರದಿ ಸಿದ್ಧಪಡಿಸಿ ಮೇಲಧಿಕಾರಿಗಳಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಟರಾಜ್ ಇದ್ದರು.</p>.<p>ವ್ಯಾಪಕ ಹಾನಿ (ಕಡರನಾಯ್ಕನಹಳ್ಳಿ ವರದಿ): ಸಮೀಪದ ವಿವಿಧ ಗ್ರಾಮಗಳಲ್ಲಿ ಗಾಳಿ, ಬಿರು ಮಳೆಯಿಂದಾಗಿ ಮನೆಗಳು, ಅಡಿಕೆ ಹಾಗೂ ತೆಂಗಿನ ಮರಗಳು ನೆಲಕ್ಕುರುಳಿ ವ್ಯಾಪಕ ಹಾನಿಯಾಗಿದೆ. ಅಧಿಕಾರಿಗಳು ಹಾನಿಯ ಪರಿಶೀಲನೆ ಮಾಡಿದರು.</p>.<p>ಕೊಕ್ಕನೂರು, ಗೋವಿನ ಹಾಳು, ಹೊಳೆ ಸಿರಿಗೆರೆ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರಿಳಿದ್ದವು. ಅವುಗಳನ್ನು ಬದಲಾಯಿಸಿದ ಬೆಸ್ಕಾಂ ಸಿಬ್ಬಂದಿ, ವಿದ್ಯುತ್ ಸರಬರಾಜು ಪುನರ್ ಆರಂಭಿಸಿದರು.</p>.<p>ಕಡರನಾಯ್ಕನಹಳ್ಳಿ–ಕೊಕ್ಕನೂರು ಮಾರ್ಗ ಮಧ್ಯದಲ್ಲಿ ಮರವೊಂದು ನೆಲಕ್ಕುರುಳಿದೆ. ಇದನ್ನು ತೆರವುಗೊಳಿಸಲು ಯಾರೂ ಮುಂದೆ ಬಾರದ ಕಾರಣ, ದಿನಪೂರ್ತಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಹೊನ್ನಾಳಿ ವರದಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ತಡರಾತ್ರಿ ಉತ್ತಮ ಮಳೆಯಾಗಿದೆ. ಸಂಜೆ 7 ಗಂಟೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ, ಗಾಳಿ ಆರಂಭವಾಯಿತು. ರಾತ್ರಿ 12 ಗಂಟೆ ನಂತರ ಉತ್ತಮವಾಗಿ ಸುರಿಯಿತು.</p>.<p>ತುಂಗಭದ್ರಾ ನದಿನೀರಿನ ಮಟ್ಟ 5.2 ಮೀಟರ್ಗೆ ಏರಿಕೆಯಾಗಿದೆ.</p>.<p>ಯಾವುದೇ ಅನಾಹುತಗಳು ಸಂಭವಿಸಿಲ್ಲ ತಹಶೀಲ್ದಾರ್ ಸಿ. ರಾಜೇಶ್ಕುಮಾರ್ ಹೇಳಿದ್ದಾರೆ.</p>.<p>ಮಲೇಬೆನ್ನೂರು ವರದಿ: ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸುರಿದ ಗಾಳಿ, ಮಳೆಗೆ ಕುಣಿಬೆಳೆಕೆರೆ, ಜಿಗಳಿ ಹೊರವಲಯದ ಯಲವಟ್ಟಿ ರಸ್ತೆ ಅಕ್ಕಪಕ್ಕದ ಜಮೀನುಗಳು, ಆದಾಪುರ, ನಿಟ್ಟೂರು, ಸಂಕ್ಲೀಪುರ, ಗುಳದಹಳ್ಳಿ, ಭಾಗದಲ್ಲಿ ಅಂದಾಜು 40 ಎಕರೆ ಭತ್ತ ಜಲಾವೃತವಾಗಿದೆ.</p>.<p>ಕಟಾವಿಗೆ ಸಿದ್ಧವಾಗಿದ್ದ ಭತ್ತದ ಗದ್ದೆಗಳಲ್ಲಿ ನೀರು ನಿಂತಿರುವ ಕಾರಣ, ಭತ್ತದ ಒಕ್ಕಲು ಮುಂದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೊಸಳ್ಳಿ ಕರಿಬಸಪ್ಪ, ಸಂಕ್ಲೀಪುರದ ಚಂದ್ರು ಬೇಸರ ವ್ಯಕ್ತಪಡಿಸಿದರು.</p>.<p>ನಂದಿತಾವರೆ, ಕುಣಿಬೆಳಕೆರೆ ಭಾಗದಲ್ಲಿ ಬಿದ್ದಿದ್ದ ಕಂಬಗಳ ಬದಲಿಗೆ ಹೊಸದಾಗಿ ಅಳವಡಿಸಲಾಗುತ್ತಿದೆ. ತಂತಿ ಜೋಡಣೆ ಕಾರ್ಯ ಭರದಿಂದ ನಡೆಯಿತು.</p>.<p>ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಮರೋಪಾದಿಯಲ್ಲಿ ಕೆಲಸ ಮಾಡಿಸಲಾಗುತ್ತಿದೆ ಎಂದು ಬೆಸ್ಕಾಂ ಶಾಖಾಧಿಖಾರಿ ಮೇಘರಾಜ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-648536700</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>