<p><strong>ದಾವಣಗೆರೆ:</strong> ತಾಲ್ಲೂಕಿನ ಹೊಸಕುಂದವಾಡದಲ್ಲಿ ಗುರುವಾರ ಒಂದೇ ದಿನ ಏಳು ಜನರು ಪ್ರತ್ಯೇಕವಾಗಿ ಮೃತಪಟ್ಟಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p><p>ಇಬ್ಬರು ವಯೋಸಹಜ, ಇಬ್ಬರು ವಾಂತಿಬೇಧಿ ಹಾಗೂ ಮೂವರು ಇತರ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.</p><p>ಗ್ರಾಮದ ಮಾರಜ್ಜಿ (60) ಹಾಗೂ ಶಾಂತಮ್ಮ (65) ವಯೋಸಹಜವಾಗಿ, ಸಂತೋಷ್ (32), ಭೀಮಕ್ಕ (60) ವಾಂತಿ ಭೇದಿಯಿಂದ, ಈರಮ್ಮ (65) ಹಾಗೂ ಸುನೀಲ್ (25) ಜ್ವರದಿಂದ ಮತ್ತು ಮೂರು ದಿನಗಳ ಶಿಶು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p><p>ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಒಂದೇ ದಿನ ಏಳು ಜನರು ಮೃತಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಮೃತರ ಅಂತ್ಯಕ್ರಿಯೆಗೂ ಸ್ಥಳಾವಕಾಶದ ಕೊರತೆ ಎದುರಾಗಿದ್ದು, ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟುಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಲ್ಲೂಕಿನ ಹೊಸಕುಂದವಾಡದಲ್ಲಿ ಗುರುವಾರ ಒಂದೇ ದಿನ ಏಳು ಜನರು ಪ್ರತ್ಯೇಕವಾಗಿ ಮೃತಪಟ್ಟಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p><p>ಇಬ್ಬರು ವಯೋಸಹಜ, ಇಬ್ಬರು ವಾಂತಿಬೇಧಿ ಹಾಗೂ ಮೂವರು ಇತರ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.</p><p>ಗ್ರಾಮದ ಮಾರಜ್ಜಿ (60) ಹಾಗೂ ಶಾಂತಮ್ಮ (65) ವಯೋಸಹಜವಾಗಿ, ಸಂತೋಷ್ (32), ಭೀಮಕ್ಕ (60) ವಾಂತಿ ಭೇದಿಯಿಂದ, ಈರಮ್ಮ (65) ಹಾಗೂ ಸುನೀಲ್ (25) ಜ್ವರದಿಂದ ಮತ್ತು ಮೂರು ದಿನಗಳ ಶಿಶು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p><p>ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಒಂದೇ ದಿನ ಏಳು ಜನರು ಮೃತಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಮೃತರ ಅಂತ್ಯಕ್ರಿಯೆಗೂ ಸ್ಥಳಾವಕಾಶದ ಕೊರತೆ ಎದುರಾಗಿದ್ದು, ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟುಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>