ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ದಾವಣಗೆರೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿದ್ದರೂ ಜನರ ಜೀವನ ಮಟ್ಟ ಸುಧಾರಿಸುವಂತಹ ಬದಲಾವಣೆಗಳು ಕಂಡುಬರುತ್ತಿಲ್ಲ. ಒಟ್ಟು ₹ 1,000 ಕೋಟಿ ಮೊತ್ತದ ಕ್ರಿಯಾಯೋಜನೆ ಪೈಕಿ ₹ 396 ಕೋಟಿ ಅನುದಾನ ಬಿಡುಗಡೆಯಾಗಿದ್ದು, ₹ 207.37 ಕೋಟಿ ಮಾತ್ರ ಖರ್ಚಾಗಿದೆ. ಆಮೆಗತಿಯಲ್ಲಿ ಕಾಮಗಾರಿಗಳು ಸಾಗುತ್ತಿವೆ ಎಂಬುದಕ್ಕೆ ಬ್ಯಾಂಕ್ನಲ್ಲಿಟ್ಟಿದ್ದ ಠೇವಣಿ ಹಣಕ್ಕೆ ₹ 79.03 ಕೋಟಿ ಬಡ್ಡಿ ಬಂದಿರುವುದೇ ಸಾಕ್ಷಿಯಾಗಿದೆ.