ದಾವಣಗೆರೆ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕ ಶಿವಕುಮಾರ್ (49) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಜನೇಯ ಬಡಾವಣೆಯ ನಿವಾಸಿಯಾಗಿರುವ ಶಿವಕುಮಾರ್ ಭಾನುವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದು, ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಯಾರು ಇಲ್ಲದಿರುವ ವೇಳೆ ನೇಣು ಹಾಕಿಕೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ವಿಷಯ ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗಾಂಧೀನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.