<p><strong>ದಾವಣಗೆರೆ:</strong> ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿದೆ. </p><p>ಮಾಹಿತಿ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ಪದವೀಧರ ಆಗಿರುವ ಶ್ರೀನಿವಾಸ್ ಅವರು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವರು. ಶ್ರೀನಿವಾಸ್ ಅವರ ತಂದೆ ದಾಸಕರಿಯಪ್ಪ ಅವರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದಾರೆ. </p><p>ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ 45 ವರ್ಷದ ಇವರು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಾಗಿ, ವಿದ್ಯುತ್ ಗುತ್ತಿಗೆದಾರರಾಗಿ ವೃತ್ತಿ ಬದುಕು ಕಟ್ಟಿಕೊಂಡಿದ್ದಾರೆ. </p><p>ದಾವಣಗೆರೆ ವಿನೋಬನಗರದ ಚೌಡೇಶ್ವರಿ ದೇವಸ್ಥಾನ ಮಂಡಳಿಯ ಅಧ್ಯಕ್ಷರಾಗಿ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದಾರೆ. ಜಿಲ್ಲಾ ವಾಲ್ಮೀಕಿ ಸಮುದಾಯದ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p><p>ಬಿಜೆಪಿಯಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಸೇರಿದಂತೆ 8 ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಕ್ಷೇತ್ರದ ಪರಾಭವ ಅಭ್ಯರ್ಥಿಗಳಾಗಿದ್ದ ಬಿ.ಜಿ. ಅಜಯ್ಕುಮಾರ್ ಹಾಗೂ ಯಶವಂತರಾವ್ ಜಾಧವ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಉಪಚುನಾವಣೆ ಕುರಿತು ಚರ್ಚಿಸಿದ ಬಿಜೆಪಿ ರಾಜ್ಯ ಕೋರ್ ಕಮಿಟಿ ಈ ಮೂವರ ಹೆಸರುಗಳನ್ನು ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಶಿಫಾರಸ್ಸು ಮಾಡಿತ್ತು.</p><p>ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಜೊತೆಗೆ ಗುರುತಿಸಿಕೊಂಡಿರುವ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿರುವುದು ಆ ಬಣದ ಕೈ ಮೇಲಾಗಿದೆ. ಅಜಯ್ಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಲಾಬಿ ನಡೆಸಿದ್ದರು. ಈ ನಡುವೆ ಸ್ವಾಭಿಮಾನಿ ಬಳಗದ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್ ಹೆಸರು ಕೂಡ ಚಾಲ್ತಿಗೆ ಬಂದಿತ್ತು.</p>.ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ.ದಾವಣಗೆರೆ ವಿಧಾನಸಭಾ ಕ್ಷೇತ್ರ: 11 ಬಾರಿ ಗೆದ್ದು ಬೀಗಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿದೆ. </p><p>ಮಾಹಿತಿ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ಪದವೀಧರ ಆಗಿರುವ ಶ್ರೀನಿವಾಸ್ ಅವರು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವರು. ಶ್ರೀನಿವಾಸ್ ಅವರ ತಂದೆ ದಾಸಕರಿಯಪ್ಪ ಅವರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದಾರೆ. </p><p>ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ 45 ವರ್ಷದ ಇವರು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಾಗಿ, ವಿದ್ಯುತ್ ಗುತ್ತಿಗೆದಾರರಾಗಿ ವೃತ್ತಿ ಬದುಕು ಕಟ್ಟಿಕೊಂಡಿದ್ದಾರೆ. </p><p>ದಾವಣಗೆರೆ ವಿನೋಬನಗರದ ಚೌಡೇಶ್ವರಿ ದೇವಸ್ಥಾನ ಮಂಡಳಿಯ ಅಧ್ಯಕ್ಷರಾಗಿ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದಾರೆ. ಜಿಲ್ಲಾ ವಾಲ್ಮೀಕಿ ಸಮುದಾಯದ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p><p>ಬಿಜೆಪಿಯಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಸೇರಿದಂತೆ 8 ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಕ್ಷೇತ್ರದ ಪರಾಭವ ಅಭ್ಯರ್ಥಿಗಳಾಗಿದ್ದ ಬಿ.ಜಿ. ಅಜಯ್ಕುಮಾರ್ ಹಾಗೂ ಯಶವಂತರಾವ್ ಜಾಧವ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಉಪಚುನಾವಣೆ ಕುರಿತು ಚರ್ಚಿಸಿದ ಬಿಜೆಪಿ ರಾಜ್ಯ ಕೋರ್ ಕಮಿಟಿ ಈ ಮೂವರ ಹೆಸರುಗಳನ್ನು ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಶಿಫಾರಸ್ಸು ಮಾಡಿತ್ತು.</p><p>ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಜೊತೆಗೆ ಗುರುತಿಸಿಕೊಂಡಿರುವ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿರುವುದು ಆ ಬಣದ ಕೈ ಮೇಲಾಗಿದೆ. ಅಜಯ್ಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಲಾಬಿ ನಡೆಸಿದ್ದರು. ಈ ನಡುವೆ ಸ್ವಾಭಿಮಾನಿ ಬಳಗದ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್ ಹೆಸರು ಕೂಡ ಚಾಲ್ತಿಗೆ ಬಂದಿತ್ತು.</p>.ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ.ದಾವಣಗೆರೆ ವಿಧಾನಸಭಾ ಕ್ಷೇತ್ರ: 11 ಬಾರಿ ಗೆದ್ದು ಬೀಗಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>