<p><strong>ದಾವಣಗೆರೆ:</strong> ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಅಪೂರ್ವ ಫಲಿತಾಂಶ ದಾಖಲಿಸಿದ್ದು, ಜಿಲ್ಲೆಯಲ್ಲೂ ಗಮನಾರ್ಹ ಸುಧಾರಣೆ ಕಂಡು ಬಂದಿದೆ. ಆದರೆ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 19,000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 1,067 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇವರಲ್ಲಿ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಫೇಲಾಗಿರುವುದು ಆತಂಕ ಮೂಡಿಸಿದೆ.</p>.<p>ಪ್ರಥಮ ಭಾಷೆಗಳಾಗಿ ಕನ್ನಡ, ಸಂಸ್ಕೃತ ಹಾಗೂ ಉರ್ದು ಇವೆ. ಈ ಪೈಕಿ ಸಂಸ್ಕೃತ ಆಯ್ದುಕೊಂಡವರ ಸಂಖ್ಯೆ 25ಕ್ಕಿಂತ ಹೆಚ್ಚಿಲ್ಲ. ಬಹುತೇಕರು ಕನ್ನಡ ಇಲ್ಲವೇ ಉರ್ದು ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ಪ್ರಥಮ ಭಾಷೆಯಲ್ಲಿ ಜಿಲ್ಲೆಯ 155 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಪೈಕಿ ದಾವಣಗೆರೆ ಉತ್ತರ ಬ್ಲಾಕ್ನಲ್ಲೇ 46 ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯೂ ಕಠಿಣ ಎನಿಸಿದಂತೆ ಕಾಣುತ್ತದೆ. ಜಿಲ್ಲೆಯಲ್ಲಿ 120 ಜನ ತೃತೀಯ ಭಾಷೆಯಲ್ಲಿ ತೇರ್ಗಡೆ ಹೊಂದಿಲ್ಲ. ದಾವಣಗೆರೆ ದಕ್ಷಿಣ ಬ್ಲಾಕ್ನ ವಿದ್ಯಾರ್ಥಿಗಳೇ (26) ಈ ಪೈಕಿ ಹೆಚ್ಚು.</p>.<p>ಕೇವಲ ಒಂದೇ ವಿಷಯ/ಭಾಷೆಯಲ್ಲಿ 600 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದು, ಈ ಪೈಕಿ ದಾವಣಗೆರೆ ದಕ್ಷಿಣ ಬ್ಲಾಕ್ನಲ್ಲೇ 171 ವಿದ್ಯಾರ್ಥಿಗಳಿದ್ದಾರೆ. ಭಾಷೆ ಸೇರಿದಂತೆ ಎಲ್ಲ ಆರೂ ವಿಷಯಗಳಲ್ಲಿ ಉತ್ತೀರ್ಣಕ್ಕೆ ಕನಿಷ್ಠ ಅಂಕ ಪಡೆಯಲು ಜಿಲ್ಲೆಯ 12 ವಿದ್ಯಾರ್ಥಿಗಳಿಗೆ ಸಾಧ್ಯವಾಗಿಲ್ಲ. ಭಾಷೆ ಹೊರತುಪಡಿಸಿದರೆ, ಸಮಾಜ ವಿಜ್ಞಾನ ವಿಷಯದಲ್ಲಿ ಅತಿಹೆಚ್ಚು (107) ವಿದ್ಯಾರ್ಥಿಗಳು ನಪಾಸಾಗಿದ್ದಾರೆ. ಹಾಗೆಯೇ ವಿಜ್ಞಾನವೂ ಕೆಲ ವಿದ್ಯಾರ್ಥಿಗಳಿಗೆ ಸವಾಲೊಡ್ಡಿದೆ.</p>.<p>‘ಶಿಕ್ಷಕರು ದಿನವೂ ಎರಡು ಗಂಟೆ ಹೆಚ್ಚುವರಿ ತರಗತಿ ನಡೆಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ವಿದ್ಯಾರ್ಥಿಗಳು ಹಾಗೂ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಹಿನ್ನೆಲೆ, ಪೋಷಕರು ಹಾಗೂ ವಿದ್ಯಾರ್ಥಿಗಳ ನಿರ್ಲಕ್ಷ್ಯವೂ ಅನುತ್ತೀರ್ಣಕ್ಕೆ ಕಾರಣ ಇರಬಹುದು’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದ್ದಾರೆ.</p>.<h2>ಎರಡನೇ ಪರೀಕ್ಷೆಯ ಮೇಲೆ ನಿರೀಕ್ಷೆ</h2><p>‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96ರಷ್ಟು ಫಲಿತಾಂಶದ ನಿರೀಕ್ಷೆಯಿತ್ತು. ಜಿಲ್ಲೆಯು ಶೇ 94.62ರಷ್ಟು ಫಲಿತಾಂಶ ದಾಖಲಿಸಿದ್ದು ತೃಪ್ತಿ ತಂದಿದೆ’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದರು.</p><p>‘ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಎಸ್ಎಸ್ಎಲ್ಸಿ 2ನೇ ಪರೀಕ್ಷೆ ಬರೆಯಲು ಅವರೆಲ್ಲರಿಗೂ ಅವಕಾಶವಿದೆ. ಈ ಪರೀಕ್ಷೆಯ ಬಳಿಕ ಜಿಲ್ಲೆಯ ಫಲಿತಾಂಶ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ’ ಎಂದರು. ‘ಕಳೆದ ಬಾರಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದ್ದ ದಾವಣಗೆರೆ ದಕ್ಷಿಣ ಶೈಕ್ಷಣಿಕ ಬ್ಲಾಕ್ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕೇವಲ ಒಂದು ವಿಷಯದಲ್ಲಿ ಹಿನ್ನಡೆ ಅನುಭವಿಸಿರುವ 600 ವಿದ್ಯಾರ್ಥಿಗಳು 2ನೇ ಪರೀಕ್ಷೆಯಲ್ಲಿ ಪಾಸಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಎಸ್ಎಸ್ಎಲ್ಸಿ 2ನೇ ಪರೀಕ್ಷೆಯು ಮೇ 18ರಿಂದ ಮೇ 23ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು.</p>.<div><blockquote>ಜಿಲ್ಲೆಯ ಎರಡು ಶಾಲೆಗಳು ಶೇ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದಿವೆ. ಈ ಎರಡೂ ಶಾಲೆಗಳು ಅನುದಾನಿತ ಶಾಲೆಗಳಾಗಿದ್ದು, ಅಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇರುವುದು ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ </blockquote><span class="attribution">ಜಿ.ಕೊಟ್ರೇಶ್, ಡಿಡಿಪಿಐ</span></div>.<h2>ಎರಡನೇ ಪರೀಕ್ಷೆಯ ಮೇಲೆ ನಿರೀಕ್ಷೆ</h2><p>‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96ರಷ್ಟು ಫಲಿತಾಂಶದ ನಿರೀಕ್ಷೆಯಿತ್ತು. ಜಿಲ್ಲೆಯು ಶೇ 94.62ರಷ್ಟು ಫಲಿತಾಂಶ ದಾಖಲಿಸಿದ್ದು ತೃಪ್ತಿ ತಂದಿದೆ’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದರು.</p><p>‘ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಎಸ್ಎಸ್ಎಲ್ಸಿ 2ನೇ ಪರೀಕ್ಷೆ ಬರೆಯಲು ಅವರೆಲ್ಲರಿಗೂ ಅವಕಾಶವಿದೆ. ಈ ಪರೀಕ್ಷೆಯ ಬಳಿಕ ಜಿಲ್ಲೆಯ ಫಲಿತಾಂಶ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ’ ಎಂದರು. ‘ಕಳೆದ ಬಾರಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದ್ದ ದಾವಣಗೆರೆ ದಕ್ಷಿಣ ಶೈಕ್ಷಣಿಕ ಬ್ಲಾಕ್ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕೇವಲ ಒಂದು ವಿಷಯದಲ್ಲಿ ಹಿನ್ನಡೆ ಅನುಭವಿಸಿರುವ 600 ವಿದ್ಯಾರ್ಥಿಗಳು 2ನೇ ಪರೀಕ್ಷೆಯಲ್ಲಿ ಪಾಸಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಎಸ್ಎಸ್ಎಲ್ಸಿ 2ನೇ ಪರೀಕ್ಷೆಯು ಮೇ 18ರಿಂದ ಮೇ 23ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಅಪೂರ್ವ ಫಲಿತಾಂಶ ದಾಖಲಿಸಿದ್ದು, ಜಿಲ್ಲೆಯಲ್ಲೂ ಗಮನಾರ್ಹ ಸುಧಾರಣೆ ಕಂಡು ಬಂದಿದೆ. ಆದರೆ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 19,000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 1,067 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇವರಲ್ಲಿ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಫೇಲಾಗಿರುವುದು ಆತಂಕ ಮೂಡಿಸಿದೆ.</p>.<p>ಪ್ರಥಮ ಭಾಷೆಗಳಾಗಿ ಕನ್ನಡ, ಸಂಸ್ಕೃತ ಹಾಗೂ ಉರ್ದು ಇವೆ. ಈ ಪೈಕಿ ಸಂಸ್ಕೃತ ಆಯ್ದುಕೊಂಡವರ ಸಂಖ್ಯೆ 25ಕ್ಕಿಂತ ಹೆಚ್ಚಿಲ್ಲ. ಬಹುತೇಕರು ಕನ್ನಡ ಇಲ್ಲವೇ ಉರ್ದು ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ಪ್ರಥಮ ಭಾಷೆಯಲ್ಲಿ ಜಿಲ್ಲೆಯ 155 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಪೈಕಿ ದಾವಣಗೆರೆ ಉತ್ತರ ಬ್ಲಾಕ್ನಲ್ಲೇ 46 ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯೂ ಕಠಿಣ ಎನಿಸಿದಂತೆ ಕಾಣುತ್ತದೆ. ಜಿಲ್ಲೆಯಲ್ಲಿ 120 ಜನ ತೃತೀಯ ಭಾಷೆಯಲ್ಲಿ ತೇರ್ಗಡೆ ಹೊಂದಿಲ್ಲ. ದಾವಣಗೆರೆ ದಕ್ಷಿಣ ಬ್ಲಾಕ್ನ ವಿದ್ಯಾರ್ಥಿಗಳೇ (26) ಈ ಪೈಕಿ ಹೆಚ್ಚು.</p>.<p>ಕೇವಲ ಒಂದೇ ವಿಷಯ/ಭಾಷೆಯಲ್ಲಿ 600 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದು, ಈ ಪೈಕಿ ದಾವಣಗೆರೆ ದಕ್ಷಿಣ ಬ್ಲಾಕ್ನಲ್ಲೇ 171 ವಿದ್ಯಾರ್ಥಿಗಳಿದ್ದಾರೆ. ಭಾಷೆ ಸೇರಿದಂತೆ ಎಲ್ಲ ಆರೂ ವಿಷಯಗಳಲ್ಲಿ ಉತ್ತೀರ್ಣಕ್ಕೆ ಕನಿಷ್ಠ ಅಂಕ ಪಡೆಯಲು ಜಿಲ್ಲೆಯ 12 ವಿದ್ಯಾರ್ಥಿಗಳಿಗೆ ಸಾಧ್ಯವಾಗಿಲ್ಲ. ಭಾಷೆ ಹೊರತುಪಡಿಸಿದರೆ, ಸಮಾಜ ವಿಜ್ಞಾನ ವಿಷಯದಲ್ಲಿ ಅತಿಹೆಚ್ಚು (107) ವಿದ್ಯಾರ್ಥಿಗಳು ನಪಾಸಾಗಿದ್ದಾರೆ. ಹಾಗೆಯೇ ವಿಜ್ಞಾನವೂ ಕೆಲ ವಿದ್ಯಾರ್ಥಿಗಳಿಗೆ ಸವಾಲೊಡ್ಡಿದೆ.</p>.<p>‘ಶಿಕ್ಷಕರು ದಿನವೂ ಎರಡು ಗಂಟೆ ಹೆಚ್ಚುವರಿ ತರಗತಿ ನಡೆಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ವಿದ್ಯಾರ್ಥಿಗಳು ಹಾಗೂ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಹಿನ್ನೆಲೆ, ಪೋಷಕರು ಹಾಗೂ ವಿದ್ಯಾರ್ಥಿಗಳ ನಿರ್ಲಕ್ಷ್ಯವೂ ಅನುತ್ತೀರ್ಣಕ್ಕೆ ಕಾರಣ ಇರಬಹುದು’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದ್ದಾರೆ.</p>.<h2>ಎರಡನೇ ಪರೀಕ್ಷೆಯ ಮೇಲೆ ನಿರೀಕ್ಷೆ</h2><p>‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96ರಷ್ಟು ಫಲಿತಾಂಶದ ನಿರೀಕ್ಷೆಯಿತ್ತು. ಜಿಲ್ಲೆಯು ಶೇ 94.62ರಷ್ಟು ಫಲಿತಾಂಶ ದಾಖಲಿಸಿದ್ದು ತೃಪ್ತಿ ತಂದಿದೆ’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದರು.</p><p>‘ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಎಸ್ಎಸ್ಎಲ್ಸಿ 2ನೇ ಪರೀಕ್ಷೆ ಬರೆಯಲು ಅವರೆಲ್ಲರಿಗೂ ಅವಕಾಶವಿದೆ. ಈ ಪರೀಕ್ಷೆಯ ಬಳಿಕ ಜಿಲ್ಲೆಯ ಫಲಿತಾಂಶ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ’ ಎಂದರು. ‘ಕಳೆದ ಬಾರಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದ್ದ ದಾವಣಗೆರೆ ದಕ್ಷಿಣ ಶೈಕ್ಷಣಿಕ ಬ್ಲಾಕ್ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕೇವಲ ಒಂದು ವಿಷಯದಲ್ಲಿ ಹಿನ್ನಡೆ ಅನುಭವಿಸಿರುವ 600 ವಿದ್ಯಾರ್ಥಿಗಳು 2ನೇ ಪರೀಕ್ಷೆಯಲ್ಲಿ ಪಾಸಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಎಸ್ಎಸ್ಎಲ್ಸಿ 2ನೇ ಪರೀಕ್ಷೆಯು ಮೇ 18ರಿಂದ ಮೇ 23ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು.</p>.<div><blockquote>ಜಿಲ್ಲೆಯ ಎರಡು ಶಾಲೆಗಳು ಶೇ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದಿವೆ. ಈ ಎರಡೂ ಶಾಲೆಗಳು ಅನುದಾನಿತ ಶಾಲೆಗಳಾಗಿದ್ದು, ಅಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇರುವುದು ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ </blockquote><span class="attribution">ಜಿ.ಕೊಟ್ರೇಶ್, ಡಿಡಿಪಿಐ</span></div>.<h2>ಎರಡನೇ ಪರೀಕ್ಷೆಯ ಮೇಲೆ ನಿರೀಕ್ಷೆ</h2><p>‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96ರಷ್ಟು ಫಲಿತಾಂಶದ ನಿರೀಕ್ಷೆಯಿತ್ತು. ಜಿಲ್ಲೆಯು ಶೇ 94.62ರಷ್ಟು ಫಲಿತಾಂಶ ದಾಖಲಿಸಿದ್ದು ತೃಪ್ತಿ ತಂದಿದೆ’ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದರು.</p><p>‘ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಎಸ್ಎಸ್ಎಲ್ಸಿ 2ನೇ ಪರೀಕ್ಷೆ ಬರೆಯಲು ಅವರೆಲ್ಲರಿಗೂ ಅವಕಾಶವಿದೆ. ಈ ಪರೀಕ್ಷೆಯ ಬಳಿಕ ಜಿಲ್ಲೆಯ ಫಲಿತಾಂಶ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ’ ಎಂದರು. ‘ಕಳೆದ ಬಾರಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದ್ದ ದಾವಣಗೆರೆ ದಕ್ಷಿಣ ಶೈಕ್ಷಣಿಕ ಬ್ಲಾಕ್ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕೇವಲ ಒಂದು ವಿಷಯದಲ್ಲಿ ಹಿನ್ನಡೆ ಅನುಭವಿಸಿರುವ 600 ವಿದ್ಯಾರ್ಥಿಗಳು 2ನೇ ಪರೀಕ್ಷೆಯಲ್ಲಿ ಪಾಸಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಎಸ್ಎಸ್ಎಲ್ಸಿ 2ನೇ ಪರೀಕ್ಷೆಯು ಮೇ 18ರಿಂದ ಮೇ 23ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>