<p><strong>ದಾವಣಗೆರೆ</strong>: ‘ಕೃತಕ ಬುದ್ಧಿಮತ್ತೆ (ಎ.ಐ), ಸೆಮಿ ಕಂಡಕ್ಟರ್, ಹಸಿರು ಇಂಧನ, ಡಿಜಿಟಲ್ ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶ ಅಸಾಧಾರಣ ಬದಲಾವಣೆಗಳಿಗೆ ಸಾಕ್ಷಿ ಆಗುತ್ತಿದೆ. ದೇಶ ಭವಿಷ್ಯದಲ್ಲಿ ಜಗತ್ತಿಗೆ ದಾರಿ ತೋರಲಿದೆ’ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ವಿಶ್ವವಿದ್ಯಾಲಯ ಬಿಡಿಟಿ ಕಾಲೇಜಿಗೆ 75 ವರ್ಷ ತುಂಬಿದ ಅಂಗವಾಗಿ ಆಯೋಜಿಸಿರುವ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.</p>.<p>‘2047ರ ವೇಳೆಗೆ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ಸೇರುವ ಆಶಯ ಈಡೇರಲು ಯುವ ಎಂಜಿನಿಯರ್ಗಳು, ವಿಜ್ಞಾನಿಗಳು, ಸಂಶೋಧಕರು ಮತ್ತು ಉದ್ಯಮಿಗಳ ಕೊಡುಗೆ ಅಗತ್ಯ. ಭಾರತವನ್ನು ತಾಂತ್ರಿಕವಾಗಿ ಸ್ವಾವಲಂಬಿ ಆಗಿಸಲು ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ಹೇಳಿದರು.</p>.<p>‘ಮೌಲ್ಯಾಧಾರಿತ ನಾಯಕರು, ನವೋದ್ಯಮಿಗಳ ರೂಪಿಸುವಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಇದೆ. ದೇಶ ತಾಂತ್ರಿಕ ಪ್ರಗತಿ ಮತ್ತು ಜಾಗತಿಕ ಜ್ಞಾನದ ನಾಯಕತ್ವದತ್ತ ಮುನ್ನಡೆಸುವ ನಿಟ್ಬಿನಲ್ಲಿ ಚಿಂತನೆ ಅಗತ್ಯ’ ಎಂದು ಹೇಳಿದರು.</p>.<p>‘ಆಧುನಿಕ ಶಿಕ್ಷಣದ ಜೊತೆಗೆ ಅಧ್ಯಾತ್ಮ ಬೋಧಿಸಿದರೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಿಸಲು ಸಾಧ್ಯ, ವಿಜ್ಞಾನ ದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಲು ವಿಶ್ವವಿದ್ಯಾಲಯಗಳು ಗಮನಹರಿಸಬೇಕು’ ಎಂದು ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-51-1794770151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಕೃತಕ ಬುದ್ಧಿಮತ್ತೆ (ಎ.ಐ), ಸೆಮಿ ಕಂಡಕ್ಟರ್, ಹಸಿರು ಇಂಧನ, ಡಿಜಿಟಲ್ ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶ ಅಸಾಧಾರಣ ಬದಲಾವಣೆಗಳಿಗೆ ಸಾಕ್ಷಿ ಆಗುತ್ತಿದೆ. ದೇಶ ಭವಿಷ್ಯದಲ್ಲಿ ಜಗತ್ತಿಗೆ ದಾರಿ ತೋರಲಿದೆ’ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ವಿಶ್ವವಿದ್ಯಾಲಯ ಬಿಡಿಟಿ ಕಾಲೇಜಿಗೆ 75 ವರ್ಷ ತುಂಬಿದ ಅಂಗವಾಗಿ ಆಯೋಜಿಸಿರುವ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.</p>.<p>‘2047ರ ವೇಳೆಗೆ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ಸೇರುವ ಆಶಯ ಈಡೇರಲು ಯುವ ಎಂಜಿನಿಯರ್ಗಳು, ವಿಜ್ಞಾನಿಗಳು, ಸಂಶೋಧಕರು ಮತ್ತು ಉದ್ಯಮಿಗಳ ಕೊಡುಗೆ ಅಗತ್ಯ. ಭಾರತವನ್ನು ತಾಂತ್ರಿಕವಾಗಿ ಸ್ವಾವಲಂಬಿ ಆಗಿಸಲು ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ಹೇಳಿದರು.</p>.<p>‘ಮೌಲ್ಯಾಧಾರಿತ ನಾಯಕರು, ನವೋದ್ಯಮಿಗಳ ರೂಪಿಸುವಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಇದೆ. ದೇಶ ತಾಂತ್ರಿಕ ಪ್ರಗತಿ ಮತ್ತು ಜಾಗತಿಕ ಜ್ಞಾನದ ನಾಯಕತ್ವದತ್ತ ಮುನ್ನಡೆಸುವ ನಿಟ್ಬಿನಲ್ಲಿ ಚಿಂತನೆ ಅಗತ್ಯ’ ಎಂದು ಹೇಳಿದರು.</p>.<p>‘ಆಧುನಿಕ ಶಿಕ್ಷಣದ ಜೊತೆಗೆ ಅಧ್ಯಾತ್ಮ ಬೋಧಿಸಿದರೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಿಸಲು ಸಾಧ್ಯ, ವಿಜ್ಞಾನ ದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಲು ವಿಶ್ವವಿದ್ಯಾಲಯಗಳು ಗಮನಹರಿಸಬೇಕು’ ಎಂದು ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-51-1794770151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>