<p><strong>ಚನ್ನಗಿರಿ:</strong> ಒಂದು ವಾರದಿಂದ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ದಾಹವನ್ನು ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣಿನ ಮೊರೆ ಹೋಗಿದ್ದಾರೆ.</p>.<p>ಜನವರಿಯಿಂದಲೂ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಳವಾಗುತ್ತಿದೆ. ಜನರು ತಂಪು ಪಾನೀಯ ಹಾಗೂ ಹೆಚ್ಚು ನೀರಿನ ಅಂಶ ಹೊಂದಿರುವ ಕಲ್ಲಂಗಡಿ ಹಣ್ಣುಗಳ ಮೊರೆ ಹೋಗಿದ್ದಾರೆ.</p>.<p>ಪಟ್ಟಣದಲ್ಲಿ ಜನನಿಬಿಡ ಸ್ಥಳಗಳಲ್ಲಿ ಕಲ್ಲಂಗಡಿ ರಾಶಿ ಹಾಕಿಕೊಂಡು ಹಣ್ಣನ್ನು ಮಾರಾಟ ಮಾಡುವ ದೃಶ್ಯ ಸಾಮಾನ್ಯವಾಗಿದೆ. ಬಿಸಿಲು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಮೂರು ತಿಂಗಳು ಕಲ್ಲಂಗಡಿ ಹಣ್ಣುಗಳಿಗೆ ವಿಪರೀತ ಬೇಡಿಕೆ ಇರುತ್ತದೆ.</p>.<p>ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೂ ಸೂರ್ಯನ ತಾಪ ಜನರನ್ನು ಬಾಧಿಸುತ್ತಿದೆ. ಎಳನೀರು ಒಂದಕ್ಕೆ ₹50 ದರ ಇದೆ. ಹೀಗಾಗಿ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ₹20 ಕೊಟ್ಟು ಒಂದು ಪೀಸ್ ಕಲ್ಲಂಗಡಿ ಹಣ್ಣನ್ನು ತಿಂದು ಸಮಾಧಾನ ಪಟ್ಟುಕೊಳ್ಳುತ್ತಿದ್ದೇವೆ ಎನ್ನುತ್ತಾರೆ ಪಟ್ಟಣದ ವಾಸಿ ಮಂಜುನಾಥ್.</p>.<p>‘ನಮ್ಮ ತಾಲ್ಲೂಕಿನಲ್ಲಿ ಅಡಿಕೆ ಹಾಗೂ ಮೆಕ್ಕೆಜೋಳ ಬಿಟ್ಟರೆ ಕಲ್ಲಂಗಡಿ ಹಣ್ಣನ್ನು ಯಾವ ರೈತರೂ ಬೆಳೆಯುವುದಿಲ್ಲ. ಹೊರ ಜಿಲ್ಲೆಗಳಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. 1 ಕೆ.ಜಿ ಕಲ್ಲಂಗಡಿಯನ್ನು ₹30ರಂತೆ ಮಾರಾಟ ಮಾಡುತ್ತಿದ್ದೇವೆ’ ಎಂದು ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಬಷೀರ್ ಸಾಬ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಒಂದು ವಾರದಿಂದ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ದಾಹವನ್ನು ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣಿನ ಮೊರೆ ಹೋಗಿದ್ದಾರೆ.</p>.<p>ಜನವರಿಯಿಂದಲೂ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಳವಾಗುತ್ತಿದೆ. ಜನರು ತಂಪು ಪಾನೀಯ ಹಾಗೂ ಹೆಚ್ಚು ನೀರಿನ ಅಂಶ ಹೊಂದಿರುವ ಕಲ್ಲಂಗಡಿ ಹಣ್ಣುಗಳ ಮೊರೆ ಹೋಗಿದ್ದಾರೆ.</p>.<p>ಪಟ್ಟಣದಲ್ಲಿ ಜನನಿಬಿಡ ಸ್ಥಳಗಳಲ್ಲಿ ಕಲ್ಲಂಗಡಿ ರಾಶಿ ಹಾಕಿಕೊಂಡು ಹಣ್ಣನ್ನು ಮಾರಾಟ ಮಾಡುವ ದೃಶ್ಯ ಸಾಮಾನ್ಯವಾಗಿದೆ. ಬಿಸಿಲು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಮೂರು ತಿಂಗಳು ಕಲ್ಲಂಗಡಿ ಹಣ್ಣುಗಳಿಗೆ ವಿಪರೀತ ಬೇಡಿಕೆ ಇರುತ್ತದೆ.</p>.<p>ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೂ ಸೂರ್ಯನ ತಾಪ ಜನರನ್ನು ಬಾಧಿಸುತ್ತಿದೆ. ಎಳನೀರು ಒಂದಕ್ಕೆ ₹50 ದರ ಇದೆ. ಹೀಗಾಗಿ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ₹20 ಕೊಟ್ಟು ಒಂದು ಪೀಸ್ ಕಲ್ಲಂಗಡಿ ಹಣ್ಣನ್ನು ತಿಂದು ಸಮಾಧಾನ ಪಟ್ಟುಕೊಳ್ಳುತ್ತಿದ್ದೇವೆ ಎನ್ನುತ್ತಾರೆ ಪಟ್ಟಣದ ವಾಸಿ ಮಂಜುನಾಥ್.</p>.<p>‘ನಮ್ಮ ತಾಲ್ಲೂಕಿನಲ್ಲಿ ಅಡಿಕೆ ಹಾಗೂ ಮೆಕ್ಕೆಜೋಳ ಬಿಟ್ಟರೆ ಕಲ್ಲಂಗಡಿ ಹಣ್ಣನ್ನು ಯಾವ ರೈತರೂ ಬೆಳೆಯುವುದಿಲ್ಲ. ಹೊರ ಜಿಲ್ಲೆಗಳಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. 1 ಕೆ.ಜಿ ಕಲ್ಲಂಗಡಿಯನ್ನು ₹30ರಂತೆ ಮಾರಾಟ ಮಾಡುತ್ತಿದ್ದೇವೆ’ ಎಂದು ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಬಷೀರ್ ಸಾಬ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>