<p>ದಾವಣಗೆರೆ: ‘ಬಿಜೆಪಿಗೆ ಮಹಿಳೆಯರ ಬೆಂಬಲ ಜಾಸ್ತಿ ಇದೆ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರೋಧಿಸುತ್ತಿದ್ದಾರೆ. ದಾವಣಗೆರೆ ಸಂಸದರು ಈ ಮಸೂದೆ ಬಗ್ಗೆ ಯಾವುದೇ ನಿಲುವು ಸ್ಪಷ್ಟಪಡಿಸಿಲ್ಲ. ಅವರು ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದ್ದಾರೋ ಅಥವಾ ವಿರುದ್ಧವಿದ್ದಾರೋ ಎಂಬುದನ್ನು ತಿಳಿಸಬೇಕು ಎಂದು ಸ್ವಾಭಿಮಾನಿ ಬಳಗದ ಅಧ್ಯಕ್ಷ ಬಿ.ಜಿ.ವಿನಯಕುಮಾರ್ ಕೋರಿದರು.</p>.<p>‘ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯಿಂದ ಯಾವುದೇ ರಾಜ್ಯಗಳಿಗೆ ತೊಂದರೆಯಾಗುವುದಿಲ್ಲ. ದಾವಣಗೆರೆ ಕ್ಷೇತ್ರವನ್ನು ಹಿಂದುಳಿದ ವರ್ಗದ ಮಹಿಳೆಗೆ ಮೀಸಲಿಡಬೇಕು. ವಿಧಾನಸಭೆ ಚುನಾವಣೆಗಳಲ್ಲೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ನಾರಿಶಕ್ತಿ ವಂದನಾ ಅಧಿನಿಯಮ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಿಸಿ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವುದು ಐತಿಹಾಸಿಕ ನಿರ್ಧಾರ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ಹಾಲಿ ಸಂಸದರು, ಶಾಸಕರ ಕುಟುಂಬದವರಿಗೇ ಪಕ್ಷಗಳು ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣ ಹೆಚ್ಚಾಗುತ್ತದೆ. ಮಹಿಳಾ ಮೀಸಲಾತಿ ಜಾರಿಯಾದ ಬಳಿಕ ರಾಜಕೀಯ ಹಿನ್ನೆಲೆಯಿಲ್ಲದ ಸಾಮರ್ಥ್ಯ ಇರುವ ಮಹಿಳೆಯರಿಗೆ ಆದ್ಯತೆ ಮೇರೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ದಾವಣಗೆರೆ ಉತ್ತರ ಅಥವಾ ಹೊನ್ನಾಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದು ನಿಜ. ಈ ಬಗ್ಗೆ ರಾಷ್ಟ್ರಮಟ್ಟದ ನಾಯಕರೊಂದಿಗೂ ಸಂಪರ್ಕವಿದೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.</p>.<p>ಸ್ವಾಭಿಮಾನಿ ಬಳಗದ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿರೂಪಾಕ್ಷಪ್ಪ, ರಂಗಸ್ವಾಮಿ, ರೇವಂತ್ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-745001494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಬಿಜೆಪಿಗೆ ಮಹಿಳೆಯರ ಬೆಂಬಲ ಜಾಸ್ತಿ ಇದೆ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರೋಧಿಸುತ್ತಿದ್ದಾರೆ. ದಾವಣಗೆರೆ ಸಂಸದರು ಈ ಮಸೂದೆ ಬಗ್ಗೆ ಯಾವುದೇ ನಿಲುವು ಸ್ಪಷ್ಟಪಡಿಸಿಲ್ಲ. ಅವರು ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದ್ದಾರೋ ಅಥವಾ ವಿರುದ್ಧವಿದ್ದಾರೋ ಎಂಬುದನ್ನು ತಿಳಿಸಬೇಕು ಎಂದು ಸ್ವಾಭಿಮಾನಿ ಬಳಗದ ಅಧ್ಯಕ್ಷ ಬಿ.ಜಿ.ವಿನಯಕುಮಾರ್ ಕೋರಿದರು.</p>.<p>‘ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯಿಂದ ಯಾವುದೇ ರಾಜ್ಯಗಳಿಗೆ ತೊಂದರೆಯಾಗುವುದಿಲ್ಲ. ದಾವಣಗೆರೆ ಕ್ಷೇತ್ರವನ್ನು ಹಿಂದುಳಿದ ವರ್ಗದ ಮಹಿಳೆಗೆ ಮೀಸಲಿಡಬೇಕು. ವಿಧಾನಸಭೆ ಚುನಾವಣೆಗಳಲ್ಲೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ನಾರಿಶಕ್ತಿ ವಂದನಾ ಅಧಿನಿಯಮ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಿಸಿ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವುದು ಐತಿಹಾಸಿಕ ನಿರ್ಧಾರ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ಹಾಲಿ ಸಂಸದರು, ಶಾಸಕರ ಕುಟುಂಬದವರಿಗೇ ಪಕ್ಷಗಳು ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣ ಹೆಚ್ಚಾಗುತ್ತದೆ. ಮಹಿಳಾ ಮೀಸಲಾತಿ ಜಾರಿಯಾದ ಬಳಿಕ ರಾಜಕೀಯ ಹಿನ್ನೆಲೆಯಿಲ್ಲದ ಸಾಮರ್ಥ್ಯ ಇರುವ ಮಹಿಳೆಯರಿಗೆ ಆದ್ಯತೆ ಮೇರೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ದಾವಣಗೆರೆ ಉತ್ತರ ಅಥವಾ ಹೊನ್ನಾಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದು ನಿಜ. ಈ ಬಗ್ಗೆ ರಾಷ್ಟ್ರಮಟ್ಟದ ನಾಯಕರೊಂದಿಗೂ ಸಂಪರ್ಕವಿದೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.</p>.<p>ಸ್ವಾಭಿಮಾನಿ ಬಳಗದ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿರೂಪಾಕ್ಷಪ್ಪ, ರಂಗಸ್ವಾಮಿ, ರೇವಂತ್ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-745001494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>