<p><strong>ದಾವಣಗೆರೆ</strong>: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಮಾಗನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದೆ.</p>.<p>ಮಾಗನಹಳ್ಳಿಯ ಆಕಾಶ್ ಬಿ.ಜಿ. (17) ಮೃತ ಯುವಕ.</p>.<p>ಸ್ನೇಹಿತರೊಂದಿಗೆ ಈಜಾಡುವ ವೇಳೆ ಆಕಾಶ್ ಆಕಸ್ಮಿಕವಾಗಿ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಸ್ನೇಹಿತರು ರಕ್ಷಿಸಲು ಮುಂದಾದರೂ ಸಾಧ್ಯವಾಗಿಲ್ಲ.</p>.<p>‘ಆಕಾಶ್ಗೆ ಈಜು ಬರುತ್ತಿತ್ತು. ಕೆಸರಿನಲ್ಲಿ ಸಿಲುಕಿದ್ದರಿಂದ ಮೇಲೆ ಬರಲಾಗದೇ ಉಸಿರುಗಟ್ಟಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಸ್ಥಳದಲ್ಲಿ ಮೃತ ಯುವಕನ ಕುಟುಂಬದವರು, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-1004778185</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಮಾಗನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದೆ.</p>.<p>ಮಾಗನಹಳ್ಳಿಯ ಆಕಾಶ್ ಬಿ.ಜಿ. (17) ಮೃತ ಯುವಕ.</p>.<p>ಸ್ನೇಹಿತರೊಂದಿಗೆ ಈಜಾಡುವ ವೇಳೆ ಆಕಾಶ್ ಆಕಸ್ಮಿಕವಾಗಿ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಸ್ನೇಹಿತರು ರಕ್ಷಿಸಲು ಮುಂದಾದರೂ ಸಾಧ್ಯವಾಗಿಲ್ಲ.</p>.<p>‘ಆಕಾಶ್ಗೆ ಈಜು ಬರುತ್ತಿತ್ತು. ಕೆಸರಿನಲ್ಲಿ ಸಿಲುಕಿದ್ದರಿಂದ ಮೇಲೆ ಬರಲಾಗದೇ ಉಸಿರುಗಟ್ಟಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಸ್ಥಳದಲ್ಲಿ ಮೃತ ಯುವಕನ ಕುಟುಂಬದವರು, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-1004778185</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>