<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 82 ಶಾಲೆ, 8 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 12 ಅಂಗನವಾಡಿ ಕಟ್ಟಡಗಳಿಗೆ ಹಾನಿಯಾಗಿದೆ. 204 ಕಿ.ಮೀ ರಸ್ತೆ ಹಾಳಾಗಿದ್ದು, ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 300 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ವಾಸ್ತವವಾಗಿ ಸೆ.6 ರವರೆಗೆ 395 ಮಿ.ಮೀ ಮಳೆಯಾಗಿದೆ. 44 ಕಿ.ಮೀ ರಾಜ್ಯ ಹೆದ್ದಾರಿ, 44 ಕಿ.ಮೀ ಜಿಲ್ಲಾ ರಸ್ತೆ ಹಾಗೂ 116 ಕಿ.ಮೀ ಗ್ರಾಮೀಣ ರಸ್ತೆಗೆ ಹಾನಿಯಾಗಿದೆ. 2 ಸೇತುವೆ, 882 ವಿದ್ಯುತ್ ಕಂಬ, 43 ವಿದ್ಯುತ್ ಪರಿವರ್ತಕ ಹಾಗೂ 3 ಕಿ.ಮೀ ವಿದ್ಯುತ್ ಮಾರ್ಗ ಹಾಳಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜೂನ್ 12 ರಂದು ಸುರಿದ ಭಾರಿ ಮಳೆಗೆ ಹೊನ್ನಾಳಿ ತಾಲ್ಲೂಕಿನ ನೇರಲಗುಂಡಿ ಗ್ರಾಮದಲ್ಲಿ ನೀರು ನುಗ್ಗಿದ್ದರಿಂದ 26 ಕುಂಟುಂಬಗಳಿಗೆ ₹ 65,000 ಪರಿಹಾರ ನೀಡಲಾಗಿದೆ. ಇಲ್ಲಿಯವರೆಗೆ ಸಿಡಿಲು ಬಡಿದು 5 ಹಸುಗಳು ಮೃತಪಟ್ಟಿದ್ದು ₹ 1.87 ಲಕ್ಷ ಪರಿಹಾರ ನೀಡಲಾಗಿದೆ. 30 ಮನೆಗಳಿಗೆ ತೀವ್ರ ಹಾಗೂ 63 ಮನೆಗಳು ಭಾಗಶಃ ಹಾನಿಯಾಗಿದ್ದು, ₹ 58.96 ಲಕ್ಷ ಪರಿಹಾರ ನೀಡಲಾಗಿದೆ’ ಎಂದರು.</p>.<p>‘ವಿಪತ್ತು ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಪಿಡಿ ಖಾತೆಯಲ್ಲಿ ₹ 25.19 ಕೋಟಿ ಅನುದಾನ ಲಭ್ಯವಿದೆ. ತುಂಗಭದ್ರಾ ನದಿ ಪಾತ್ರದಲ್ಲಿರುವ ಹೊನ್ನಾಳಿಯ ಬಾಲ್ರಾಜ್ ಘಾಟ್ ಪ್ರದೇಶದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು’ ಎಂದು ಹೇಳಿದರು.</p>.<p>ಹರಿಹರ ತಾಲ್ಲೂಕಿನ ರಾಜನಹಳ್ಳಿ, ರಾಮತೀರ್ಥ ಹಾಗೂ ಹೊಸಹಳ್ಳಿಯಲ್ಲಿ 45 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳಕ್ಕೆ ಹಾನಿಯಾಗಿದೆ. ಈ ಬಗ್ಗೆ ವರದಿಯಾಗಿದ್ದು 2 ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 82 ಶಾಲೆ, 8 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 12 ಅಂಗನವಾಡಿ ಕಟ್ಟಡಗಳಿಗೆ ಹಾನಿಯಾಗಿದೆ. 204 ಕಿ.ಮೀ ರಸ್ತೆ ಹಾಳಾಗಿದ್ದು, ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 300 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ವಾಸ್ತವವಾಗಿ ಸೆ.6 ರವರೆಗೆ 395 ಮಿ.ಮೀ ಮಳೆಯಾಗಿದೆ. 44 ಕಿ.ಮೀ ರಾಜ್ಯ ಹೆದ್ದಾರಿ, 44 ಕಿ.ಮೀ ಜಿಲ್ಲಾ ರಸ್ತೆ ಹಾಗೂ 116 ಕಿ.ಮೀ ಗ್ರಾಮೀಣ ರಸ್ತೆಗೆ ಹಾನಿಯಾಗಿದೆ. 2 ಸೇತುವೆ, 882 ವಿದ್ಯುತ್ ಕಂಬ, 43 ವಿದ್ಯುತ್ ಪರಿವರ್ತಕ ಹಾಗೂ 3 ಕಿ.ಮೀ ವಿದ್ಯುತ್ ಮಾರ್ಗ ಹಾಳಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜೂನ್ 12 ರಂದು ಸುರಿದ ಭಾರಿ ಮಳೆಗೆ ಹೊನ್ನಾಳಿ ತಾಲ್ಲೂಕಿನ ನೇರಲಗುಂಡಿ ಗ್ರಾಮದಲ್ಲಿ ನೀರು ನುಗ್ಗಿದ್ದರಿಂದ 26 ಕುಂಟುಂಬಗಳಿಗೆ ₹ 65,000 ಪರಿಹಾರ ನೀಡಲಾಗಿದೆ. ಇಲ್ಲಿಯವರೆಗೆ ಸಿಡಿಲು ಬಡಿದು 5 ಹಸುಗಳು ಮೃತಪಟ್ಟಿದ್ದು ₹ 1.87 ಲಕ್ಷ ಪರಿಹಾರ ನೀಡಲಾಗಿದೆ. 30 ಮನೆಗಳಿಗೆ ತೀವ್ರ ಹಾಗೂ 63 ಮನೆಗಳು ಭಾಗಶಃ ಹಾನಿಯಾಗಿದ್ದು, ₹ 58.96 ಲಕ್ಷ ಪರಿಹಾರ ನೀಡಲಾಗಿದೆ’ ಎಂದರು.</p>.<p>‘ವಿಪತ್ತು ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಪಿಡಿ ಖಾತೆಯಲ್ಲಿ ₹ 25.19 ಕೋಟಿ ಅನುದಾನ ಲಭ್ಯವಿದೆ. ತುಂಗಭದ್ರಾ ನದಿ ಪಾತ್ರದಲ್ಲಿರುವ ಹೊನ್ನಾಳಿಯ ಬಾಲ್ರಾಜ್ ಘಾಟ್ ಪ್ರದೇಶದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು’ ಎಂದು ಹೇಳಿದರು.</p>.<p>ಹರಿಹರ ತಾಲ್ಲೂಕಿನ ರಾಜನಹಳ್ಳಿ, ರಾಮತೀರ್ಥ ಹಾಗೂ ಹೊಸಹಳ್ಳಿಯಲ್ಲಿ 45 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳಕ್ಕೆ ಹಾನಿಯಾಗಿದೆ. ಈ ಬಗ್ಗೆ ವರದಿಯಾಗಿದ್ದು 2 ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>