<p><strong>ದಾವಣಗೆರೆ</strong>: ಗಲಾಟೆ ಪ್ರಕರಣದ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ಕೈಬಿಡಲು ಆರೋಪಿಯಿಂದ ₹ 50,000 ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲಿಸ್ ಠಾಣೆಯ ಎಎಸ್ಐ ಈರಣ್ಣ, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ಮೊದಲ ಕಂತಿನಲ್ಲಿ ಅರ್ಧ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎಎಸ್ಐ ಈರಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.</p><p>ಗಲಾಟೆಯ ವಿಚಾರವಾಗಿ ಮಣಿಕಂಠ ಆಚಾರ್ಯ, ಅವರ ತಾಯಿ ಭಾಗ್ಯಮ್ಮ ಮತ್ತು ಪತ್ನಿ ಅರ್ಚನಾ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಎಸ್ಐ ಈರಣ್ಣ, ಭಾಗ್ಯಮ್ಮ ಮತ್ತು ಅರ್ಚನಾ ಅವರ ಹೆಸರನ್ನು ದೋಷಾರೋಪಪಟ್ಟಿಯಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಿ.ಮಧುಸೂದನ್, ಪ್ರಭು ಬಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಗಲಾಟೆ ಪ್ರಕರಣದ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ಕೈಬಿಡಲು ಆರೋಪಿಯಿಂದ ₹ 50,000 ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲಿಸ್ ಠಾಣೆಯ ಎಎಸ್ಐ ಈರಣ್ಣ, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ಮೊದಲ ಕಂತಿನಲ್ಲಿ ಅರ್ಧ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎಎಸ್ಐ ಈರಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.</p><p>ಗಲಾಟೆಯ ವಿಚಾರವಾಗಿ ಮಣಿಕಂಠ ಆಚಾರ್ಯ, ಅವರ ತಾಯಿ ಭಾಗ್ಯಮ್ಮ ಮತ್ತು ಪತ್ನಿ ಅರ್ಚನಾ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಎಸ್ಐ ಈರಣ್ಣ, ಭಾಗ್ಯಮ್ಮ ಮತ್ತು ಅರ್ಚನಾ ಅವರ ಹೆಸರನ್ನು ದೋಷಾರೋಪಪಟ್ಟಿಯಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಿ.ಮಧುಸೂದನ್, ಪ್ರಭು ಬಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>