<p><strong>ದಾವಣಗೆರೆ:</strong> ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತ್ಯೇಕ ಸಭೆಗಳನ್ನು ನಡೆಸುವುದು ಸರಿಯಲ್ಲ. ಇಂತಹ ಗುಂಪುಗಾರಿಕೆ ಕಾಂಗ್ರೆಸ್ನಲ್ಲಿ ಬಹುದಿನ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರು ನಡೆಸುತ್ತಿರುವ ಪ್ರತ್ಯೇಕ ಸಭೆಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಉಪಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಇಂತಹ ಸಂದರ್ಭದಲ್ಲಿ ಪ್ರತ್ಯೇಕ ಸಭೆ, ಸಮಾರಂಭಗಳನ್ನು ನಡೆಸುವುದು ಅನಗತ್ಯ. ಇದೇ ರೀತಿಯ ಸಭೆಗಳನ್ನು ನಡೆಸಲು ಉಳಿದವರಿಗೂ ಬರುತ್ತದೆ. ಆದರೆ, ಇದು ಗುಂಪುಗಾರಿಕೆ ಮಾಡಿದಂತೆ ಆಗುತ್ತದೆ’ ಎಂದರು.</p>.<p>‘ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ಕ್ಷೇತ್ರದ ಗೆಲುವಿಗೆ ಸಂಬಂಧಿಸಿದಂತೆ ಪೂರಕ ಮಾಹಿತಿಗಳನ್ನು ಇಟ್ಟುಕೊಂಡು ಚರ್ಚಿಸಬೇಕು. ಈ ಮೂಲಕ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಉಪಚುನಾವಣೆಯ ಕುರಿತು ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಪುತ್ರ ಸಮರ್ಥ್ ಶಾಮನೂರು ಅಭಿಪ್ರಾಯವನ್ನೂ ಕೇಳಲಾಗುವುದು’ ಎಂದು ನುಡಿದರು.</p>.<div><blockquote>ಉಪಚುನಾವಣೆಗಿಂತ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವಕ್ಕೆ ಆದ್ಯತೆ. ಜಾತ್ರೆಯ ಬಳಿಕ ಚರ್ಚಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು</blockquote><span class="attribution"> ಎಸ್.ಎಸ್.ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತ್ಯೇಕ ಸಭೆಗಳನ್ನು ನಡೆಸುವುದು ಸರಿಯಲ್ಲ. ಇಂತಹ ಗುಂಪುಗಾರಿಕೆ ಕಾಂಗ್ರೆಸ್ನಲ್ಲಿ ಬಹುದಿನ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರು ನಡೆಸುತ್ತಿರುವ ಪ್ರತ್ಯೇಕ ಸಭೆಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಉಪಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಇಂತಹ ಸಂದರ್ಭದಲ್ಲಿ ಪ್ರತ್ಯೇಕ ಸಭೆ, ಸಮಾರಂಭಗಳನ್ನು ನಡೆಸುವುದು ಅನಗತ್ಯ. ಇದೇ ರೀತಿಯ ಸಭೆಗಳನ್ನು ನಡೆಸಲು ಉಳಿದವರಿಗೂ ಬರುತ್ತದೆ. ಆದರೆ, ಇದು ಗುಂಪುಗಾರಿಕೆ ಮಾಡಿದಂತೆ ಆಗುತ್ತದೆ’ ಎಂದರು.</p>.<p>‘ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ಕ್ಷೇತ್ರದ ಗೆಲುವಿಗೆ ಸಂಬಂಧಿಸಿದಂತೆ ಪೂರಕ ಮಾಹಿತಿಗಳನ್ನು ಇಟ್ಟುಕೊಂಡು ಚರ್ಚಿಸಬೇಕು. ಈ ಮೂಲಕ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಉಪಚುನಾವಣೆಯ ಕುರಿತು ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಪುತ್ರ ಸಮರ್ಥ್ ಶಾಮನೂರು ಅಭಿಪ್ರಾಯವನ್ನೂ ಕೇಳಲಾಗುವುದು’ ಎಂದು ನುಡಿದರು.</p>.<div><blockquote>ಉಪಚುನಾವಣೆಗಿಂತ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವಕ್ಕೆ ಆದ್ಯತೆ. ಜಾತ್ರೆಯ ಬಳಿಕ ಚರ್ಚಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು</blockquote><span class="attribution"> ಎಸ್.ಎಸ್.ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>