<p><strong>ದಾವಣಗೆರೆ:</strong> ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ತೀವ್ರತೆ ಹೆಚ್ಚುತ್ತಿದ್ದು, ಅಗ್ನಿ ಅವಘಡಗಳ ಸಂಖ್ಯೆಯೂ ಏರುಮುಖದಲ್ಲಿ ಸಾಗಿದೆ. </p>.<p>ಜನವರಿಯಲ್ಲಿ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಅಗ್ನಿಶಾಮಕ ಠಾಣೆಗಳಿಗೆ ಒಟ್ಟು 110 ಕರೆಗಳು ಬಂದಿವೆ. ಫೆಬ್ರುವರಿಯಲ್ಲಿ 147 ಕರೆಗಳು ಬಂದಿದ್ದು, ಅಗ್ನಿಶಾಮಕ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯ ಜ್ವಾಲೆಗೆ ಸಿಲುಕಿದ್ದ ಸ್ವತ್ತುಗಳನ್ನು ರಕ್ಷಿಸಿ, ಜೀವಹಾನಿ ತಪ್ಪಿಸಲು ಪ್ರಯತ್ನಿಸಿದ್ದಾರೆ. </p>.<p>‘ಬಿಸಿಲು ಹಾಗೂ ಇನ್ನಿತರ ಕಾರಣಗಳಿಗೆ ಬೇಸಿಗೆ ಅವಧಿಯಲ್ಲಿ ಅಗ್ನಿ ಅವಘಡಗಳು ಸಹಜವಾಗಿಯೇ ಹೆಚ್ಚಾಗುತ್ತವೆ. ಆದರೆ, ಈ ಬಾರಿ ಎರಡು ತಿಂಗಳಲ್ಲಿ ನಿರೀಕ್ಷೆಗೂ ಮೀರಿ ಬೆಂಕಿ ಅನಾಹುತಗಳು ಸಂಭವಿಸಿರುವುದು ಕಳವಳಕಾರಿಯಾಗಿದೆ. ಸಾರ್ವಜನಿಕರು ಬೇಸಿಗೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅವಶ್ಯವಾಗಿದೆ’ ಎನ್ನುತ್ತಾರೆ ದಾವಣಗೆರೆ ಅಗ್ನಿಶಾಮಕ ಠಾಣಾಧಿಕಾರಿ ಫಕೀರಪ್ಪ ಕೆ. ಉಪ್ಪಾರ. </p>.<p>ಈಚೆಗೆ ನಗರದ ವಿವಿಧೆಡೆ ಒಂದೇ ದಿನ 4 ಅಗ್ನಿ ಅವಘಡ ಪ್ರಕರಣಗಳು ವರದಿಯಾಗಿವೆ. ಬಹುತೇಕ ಎಲ್ಲವೂ ಸಣ್ಣ ಪ್ರಮಾಣದಲ್ಲಿ ಉಂಟಾದ ಅಗ್ನಿ ಅವಘಡಗಳಾಗಿದ್ದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಖಾಲಿ ಜಾಗಗಳಲ್ಲಿ ಒಣ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದರಿಂದ ಅದು ಬೇರೆಡೆಗೂ ವಿಸ್ತರಿಸುತ್ತಿದೆ. ಗುಡಿಸಲು, ಹುಲ್ಲಿನ ಬಣವೆಗಳು, ಒಣ ತ್ಯಾಜ್ಯಕ್ಕೆ ಬೆಂಕಿ ಬೀಳುವ ಪ್ರಕರಣಗಳು ಹೆಚ್ಚಾಗುತ್ತಿವೆ. </p>.<p><strong>ಜಿಲ್ಲೆಯಲ್ಲಿ 7 ವಾಹನಗಳು: </strong>ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಜಗಳೂರು, ಹರಿಹರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5 ಅಗ್ನಿಶಾಮಕ ಠಾಣೆಗಳಿವೆ. ಈ ಪೈಕಿ ದಾವಣಗೆರೆಯಲ್ಲಿ 3 ಅಗ್ನಿಶಾಮಕ ವಾಹನಗಳಿವೆ. ಇನ್ನುಳಿದ ಠಾಣೆಗಳಲ್ಲಿ ತಲಾ ಒಂದು ವಾಹನಗಳಿವೆ. </p>.<p>ಪ್ರತೀ ಠಾಣೆಯೂ ತನ್ನದೇ ಆದ ಬೋರ್ವೆಲ್ಗಳನ್ನು ಹೊಂದಿವೆ. ಇಡೀ ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಲಭ್ಯತೆ ಇದೆ ಎಂಬ ಬಗ್ಗೆ ಪಾಯಿಂಟ್ಗಳನ್ನು ಗುರುತಿಸಲಾಗಿದೆ. ಎಲ್ಲಿ ಅಗ್ನಿ ದುರಂತ ಸಂಭವಿಸಿರುತ್ತದೆಯೋ ಅಲ್ಲಿಗೆ ಸಮೀಪದ ಪಾಯಿಂಟ್ನಿಂದ ನೀರು ತುಂಬಿಸಿಕೊಳ್ಳಲಾಗುತ್ತಿದೆ. ಕಾಲುವೆ, ಬಾವಿ, ಕೆರೆ, ಅಣೆಕಟ್ಟು, ಹಳ್ಳ ಮಾತ್ರವಲ್ಲದೇ, ಅಗತ್ಯಬಿದ್ದರೆ ರೈತರ ಬೋರ್ವೆಲ್ಗಳಿಂದಲೂ ನೀರು ಪಡೆಯಲಾಗುತ್ತಿದೆ. </p>.<p>ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒಂದೊಂದೇ ವಾಹನಗಳು ಇವೆ. ಒಂದೇ ಸಮಯದಲ್ಲಿ ಹಲವೆಡೆ ಅಗ್ನಿ ಅವಘಡಗಳು ಸಂಭವಿಸಿದಾಗ ನೆರೆಯ ತಾಲ್ಲೂಕುಗಳಿಂದ ಅಗ್ನಿಶಾಮಕ ವಾಹನಗಳನ್ನು ಕರೆಸಿಕೊಂಡು ಅನಾಹುತ ತಪ್ಪಿಸಲಾಗುತ್ತಿದೆ. </p>.<p><strong>3 ಕಡೆ ಜಾಗಕ್ಕೆ ಮನವಿ:</strong> ಅಣಜಿ, ಮಾಯಕೊಂಡ ಹಾಗೂ ಸಂತೇಬೆನ್ನೂರು ಭಾಗದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಿಸಲು ಜಾಗ ನೀಡುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯವೂ ನಡೆಯುತ್ತಿದೆ. </p>.<p><strong>ಬರಲಿವೆ ಮತ್ತಷ್ಟು ವಾಹನಗಳು </strong></p><p>‘ಸದ್ಯಕ್ಕೆ ಸಿಬ್ಬಂದಿ ಹಾಗೂ ವಾಹನಗಳ ಕೊರತೆ ಇಲ್ಲ. ದಾವಣಗೆರೆ ವಲಯಕ್ಕೆ (ದಾವಣಗೆರೆ ಚಿತ್ರದುರ್ಗ ಹಾವೇರಿ) ಇನ್ನೂ 2–3 ತಿಂಗಳಲ್ಲೇ 4 ಹೊಸ ಅಗ್ನಿಶಾಮಕ ವಾಹನಗಳು ಸೇರ್ಪಡೆಯಾಗಲಿವೆ’ ಎಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಎಂ.ಎನ್.ನಾಗೇಶ್ ತಿಳಿಸಿದರು. ‘2025ಕ್ಕೆ ಹೋಲಿಸಿದರೆ ಈ ವರ್ಷದ ಆರಂಭದಲ್ಲೇ ಶೇ 20ರಷ್ಟು ಅಗ್ನಿ ಅವಘಡಗಳು ಹೆಚ್ಚಾಗಿವೆ. ಬೆಂಕಿ ಅಥವಾ ಇನ್ನಿತರ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ಸಿಬ್ಬಂದಿಗೆ ವಿಳಾಸ ಹಾಗೂ ಅವಘಡದ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಬೇಕು. ಇದರಿಂದ ಅಗತ್ಯವಿರುವ ಉಪಕರಣಗಳೊಂದಿಗೆ ಶೀಘ್ರವೇ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ನಡೆಸಲು ಅನುಕೂಲವಾಗಲಿದೆ’ ಎಂದು ಹೇಳಿದರು. </p>.<p><strong>ಅರಿವು ಕಾರ್ಯಕ್ರಮ ಪ್ರಾತ್ಯಕ್ಷಿಕೆ</strong> </p><p>ಅಗ್ನಿ ಅವಘಡಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸದಲ್ಲೂ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿದ್ದಾರೆ. ‘ಪ್ರತೀ ಠಾಣೆಯಿಂದ ವಾರಕ್ಕೆ ಒಂದಾದರೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಗುರಿ ಹೊಂದಿದ್ದೇವೆ. ಶಾಲೆ– ಕಾಲೇಜುಗಳು ಸಂಘ– ಸಂಸ್ಥೆಗಳು ಕೈಗಾರಿಕೆಗಳು ಸೇರಿದಂತೆ ಖಾಸಗಿ ಕಂಪನಿಗಳಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಅಗ್ನಿ ಅವಘಡಗಳು ಉಂಟಾಗದಂತೆ ಮುಂಜಾಗ್ರತೆ ವಹಿಸುವುದು ಹೇಗೆ? ಬೆಂಕಿ ಕಾಣಿಸಿಕೊಂಡಾಗ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಮಾಹಿತಿ ನೀಡುವ ಜೊತೆಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ’ ಎನ್ನುತ್ತಾರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತಕುಮಾರ್ ಎನ್. ‘ದಾವಣಗೆರೆಯಲ್ಲಿರುವ ಅಗ್ನಿಶಾಮಕ ಠಾಣೆಯ ಕಟ್ಟಡವು 50 ವರ್ಷಕ್ಕೂ ಹೆಚ್ಚು ಹಳೆಯದಾಗಿದೆ. ನೂತನ ಕಟ್ಟಡ ನಿರ್ಮಿಸಲು ಲೋಕೋಪಯೋಗಿ ಇಲಾಖೆಯಿಂದ ಅಂದಾಜುಪಟ್ಟಿ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು. </p>.<p><strong>ನ್ಯಾಮತಿಯಲ್ಲಿ ನೂತನ ಅಗ್ನಿಶಾಮಕ ಠಾಣೆ </strong></p><p><strong>ನ್ಯಾಮತಿ:</strong> ನ್ಯಾಮತಿ ತಾಲ್ಲೂಕು ರಚನೆಯಾಗಿ 8 ವರ್ಷ ಕಳೆದರೂ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ 75 ಗ್ರಾಮಗಳು 17 ಗ್ರಾಮ ಪಂಚಾಯಿತಿಗಳಿವೆ. ಆದರೂ ಇಲ್ಲಿ ಅಗ್ನಿಶಾಮಕ ಠಾಣೆ ಇಲ್ಲ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಅಗ್ನಿ ಅವಘಡ ಪ್ರವಾಹ ಹಾಗೂ ಇನ್ನಿತರ ಸಮಸ್ಯೆ ಉಂಟಾದರೂ ನೆರೆಯ ಹೊನ್ನಾಳಿಯಿಂದ ಅಗ್ನಿಶಾಮಕದಳದ ವಾಹನ ಬರಬೇಕಿದೆ. ಅಷ್ಟರಲ್ಲಿ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಈ ಕಾರಣಕ್ಕೆ ನ್ಯಾಮತಿಯಲ್ಲಿ ತಾತ್ಕಾಲಿಕವಾಗಿಯಾದರೂ ಒಂದು ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಿ ಸಿಬ್ಬಂದಿಯನ್ನು ನೇಮಿಸುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದಾರೆ. ಆದಕ್ಕೆ ಈಗ ಸ್ಪಂದನೆ ಸಿಕ್ಕಿದೆ. ಇದೀಗ ಪಟ್ಟಣದ ಪ್ರಥಮದರ್ಜೆ ಕಾಲೇಜಿನ ಪಕ್ಕದ ಒಂದು ಎಕರೆ ಜಾಗವನ್ನು ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಅಂದಾಜು ₹ 3 ಕೋಟಿ ಮೊತ್ತದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಜಿ.ಶಾಂತನಗೌಡ ಈಚೆಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಸುಸಜ್ಜಿತವಾದ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಿಸಿ ಅಗತ್ಯ ಸಿಬ್ಬಂದಿ ಹಾಗೂ ವಾಹನಗಳನ್ನು ಒದಗಿಸಲಿ. ಆದಷ್ಟು ಬೇಗ ಸೇವೆ ದೊರೆಯುವಂತಾಗಲಿ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಅಗ್ನಿ ಅವಘಡ ಹಾಗೂ ಅಪಘಾತ ಪ್ರಕರಣಗಳಲ್ಲಿ ಗಾಯಾಳುಗಳನ್ನು ರಕ್ಷಿಸಿದಾಗ ಸಿಗುವ ಖುಷಿ ಸಮಾಧಾನ ಬೇರೆಲ್ಲೂ ಸಿಗುವುದಿಲ್ಲ. ಇದೊಂದು ಪುಣ್ಯದ ಕಾರ್ಯವೆಂದು ಭಾವಿಸಿ ಕೆಲಸ ಮಾಡುತ್ತೇವೆ </blockquote><span class="attribution">-ಫಕೀರಪ್ಪ ಕೆ. ಉಪ್ಪಾರ ದಾವಣಗೆರೆ ಅಗ್ನಿಶಾಮಕ ಠಾಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ತೀವ್ರತೆ ಹೆಚ್ಚುತ್ತಿದ್ದು, ಅಗ್ನಿ ಅವಘಡಗಳ ಸಂಖ್ಯೆಯೂ ಏರುಮುಖದಲ್ಲಿ ಸಾಗಿದೆ. </p>.<p>ಜನವರಿಯಲ್ಲಿ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಅಗ್ನಿಶಾಮಕ ಠಾಣೆಗಳಿಗೆ ಒಟ್ಟು 110 ಕರೆಗಳು ಬಂದಿವೆ. ಫೆಬ್ರುವರಿಯಲ್ಲಿ 147 ಕರೆಗಳು ಬಂದಿದ್ದು, ಅಗ್ನಿಶಾಮಕ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯ ಜ್ವಾಲೆಗೆ ಸಿಲುಕಿದ್ದ ಸ್ವತ್ತುಗಳನ್ನು ರಕ್ಷಿಸಿ, ಜೀವಹಾನಿ ತಪ್ಪಿಸಲು ಪ್ರಯತ್ನಿಸಿದ್ದಾರೆ. </p>.<p>‘ಬಿಸಿಲು ಹಾಗೂ ಇನ್ನಿತರ ಕಾರಣಗಳಿಗೆ ಬೇಸಿಗೆ ಅವಧಿಯಲ್ಲಿ ಅಗ್ನಿ ಅವಘಡಗಳು ಸಹಜವಾಗಿಯೇ ಹೆಚ್ಚಾಗುತ್ತವೆ. ಆದರೆ, ಈ ಬಾರಿ ಎರಡು ತಿಂಗಳಲ್ಲಿ ನಿರೀಕ್ಷೆಗೂ ಮೀರಿ ಬೆಂಕಿ ಅನಾಹುತಗಳು ಸಂಭವಿಸಿರುವುದು ಕಳವಳಕಾರಿಯಾಗಿದೆ. ಸಾರ್ವಜನಿಕರು ಬೇಸಿಗೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅವಶ್ಯವಾಗಿದೆ’ ಎನ್ನುತ್ತಾರೆ ದಾವಣಗೆರೆ ಅಗ್ನಿಶಾಮಕ ಠಾಣಾಧಿಕಾರಿ ಫಕೀರಪ್ಪ ಕೆ. ಉಪ್ಪಾರ. </p>.<p>ಈಚೆಗೆ ನಗರದ ವಿವಿಧೆಡೆ ಒಂದೇ ದಿನ 4 ಅಗ್ನಿ ಅವಘಡ ಪ್ರಕರಣಗಳು ವರದಿಯಾಗಿವೆ. ಬಹುತೇಕ ಎಲ್ಲವೂ ಸಣ್ಣ ಪ್ರಮಾಣದಲ್ಲಿ ಉಂಟಾದ ಅಗ್ನಿ ಅವಘಡಗಳಾಗಿದ್ದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಖಾಲಿ ಜಾಗಗಳಲ್ಲಿ ಒಣ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದರಿಂದ ಅದು ಬೇರೆಡೆಗೂ ವಿಸ್ತರಿಸುತ್ತಿದೆ. ಗುಡಿಸಲು, ಹುಲ್ಲಿನ ಬಣವೆಗಳು, ಒಣ ತ್ಯಾಜ್ಯಕ್ಕೆ ಬೆಂಕಿ ಬೀಳುವ ಪ್ರಕರಣಗಳು ಹೆಚ್ಚಾಗುತ್ತಿವೆ. </p>.<p><strong>ಜಿಲ್ಲೆಯಲ್ಲಿ 7 ವಾಹನಗಳು: </strong>ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಜಗಳೂರು, ಹರಿಹರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5 ಅಗ್ನಿಶಾಮಕ ಠಾಣೆಗಳಿವೆ. ಈ ಪೈಕಿ ದಾವಣಗೆರೆಯಲ್ಲಿ 3 ಅಗ್ನಿಶಾಮಕ ವಾಹನಗಳಿವೆ. ಇನ್ನುಳಿದ ಠಾಣೆಗಳಲ್ಲಿ ತಲಾ ಒಂದು ವಾಹನಗಳಿವೆ. </p>.<p>ಪ್ರತೀ ಠಾಣೆಯೂ ತನ್ನದೇ ಆದ ಬೋರ್ವೆಲ್ಗಳನ್ನು ಹೊಂದಿವೆ. ಇಡೀ ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಲಭ್ಯತೆ ಇದೆ ಎಂಬ ಬಗ್ಗೆ ಪಾಯಿಂಟ್ಗಳನ್ನು ಗುರುತಿಸಲಾಗಿದೆ. ಎಲ್ಲಿ ಅಗ್ನಿ ದುರಂತ ಸಂಭವಿಸಿರುತ್ತದೆಯೋ ಅಲ್ಲಿಗೆ ಸಮೀಪದ ಪಾಯಿಂಟ್ನಿಂದ ನೀರು ತುಂಬಿಸಿಕೊಳ್ಳಲಾಗುತ್ತಿದೆ. ಕಾಲುವೆ, ಬಾವಿ, ಕೆರೆ, ಅಣೆಕಟ್ಟು, ಹಳ್ಳ ಮಾತ್ರವಲ್ಲದೇ, ಅಗತ್ಯಬಿದ್ದರೆ ರೈತರ ಬೋರ್ವೆಲ್ಗಳಿಂದಲೂ ನೀರು ಪಡೆಯಲಾಗುತ್ತಿದೆ. </p>.<p>ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒಂದೊಂದೇ ವಾಹನಗಳು ಇವೆ. ಒಂದೇ ಸಮಯದಲ್ಲಿ ಹಲವೆಡೆ ಅಗ್ನಿ ಅವಘಡಗಳು ಸಂಭವಿಸಿದಾಗ ನೆರೆಯ ತಾಲ್ಲೂಕುಗಳಿಂದ ಅಗ್ನಿಶಾಮಕ ವಾಹನಗಳನ್ನು ಕರೆಸಿಕೊಂಡು ಅನಾಹುತ ತಪ್ಪಿಸಲಾಗುತ್ತಿದೆ. </p>.<p><strong>3 ಕಡೆ ಜಾಗಕ್ಕೆ ಮನವಿ:</strong> ಅಣಜಿ, ಮಾಯಕೊಂಡ ಹಾಗೂ ಸಂತೇಬೆನ್ನೂರು ಭಾಗದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಿಸಲು ಜಾಗ ನೀಡುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯವೂ ನಡೆಯುತ್ತಿದೆ. </p>.<p><strong>ಬರಲಿವೆ ಮತ್ತಷ್ಟು ವಾಹನಗಳು </strong></p><p>‘ಸದ್ಯಕ್ಕೆ ಸಿಬ್ಬಂದಿ ಹಾಗೂ ವಾಹನಗಳ ಕೊರತೆ ಇಲ್ಲ. ದಾವಣಗೆರೆ ವಲಯಕ್ಕೆ (ದಾವಣಗೆರೆ ಚಿತ್ರದುರ್ಗ ಹಾವೇರಿ) ಇನ್ನೂ 2–3 ತಿಂಗಳಲ್ಲೇ 4 ಹೊಸ ಅಗ್ನಿಶಾಮಕ ವಾಹನಗಳು ಸೇರ್ಪಡೆಯಾಗಲಿವೆ’ ಎಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಎಂ.ಎನ್.ನಾಗೇಶ್ ತಿಳಿಸಿದರು. ‘2025ಕ್ಕೆ ಹೋಲಿಸಿದರೆ ಈ ವರ್ಷದ ಆರಂಭದಲ್ಲೇ ಶೇ 20ರಷ್ಟು ಅಗ್ನಿ ಅವಘಡಗಳು ಹೆಚ್ಚಾಗಿವೆ. ಬೆಂಕಿ ಅಥವಾ ಇನ್ನಿತರ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ಸಿಬ್ಬಂದಿಗೆ ವಿಳಾಸ ಹಾಗೂ ಅವಘಡದ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಬೇಕು. ಇದರಿಂದ ಅಗತ್ಯವಿರುವ ಉಪಕರಣಗಳೊಂದಿಗೆ ಶೀಘ್ರವೇ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ನಡೆಸಲು ಅನುಕೂಲವಾಗಲಿದೆ’ ಎಂದು ಹೇಳಿದರು. </p>.<p><strong>ಅರಿವು ಕಾರ್ಯಕ್ರಮ ಪ್ರಾತ್ಯಕ್ಷಿಕೆ</strong> </p><p>ಅಗ್ನಿ ಅವಘಡಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸದಲ್ಲೂ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿದ್ದಾರೆ. ‘ಪ್ರತೀ ಠಾಣೆಯಿಂದ ವಾರಕ್ಕೆ ಒಂದಾದರೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಗುರಿ ಹೊಂದಿದ್ದೇವೆ. ಶಾಲೆ– ಕಾಲೇಜುಗಳು ಸಂಘ– ಸಂಸ್ಥೆಗಳು ಕೈಗಾರಿಕೆಗಳು ಸೇರಿದಂತೆ ಖಾಸಗಿ ಕಂಪನಿಗಳಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಅಗ್ನಿ ಅವಘಡಗಳು ಉಂಟಾಗದಂತೆ ಮುಂಜಾಗ್ರತೆ ವಹಿಸುವುದು ಹೇಗೆ? ಬೆಂಕಿ ಕಾಣಿಸಿಕೊಂಡಾಗ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಮಾಹಿತಿ ನೀಡುವ ಜೊತೆಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ’ ಎನ್ನುತ್ತಾರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತಕುಮಾರ್ ಎನ್. ‘ದಾವಣಗೆರೆಯಲ್ಲಿರುವ ಅಗ್ನಿಶಾಮಕ ಠಾಣೆಯ ಕಟ್ಟಡವು 50 ವರ್ಷಕ್ಕೂ ಹೆಚ್ಚು ಹಳೆಯದಾಗಿದೆ. ನೂತನ ಕಟ್ಟಡ ನಿರ್ಮಿಸಲು ಲೋಕೋಪಯೋಗಿ ಇಲಾಖೆಯಿಂದ ಅಂದಾಜುಪಟ್ಟಿ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು. </p>.<p><strong>ನ್ಯಾಮತಿಯಲ್ಲಿ ನೂತನ ಅಗ್ನಿಶಾಮಕ ಠಾಣೆ </strong></p><p><strong>ನ್ಯಾಮತಿ:</strong> ನ್ಯಾಮತಿ ತಾಲ್ಲೂಕು ರಚನೆಯಾಗಿ 8 ವರ್ಷ ಕಳೆದರೂ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ 75 ಗ್ರಾಮಗಳು 17 ಗ್ರಾಮ ಪಂಚಾಯಿತಿಗಳಿವೆ. ಆದರೂ ಇಲ್ಲಿ ಅಗ್ನಿಶಾಮಕ ಠಾಣೆ ಇಲ್ಲ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಅಗ್ನಿ ಅವಘಡ ಪ್ರವಾಹ ಹಾಗೂ ಇನ್ನಿತರ ಸಮಸ್ಯೆ ಉಂಟಾದರೂ ನೆರೆಯ ಹೊನ್ನಾಳಿಯಿಂದ ಅಗ್ನಿಶಾಮಕದಳದ ವಾಹನ ಬರಬೇಕಿದೆ. ಅಷ್ಟರಲ್ಲಿ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಈ ಕಾರಣಕ್ಕೆ ನ್ಯಾಮತಿಯಲ್ಲಿ ತಾತ್ಕಾಲಿಕವಾಗಿಯಾದರೂ ಒಂದು ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಿ ಸಿಬ್ಬಂದಿಯನ್ನು ನೇಮಿಸುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದಾರೆ. ಆದಕ್ಕೆ ಈಗ ಸ್ಪಂದನೆ ಸಿಕ್ಕಿದೆ. ಇದೀಗ ಪಟ್ಟಣದ ಪ್ರಥಮದರ್ಜೆ ಕಾಲೇಜಿನ ಪಕ್ಕದ ಒಂದು ಎಕರೆ ಜಾಗವನ್ನು ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಅಂದಾಜು ₹ 3 ಕೋಟಿ ಮೊತ್ತದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಜಿ.ಶಾಂತನಗೌಡ ಈಚೆಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಸುಸಜ್ಜಿತವಾದ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಿಸಿ ಅಗತ್ಯ ಸಿಬ್ಬಂದಿ ಹಾಗೂ ವಾಹನಗಳನ್ನು ಒದಗಿಸಲಿ. ಆದಷ್ಟು ಬೇಗ ಸೇವೆ ದೊರೆಯುವಂತಾಗಲಿ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಅಗ್ನಿ ಅವಘಡ ಹಾಗೂ ಅಪಘಾತ ಪ್ರಕರಣಗಳಲ್ಲಿ ಗಾಯಾಳುಗಳನ್ನು ರಕ್ಷಿಸಿದಾಗ ಸಿಗುವ ಖುಷಿ ಸಮಾಧಾನ ಬೇರೆಲ್ಲೂ ಸಿಗುವುದಿಲ್ಲ. ಇದೊಂದು ಪುಣ್ಯದ ಕಾರ್ಯವೆಂದು ಭಾವಿಸಿ ಕೆಲಸ ಮಾಡುತ್ತೇವೆ </blockquote><span class="attribution">-ಫಕೀರಪ್ಪ ಕೆ. ಉಪ್ಪಾರ ದಾವಣಗೆರೆ ಅಗ್ನಿಶಾಮಕ ಠಾಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>