<p><strong>ದಾವಣಗೆರೆ:</strong> ಜರ್ಮನ್ ಮಾದರಿಯಲ್ಲಿ ನೂತನವಾಗಿ ರೂಪಿಸಿರುವ ಗಾಂಧಿ ವೃತ್ತ ಸೇರಿದಂತೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭಾನುವಾರ ಚಾಲನೆ ನೀಡಿದರು.</p>.<p>₹ 5 ಕೋಟಿ ವೆಚ್ಚದಲ್ಲಿ ಹೊಸ ರೂಪದ ಪಡೆದ ಗಾಂಧಿ ವೃತ್ತ, ₹ 2 ಕೋಟಿ ವೆಚ್ಚದ ಅನ್ನದಾನೇಶ್ವರ ಮಠದ ಸಮುದಾಯ ಭವನದ ಭೂಮಿಪೂಜೆ, ₹ 1 ಕೋಟಿ ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಅಭಿವೃದ್ಧಿ, ಕೆ.ಆರ್.ರಸ್ತೆಯ ಜಗಳೂರು ಬಸ್ ನಿಲ್ದಾಣದ ಸಮೀಪ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.</p>.<p>‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಶಾಸಕರೂ ಆಗಿದ್ದ ತಂದೆ ಶಾಮನೂರು ಶಿವಶಂಕರಪ್ಪ ಅವರು ಅನುದಾನ ನೀಡಿದ್ದರು. ಅನ್ನದಾನೇಶ್ವರ ಮಠದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಭಕ್ತರ ಬಳಕೆಗೆ ಅವಕಾಶ ಮಾಡಿಕೊಡುವಂತೆ ಹೇಳಿದ್ದೇನೆ’ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜರ್ಮನ್ ಮಾದರಿಯಲ್ಲಿ ನೂತನವಾಗಿ ರೂಪಿಸಿರುವ ಗಾಂಧಿ ವೃತ್ತ ಸೇರಿದಂತೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭಾನುವಾರ ಚಾಲನೆ ನೀಡಿದರು.</p>.<p>₹ 5 ಕೋಟಿ ವೆಚ್ಚದಲ್ಲಿ ಹೊಸ ರೂಪದ ಪಡೆದ ಗಾಂಧಿ ವೃತ್ತ, ₹ 2 ಕೋಟಿ ವೆಚ್ಚದ ಅನ್ನದಾನೇಶ್ವರ ಮಠದ ಸಮುದಾಯ ಭವನದ ಭೂಮಿಪೂಜೆ, ₹ 1 ಕೋಟಿ ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಅಭಿವೃದ್ಧಿ, ಕೆ.ಆರ್.ರಸ್ತೆಯ ಜಗಳೂರು ಬಸ್ ನಿಲ್ದಾಣದ ಸಮೀಪ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.</p>.<p>‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಶಾಸಕರೂ ಆಗಿದ್ದ ತಂದೆ ಶಾಮನೂರು ಶಿವಶಂಕರಪ್ಪ ಅವರು ಅನುದಾನ ನೀಡಿದ್ದರು. ಅನ್ನದಾನೇಶ್ವರ ಮಠದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಭಕ್ತರ ಬಳಕೆಗೆ ಅವಕಾಶ ಮಾಡಿಕೊಡುವಂತೆ ಹೇಳಿದ್ದೇನೆ’ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>