<p><strong>ದಾವಣಗೆರೆ</strong>: ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಹಿಂದೂಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಗೂಂಡಾ ವರ್ತನೆ ತೋರಿದವರನ್ನು ಬಂಧಿಸಬೇಕು ಎಂದು ಹಿಂದೂ ಸುರಕ್ಷಾ ಸಮಿತಿ ಮುಖಂಡ ಸಿದ್ದಲಿಂಗಸ್ವಾಮಿ ಒತ್ತಾಯಿಸಿದರು.</p>.<p>‘ಉದ್ಯಾನದ ಬದಿಗೆ ಇದ್ದ ಫ್ಲೆಕ್ಸ್ನ್ನು ಕಿತ್ತು ಹಿಂದೂಗಳ ಮನೆ ಎದುರು ಅಳವಡಿಸಿದ್ದು ಉದ್ದೇಶಪೂರ್ವಕ. ಇದನ್ನು ಪ್ರಶ್ನಿಸಿದ ಕುಟುಂಬಗಳ ಮೇಲೆ ದೌರ್ಜನ್ಯ ನಡೆಸಲಾಗಿದೆ. ಮಹಿಳೆಯರ ಮೇಲೂ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಈ ಕೃತ್ಯ ನಡೆದಿರೂ ಸಂತ್ರಸ್ತರ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಾರ್ಲ್ ಮಾರ್ಕ್ಸ್ ನಗರದಲ್ಲಿ ಸಂಭವಿಸಿದ ಗಲಭೆಯಿಂದ ಜನರು ಭೀತಿಗೆ ಒಳಗಾಗಿದ್ದಾರೆ. ಮನೆಗಳನ್ನು ತೊರೆದು ಹೋಗುವ ಆಲೋಚನೆ ಮಾಡುತ್ತಿದ್ದಾರೆ. ಇಲ್ಲಿನ ಜನರನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಈ ಗಲಭೆ ನಡೆಸಲಾಗಿದೆ. ಇದೊಂದು ರೀತಿಯ ಲ್ಯಾಂಡ್ ಜಿಹಾದ್’ ಎಂದು ಮಾಜಿ ಮೇಯರ್ ಎಸ್.ಟಿ. ವೀರೇಶ್ ಆರೋಪಿಸಿದರು.</p>.<p>‘ನೂರಾರು ಜನರು ಗುಂಪುಗೂಡಿ ದಲಿತ ಸಮುದಾಯದ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಗಲಭೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಶನಿವಾರದವರೆಗೆ ಕಾಲಾವಕಾಶವಿದೆ. ಪೊಲೀಸರ ಕ್ರಮ ನೋಡಿಕೊಂಡು ಭಾನುವಾರ ಹೋರಾಟ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಬಿ.ಜೆ. ಅಜಯ್ಕುಮಾರ್, ಕೋಳೆನಹಳ್ಳಿ ಬಿ.ಎಂ. ಸತೀಶ್, ಧನಂಜಯ ಕಡ್ಲೇಬಾಳು, ವಿನಾಯಕ ರಾನಡೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಹಿಂದೂಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಗೂಂಡಾ ವರ್ತನೆ ತೋರಿದವರನ್ನು ಬಂಧಿಸಬೇಕು ಎಂದು ಹಿಂದೂ ಸುರಕ್ಷಾ ಸಮಿತಿ ಮುಖಂಡ ಸಿದ್ದಲಿಂಗಸ್ವಾಮಿ ಒತ್ತಾಯಿಸಿದರು.</p>.<p>‘ಉದ್ಯಾನದ ಬದಿಗೆ ಇದ್ದ ಫ್ಲೆಕ್ಸ್ನ್ನು ಕಿತ್ತು ಹಿಂದೂಗಳ ಮನೆ ಎದುರು ಅಳವಡಿಸಿದ್ದು ಉದ್ದೇಶಪೂರ್ವಕ. ಇದನ್ನು ಪ್ರಶ್ನಿಸಿದ ಕುಟುಂಬಗಳ ಮೇಲೆ ದೌರ್ಜನ್ಯ ನಡೆಸಲಾಗಿದೆ. ಮಹಿಳೆಯರ ಮೇಲೂ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಈ ಕೃತ್ಯ ನಡೆದಿರೂ ಸಂತ್ರಸ್ತರ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಾರ್ಲ್ ಮಾರ್ಕ್ಸ್ ನಗರದಲ್ಲಿ ಸಂಭವಿಸಿದ ಗಲಭೆಯಿಂದ ಜನರು ಭೀತಿಗೆ ಒಳಗಾಗಿದ್ದಾರೆ. ಮನೆಗಳನ್ನು ತೊರೆದು ಹೋಗುವ ಆಲೋಚನೆ ಮಾಡುತ್ತಿದ್ದಾರೆ. ಇಲ್ಲಿನ ಜನರನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಈ ಗಲಭೆ ನಡೆಸಲಾಗಿದೆ. ಇದೊಂದು ರೀತಿಯ ಲ್ಯಾಂಡ್ ಜಿಹಾದ್’ ಎಂದು ಮಾಜಿ ಮೇಯರ್ ಎಸ್.ಟಿ. ವೀರೇಶ್ ಆರೋಪಿಸಿದರು.</p>.<p>‘ನೂರಾರು ಜನರು ಗುಂಪುಗೂಡಿ ದಲಿತ ಸಮುದಾಯದ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಗಲಭೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಶನಿವಾರದವರೆಗೆ ಕಾಲಾವಕಾಶವಿದೆ. ಪೊಲೀಸರ ಕ್ರಮ ನೋಡಿಕೊಂಡು ಭಾನುವಾರ ಹೋರಾಟ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಬಿ.ಜೆ. ಅಜಯ್ಕುಮಾರ್, ಕೋಳೆನಹಳ್ಳಿ ಬಿ.ಎಂ. ಸತೀಶ್, ಧನಂಜಯ ಕಡ್ಲೇಬಾಳು, ವಿನಾಯಕ ರಾನಡೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>