<p><strong>ದಾವಣಗೆರೆ:</strong> ಮಹಾನಗರ ಪಾಲಿಕೆಯ ‘ಇ–ಆಸ್ತಿ’ ತಂತ್ರಾಂಶವನ್ನು ಹ್ಯಾಕ್ ಮಾಡಲಾಗಿದ್ದು, ಐದು ಸ್ವತ್ತುಗಳಿಗೆ ಅಕ್ರಮವಾಗಿ ‘ಇ–ಆಸ್ತಿ’ ಅನುಮೋದನೆ ಸಿಕ್ಕಿದೆ. ಅಧಿಕಾರಿಗಳ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಬಳಸಿ ಈ ಕೃತ್ಯ ಎಸಗಿದ್ದು 6 ತಿಂಗಳ ಬಳಿಕ ಗೊತ್ತಾಗಿದೆ.</p>.<p>ಮಹಾನಗರ ಪಾಲಿಕೆಯ ‘ಇ–ಸ್ವತ್ತು’ ತಂತ್ರಾಂಶದಲ್ಲಿ ಅಧಿಕಾರಿಗಳ ಗಮನಕ್ಕೆ ಬಾರದೇ ‘ಇ–ಸ್ವತ್ತು’ ಅನುಮೋದನೆ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಿದಾಗ ಹ್ಯಾಕ್ ಆಗಿರುವುದು ಖಚಿತವಾಗಿದೆ. ಈ ಸಂಬಂಧ ಸಿಇಎನ್ ಠಾಣೆಗೆ ಮಹಾನಗರ ಪಾಲಿಕೆಯ ವಲಯ ಕಚೇರಿ 1ರ ಆಯುಕ್ತ ಕೆ. ನಾಗರಾಜ್ ದೂರು ನೀಡಿದ್ದಾರೆ.</p>.<p>‘ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 35 ವಾರ್ಡ್ಗಳಿವೆ. ಮೂರು ವಲಯ ಕಚೇರಿಗಳಲ್ಲಿ ‘ಇ-ಆಸ್ತಿ ನಿರ್ವಹಣೆ ಮಾಡಲಾಗುತ್ತಿದೆ. ಆಸ್ತಿಗಳ ಹೊಸ ಖಾತೆ, ವರ್ಗಾವಣೆಯಂತ ಪ್ರಕ್ರಿಯೆಗಳು ವಲಯ ಆಯುಕ್ತರ ಲಾಗಿನ್ ಮೂಲಕ ಅನುಮೋದನೆ ಪಡೆಯುವ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಅರಿತವರು ಅಧಿಕಾರಿಗಳ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ದುರ್ಬಳಕೆ ಮಾಡಿಕೊಂಡು ಕೃತ್ಯ ಎಸಗಿದ್ದಾರೆ’ ಎಂದು ದೂರಿನಲ್ಲಿದೆ.</p>.<p>‘ನಿಟುವಳ್ಳಿ, ಶಿವಕುಮಾರಸ್ವಾಮಿ ಬಡಾವಣೆ ಹಾಗೂ ದೊಡ್ಡಬೂದಿಹಾಳ್ ವ್ಯಾಪ್ತಿಯ 5 ಆಸ್ತಿಗಳನ್ನು ಬೇರೆ ಬೇರೆ ವಲಯ ಕಚೇರಿಗಳಲ್ಲಿ ಅನುಮೋದನೆ ಮಾಡಿಕೊಳ್ಳಲಾಗಿದೆ. 2025ರ ಜೂನ್ 12ರಿಂದ ನವೆಂಬರ್ 27ರ ಅವಧಿಯಲ್ಲಿ ಈ ಕೃತ್ಯ ಎಸಗಲಾಗಿದೆ’ ಎಂದು ವಲಯ ಆಯುಕ್ತರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಹಾನಗರ ಪಾಲಿಕೆಯ ‘ಇ–ಆಸ್ತಿ’ ತಂತ್ರಾಂಶವನ್ನು ಹ್ಯಾಕ್ ಮಾಡಲಾಗಿದ್ದು, ಐದು ಸ್ವತ್ತುಗಳಿಗೆ ಅಕ್ರಮವಾಗಿ ‘ಇ–ಆಸ್ತಿ’ ಅನುಮೋದನೆ ಸಿಕ್ಕಿದೆ. ಅಧಿಕಾರಿಗಳ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಬಳಸಿ ಈ ಕೃತ್ಯ ಎಸಗಿದ್ದು 6 ತಿಂಗಳ ಬಳಿಕ ಗೊತ್ತಾಗಿದೆ.</p>.<p>ಮಹಾನಗರ ಪಾಲಿಕೆಯ ‘ಇ–ಸ್ವತ್ತು’ ತಂತ್ರಾಂಶದಲ್ಲಿ ಅಧಿಕಾರಿಗಳ ಗಮನಕ್ಕೆ ಬಾರದೇ ‘ಇ–ಸ್ವತ್ತು’ ಅನುಮೋದನೆ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಿದಾಗ ಹ್ಯಾಕ್ ಆಗಿರುವುದು ಖಚಿತವಾಗಿದೆ. ಈ ಸಂಬಂಧ ಸಿಇಎನ್ ಠಾಣೆಗೆ ಮಹಾನಗರ ಪಾಲಿಕೆಯ ವಲಯ ಕಚೇರಿ 1ರ ಆಯುಕ್ತ ಕೆ. ನಾಗರಾಜ್ ದೂರು ನೀಡಿದ್ದಾರೆ.</p>.<p>‘ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 35 ವಾರ್ಡ್ಗಳಿವೆ. ಮೂರು ವಲಯ ಕಚೇರಿಗಳಲ್ಲಿ ‘ಇ-ಆಸ್ತಿ ನಿರ್ವಹಣೆ ಮಾಡಲಾಗುತ್ತಿದೆ. ಆಸ್ತಿಗಳ ಹೊಸ ಖಾತೆ, ವರ್ಗಾವಣೆಯಂತ ಪ್ರಕ್ರಿಯೆಗಳು ವಲಯ ಆಯುಕ್ತರ ಲಾಗಿನ್ ಮೂಲಕ ಅನುಮೋದನೆ ಪಡೆಯುವ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಅರಿತವರು ಅಧಿಕಾರಿಗಳ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ದುರ್ಬಳಕೆ ಮಾಡಿಕೊಂಡು ಕೃತ್ಯ ಎಸಗಿದ್ದಾರೆ’ ಎಂದು ದೂರಿನಲ್ಲಿದೆ.</p>.<p>‘ನಿಟುವಳ್ಳಿ, ಶಿವಕುಮಾರಸ್ವಾಮಿ ಬಡಾವಣೆ ಹಾಗೂ ದೊಡ್ಡಬೂದಿಹಾಳ್ ವ್ಯಾಪ್ತಿಯ 5 ಆಸ್ತಿಗಳನ್ನು ಬೇರೆ ಬೇರೆ ವಲಯ ಕಚೇರಿಗಳಲ್ಲಿ ಅನುಮೋದನೆ ಮಾಡಿಕೊಳ್ಳಲಾಗಿದೆ. 2025ರ ಜೂನ್ 12ರಿಂದ ನವೆಂಬರ್ 27ರ ಅವಧಿಯಲ್ಲಿ ಈ ಕೃತ್ಯ ಎಸಗಲಾಗಿದೆ’ ಎಂದು ವಲಯ ಆಯುಕ್ತರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>