<p><strong>ದಾವಣಗೆರೆ:</strong> ಮಕ್ಕಳ ಪಾಲನೆಗೆ ಸಂಬಂಧಿಸಿದ ವಿಚಾರವನ್ನು ಬಗೆಹರಿಸಿಕೊಳ್ಳಲು ಮುಂದಾದ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಗರದ ಎಂಸಿಸಿ ಬಡಾವಣೆಯ ಬಾಲ ನ್ಯಾಯ ಮಂಡಳಿಯ ಆವರಣದಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ.</p>.ದಾವಣಗೆರೆ | ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ.<p>ತಾಲ್ಲೂಕಿನ ಕಾಡಜ್ಜಿ ಗ್ರಾಮದ ಮುಷ್ಕಾನ್ ಬಾನು (26) ಕೊಲೆಯಾದ ಮಹಿಳೆ. ಕಲೀಂವುಲ್ಲಾ (35) ಕೊಲೆ ಮಾಡಿದ ಆರೋಪಿ. ಜಗಳ ಬಿಡಿಸಲು ಪ್ರಯತ್ನಿಸಿದ ಬಾನು ಅವರ ತಾಯಿ ಪರ್ಜಾನ್ (50) ಕೂಡ ಚಾಕು ಇರಿತಕ್ಕೆ ಒಳಗಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಮುಷ್ಕಾನ್ ಬಾನು ಹಾಗೂ ಕಲೀಂವುಲ್ಲಾ ದಂಪತಿ ಕೌಟುಂಬಿಕ ಕಲಹದಿಂದ ಮನನೊಂದು ವಿಚ್ಛೇದನ ಪಡೆಯಲು ಮುಂದಾಗಿದ್ದರು. ಇಬ್ಬರು ಮಕ್ಕಳ ಪಾಲನೆಯ ವಿಚಾರದಲ್ಲಿ ಸೃಷ್ಟಿಯಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಬಾಲ ನ್ಯಾಯ ಮಂಡಳಿಯ ಮೆಟ್ಟಿಲೇರಿದ್ದರು ಎಂದು ಬಡಾವಣೆ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.ದಾವಣಗೆರೆ | ನೀರಿನ ಮೀಟರ್ ಮೇಲೆ ಅನುಮಾನ; ಬಿಲ್ ಪಾವತಿಗೆ ಗ್ರಾಹಕರ ಹಿಂದೇಟು.<p>ಪ್ರಕರಣದ ವಿಚಾರಣೆಗೆ ದಂಪತಿ ಮಂಗಳವಾರ ಮಧ್ಯಾಹ್ನ ನ್ಯಾಯ ಮಂಡಳಿಗೆ ಹಾಜರಾಗಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಹಿಳೆಗೆ ಆರೋಪಿ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಷ್ಕಾನ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p> .ದಾವಣಗೆರೆ: ನ್ಯಾಯಾಲಯದ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಕ್ಕಳ ಪಾಲನೆಗೆ ಸಂಬಂಧಿಸಿದ ವಿಚಾರವನ್ನು ಬಗೆಹರಿಸಿಕೊಳ್ಳಲು ಮುಂದಾದ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಗರದ ಎಂಸಿಸಿ ಬಡಾವಣೆಯ ಬಾಲ ನ್ಯಾಯ ಮಂಡಳಿಯ ಆವರಣದಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ.</p>.ದಾವಣಗೆರೆ | ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ.<p>ತಾಲ್ಲೂಕಿನ ಕಾಡಜ್ಜಿ ಗ್ರಾಮದ ಮುಷ್ಕಾನ್ ಬಾನು (26) ಕೊಲೆಯಾದ ಮಹಿಳೆ. ಕಲೀಂವುಲ್ಲಾ (35) ಕೊಲೆ ಮಾಡಿದ ಆರೋಪಿ. ಜಗಳ ಬಿಡಿಸಲು ಪ್ರಯತ್ನಿಸಿದ ಬಾನು ಅವರ ತಾಯಿ ಪರ್ಜಾನ್ (50) ಕೂಡ ಚಾಕು ಇರಿತಕ್ಕೆ ಒಳಗಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಮುಷ್ಕಾನ್ ಬಾನು ಹಾಗೂ ಕಲೀಂವುಲ್ಲಾ ದಂಪತಿ ಕೌಟುಂಬಿಕ ಕಲಹದಿಂದ ಮನನೊಂದು ವಿಚ್ಛೇದನ ಪಡೆಯಲು ಮುಂದಾಗಿದ್ದರು. ಇಬ್ಬರು ಮಕ್ಕಳ ಪಾಲನೆಯ ವಿಚಾರದಲ್ಲಿ ಸೃಷ್ಟಿಯಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಬಾಲ ನ್ಯಾಯ ಮಂಡಳಿಯ ಮೆಟ್ಟಿಲೇರಿದ್ದರು ಎಂದು ಬಡಾವಣೆ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.ದಾವಣಗೆರೆ | ನೀರಿನ ಮೀಟರ್ ಮೇಲೆ ಅನುಮಾನ; ಬಿಲ್ ಪಾವತಿಗೆ ಗ್ರಾಹಕರ ಹಿಂದೇಟು.<p>ಪ್ರಕರಣದ ವಿಚಾರಣೆಗೆ ದಂಪತಿ ಮಂಗಳವಾರ ಮಧ್ಯಾಹ್ನ ನ್ಯಾಯ ಮಂಡಳಿಗೆ ಹಾಜರಾಗಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಹಿಳೆಗೆ ಆರೋಪಿ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಷ್ಕಾನ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p> .ದಾವಣಗೆರೆ: ನ್ಯಾಯಾಲಯದ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>