<p><strong>ದಾವಣಗೆರೆ</strong>: ಜಗಳೂರು ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹಾಳಾಗಿರುವ ರಸ್ತೆಯನ್ನು ದುರಸ್ತಿ ಮಾಡುವಂತೆ ಗ್ಯಾರಂಟಿ ಯೋಜನೆಯ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಆಗ್ರಹಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಸ್ತೆ ಹಾಳಾಗಿರುವ ವಿಚಾರವೂ ಚರ್ಚೆಗೆ ಬಂದಿತು.</p>.<p>‘ಜಗಳೂರು ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ರಸ್ತೆಯ ಇಕ್ಕೆಲಗಳಲ್ಲಿ ಗಿಡ ಬೆಳೆದು ನಿಂತಿದ್ದು, ಸಾರಿಗೆ ಬಸ್ ಸೌಲಭ್ಯವೇ ಇಲ್ಲವಾಗಿದೆ’ ಎಂದು ಸದಸ್ಯರೊಬ್ಬರು ಸಭೆಗೆ ಮಾಹಿತಿ ನೀಡಿದರು.</p>.<p>‘ಅರಳಿಪುರ, ಕೂಲಂಬಿ, ಕುಂದೂರು ಮಾರ್ಗ ಹಾಗೂ ಶಿವಮೊಗ್ಗ, ನ್ಯಾಮತಿ, ಹೊನ್ನಾಳಿ ಮಾರ್ಗದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ’ ಎಂದು ಸದಸ್ಯರು ಒತ್ತಾಯಿಸಿದರು.</p>.<p>‘ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು. ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆ ಬಗ್ಗೆ ದೂರು ಕೇಳಿಬರುತ್ತಿವೆ. ಕೆಲವು ತಾಂತ್ರಿಕ ಲೋಪದೋಷ ಕಂಡು ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಬೇಕು’ ಎಂದು ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಸೂಚಿಸಿದರು.</p>.<p>ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ಕೆ.ಎನ್.ಮಂಜುನಾಥ, ಅನಿಶ್ ಪಾಷಾ, ನಂಜಾನಾಯ್ಕ, ರಾಜೇಶ್ವರಿ ಹಾಜರಿದ್ದರು.</p>.<div><blockquote>ಅನಧಿಕೃತ ಪಡಿತರ ಚೀಟಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಬೇಕಿದೆ. ಲೋಪ ಕಂಡುಬರುವ ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದುಪಡಿಸಲಾಗುವುದು</blockquote><span class="attribution">ಗಿತ್ತೆ ಮಾಧವ ವಿಠ್ಠಲರಾವ್ ಸಿಇಒ ಜಿಲ್ಲಾ ಪಂಚಾಯಿತಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಗಳೂರು ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹಾಳಾಗಿರುವ ರಸ್ತೆಯನ್ನು ದುರಸ್ತಿ ಮಾಡುವಂತೆ ಗ್ಯಾರಂಟಿ ಯೋಜನೆಯ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಆಗ್ರಹಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಸ್ತೆ ಹಾಳಾಗಿರುವ ವಿಚಾರವೂ ಚರ್ಚೆಗೆ ಬಂದಿತು.</p>.<p>‘ಜಗಳೂರು ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ರಸ್ತೆಯ ಇಕ್ಕೆಲಗಳಲ್ಲಿ ಗಿಡ ಬೆಳೆದು ನಿಂತಿದ್ದು, ಸಾರಿಗೆ ಬಸ್ ಸೌಲಭ್ಯವೇ ಇಲ್ಲವಾಗಿದೆ’ ಎಂದು ಸದಸ್ಯರೊಬ್ಬರು ಸಭೆಗೆ ಮಾಹಿತಿ ನೀಡಿದರು.</p>.<p>‘ಅರಳಿಪುರ, ಕೂಲಂಬಿ, ಕುಂದೂರು ಮಾರ್ಗ ಹಾಗೂ ಶಿವಮೊಗ್ಗ, ನ್ಯಾಮತಿ, ಹೊನ್ನಾಳಿ ಮಾರ್ಗದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ’ ಎಂದು ಸದಸ್ಯರು ಒತ್ತಾಯಿಸಿದರು.</p>.<p>‘ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು. ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆ ಬಗ್ಗೆ ದೂರು ಕೇಳಿಬರುತ್ತಿವೆ. ಕೆಲವು ತಾಂತ್ರಿಕ ಲೋಪದೋಷ ಕಂಡು ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಬೇಕು’ ಎಂದು ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಸೂಚಿಸಿದರು.</p>.<p>ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ಕೆ.ಎನ್.ಮಂಜುನಾಥ, ಅನಿಶ್ ಪಾಷಾ, ನಂಜಾನಾಯ್ಕ, ರಾಜೇಶ್ವರಿ ಹಾಜರಿದ್ದರು.</p>.<div><blockquote>ಅನಧಿಕೃತ ಪಡಿತರ ಚೀಟಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಬೇಕಿದೆ. ಲೋಪ ಕಂಡುಬರುವ ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದುಪಡಿಸಲಾಗುವುದು</blockquote><span class="attribution">ಗಿತ್ತೆ ಮಾಧವ ವಿಠ್ಠಲರಾವ್ ಸಿಇಒ ಜಿಲ್ಲಾ ಪಂಚಾಯಿತಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>