<p><strong>ದಾವಣಗೆರೆ:</strong> ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.</p><p>‘ಸಚಿವ, ಸಂಸದ ಹಾಗೂ ಶಾಸಕ ಸ್ಥಾನವನ್ನು ಒಂದೇ ಕುಟುಂಬಕ್ಕೆ ನೀಡುವ ವಿಚಾರದಲ್ಲಿ ಮತದಾರರು ಆಲೋಚನೆ ಮಾಡುತ್ತಿದ್ದಾರೆ. ಪಕ್ಷವು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬೂತ್ ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಹೋರಾಡಲಿವೆ. ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲಾಗಿದ್ದು, ಕಾಂಗ್ರೆಸ್ ವಿರುದ್ಧ ಒಗ್ಗೂಡಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಚುನಾವಣಾ ಪೂರ್ವ ಮೈತ್ರಿಯು ಬಿಜೆಪಿಗೆ ಅನುಕೂಲ ಮಾಡಿಕೊಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಶಾಮನೂರು ಶಿವಶಂಕರಪ್ಪ ಅವರಿಗೆ ರಾಜ್ಯದಲ್ಲಿ ಗೌರವವಿತ್ತು. ಅವರ ರಾಜಕೀಯ ತಂತ್ರಗಾರಿಕೆ ಭಿನ್ನವಾಗಿತ್ತು. ಹೀಗಾಗಿ, ಕ್ಷೇತ್ರದ ವರ್ಗವೊಂದು ವಿಶ್ವಾಸವಿಟ್ಟು ಮತ ಹಾಕುತ್ತಿತ್ತು. ಇತ್ತೀಚಿನ ರಾಜಕೀಯ ಪಲ್ಲಟಗಳನ್ನು ಕ್ಷೇತ್ರದ ಜನರು ಸೂಕ್ಷ್ಮವಾಗಿ ಗಮನಿಸಿದ್ದಾರೆ’ ಎಂದರು.</p><p>‘ಉಪಚುನಾವಣೆಗೆ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯನ್ನು ಅನೇಕರು ತೋರಿಸಿದ್ದಾರೆ. ಈ ಕುರಿತು ಪಕ್ಷದ ಸಂಸದೀಯ ಮಂಡಳಿ ತೀರ್ಮಾನ ಕೈಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ, ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಬಿಕಾ ಹುಲಿ ನಾಯ್ಕರ್, ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಬಸವರಾಜ ನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.</p><p>‘ಸಚಿವ, ಸಂಸದ ಹಾಗೂ ಶಾಸಕ ಸ್ಥಾನವನ್ನು ಒಂದೇ ಕುಟುಂಬಕ್ಕೆ ನೀಡುವ ವಿಚಾರದಲ್ಲಿ ಮತದಾರರು ಆಲೋಚನೆ ಮಾಡುತ್ತಿದ್ದಾರೆ. ಪಕ್ಷವು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬೂತ್ ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಹೋರಾಡಲಿವೆ. ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲಾಗಿದ್ದು, ಕಾಂಗ್ರೆಸ್ ವಿರುದ್ಧ ಒಗ್ಗೂಡಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಚುನಾವಣಾ ಪೂರ್ವ ಮೈತ್ರಿಯು ಬಿಜೆಪಿಗೆ ಅನುಕೂಲ ಮಾಡಿಕೊಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಶಾಮನೂರು ಶಿವಶಂಕರಪ್ಪ ಅವರಿಗೆ ರಾಜ್ಯದಲ್ಲಿ ಗೌರವವಿತ್ತು. ಅವರ ರಾಜಕೀಯ ತಂತ್ರಗಾರಿಕೆ ಭಿನ್ನವಾಗಿತ್ತು. ಹೀಗಾಗಿ, ಕ್ಷೇತ್ರದ ವರ್ಗವೊಂದು ವಿಶ್ವಾಸವಿಟ್ಟು ಮತ ಹಾಕುತ್ತಿತ್ತು. ಇತ್ತೀಚಿನ ರಾಜಕೀಯ ಪಲ್ಲಟಗಳನ್ನು ಕ್ಷೇತ್ರದ ಜನರು ಸೂಕ್ಷ್ಮವಾಗಿ ಗಮನಿಸಿದ್ದಾರೆ’ ಎಂದರು.</p><p>‘ಉಪಚುನಾವಣೆಗೆ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯನ್ನು ಅನೇಕರು ತೋರಿಸಿದ್ದಾರೆ. ಈ ಕುರಿತು ಪಕ್ಷದ ಸಂಸದೀಯ ಮಂಡಳಿ ತೀರ್ಮಾನ ಕೈಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ, ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಬಿಕಾ ಹುಲಿ ನಾಯ್ಕರ್, ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಬಸವರಾಜ ನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>