<p><strong>ದಾವಣಗೆರೆ:</strong> ಶಿಕ್ಷಣ ಪಡೆಯಲು ಹೊರಜಿಲ್ಲೆಯ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ನಗರಕ್ಕೆ ಬರುತ್ತಿದ್ದಾರೆ. ಇನ್ನೂ ನಾಲ್ಕೈದು ಹಾಸ್ಟೆಲ್ಗಳಿಗೆ ಬೇಡಿಕೆ ಇದೆ. ಅಗತ್ಯವಿದ್ದರೆ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಸತಿ ಶಾಲೆಗಳಲ್ಲಿ ಮೂಲಸೌಲಭ್ಯಗಳ ಕೊರತೆ ಪರಿಶೀಲಿಸಬೇಕು. ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ಅವರಿಗೆ ಸೂಚಿಸಿದರು.</p>.<p><strong>ಒತ್ತುವರಿ ಮಾಡಿದರೆ ಕ್ರಮ:</strong></p>.<p>‘ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಕಾನೂನು ಬಾಹಿರ ಕೃತ್ಯಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಜಗಳೂರು ತಾಲ್ಲೂಕಿನ ಚಿದರುವಳ್ಳಿ ಗ್ರಾಮದ 13 ಎಕರೆ ಜಮೀನಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನೇಕ ಬಡ ಕುಟುಂಬಗಳು ಮನೆ ನಿರ್ಮಿಸಿಕೊಂಡಿವೆ. ಆ ಪ್ರದೇಶವನ್ನು ಕಂದಾಯ ಗ್ರಾಮವನ್ನಾಗಿಸಲು ಸರ್ಕಾರಕ್ಕೆ ಪ್ರಸ್ತಾವವನ್ನು ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>‘ಕಂದಾಯ ಗ್ರಾಮವೆಂದು ಘೋಷಣೆಯಾದ ಬಳಿಕ ಅಧಿಕೃತವಾಗಿ ಹಕ್ಕುಪತ್ರ ವಿತರಿಸಲಾಗುವುದು. ಆ ಪ್ರದೇಶದಲ್ಲಿ ಪ್ರಸ್ತುತ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ಒಂದೇ ವೇಳೆ ನಿರ್ಮಾಣ ಕಾರ್ಯಗಳನ್ನು ಕೈಗೊಂಡಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p><strong>51 ಪ್ರಕರಣ ದಾಖಲು: </strong>‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಸೆ.24 ರವರೆಗೆ ಜಿಲ್ಲೆಯಲ್ಲಿ 51 ಪ್ರಕರಣ ದಾಖಲಾಗಿವೆ. ಇದರಲ್ಲಿ 2 ಕೊಲೆ, 4 ಪೋಕ್ಸೊ ಹಾಗೂ 45 ದೌರ್ಜನ್ಯ ಪ್ರಕರಣಗಳಿವೆ. ಈ ಪೈಕಿ 20 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>‘ಕೊಲೆ ಪ್ರಕರಣಗಳಲ್ಲಿ ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲು ದಾಖಲೆಗಳನ್ನು ಸಲ್ಲಿಸಲು ತಿಳಿವಳಿಕೆ ನೀಡಲಾಗಿದೆ. ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿಯ 93, ಪರಿಶಿಷ್ಟ ಪಂಗಡದ 43 ಸಂತ್ರಸ್ತರನ್ನು ಒಳಗೊಂಡಂತೆ 136 ಪ್ರಕರಣಗಳಲ್ಲಿ ₹ 1.2 ಕೋಟಿ ಪರಿಹಾರ ವಿತರಿಸಲಾಗಿದೆ. ನ್ಯಾಯಾಲಯದಲ್ಲಿ 146 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ’ ಎಂದು ಅಧಿಕಾರಿಗಳು ವಿವರಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ, ಕೆಎಸ್ಆರ್ಟಿಸಿ ವಿಭಾಗೀಯ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್ ಹಾಜರಿದ್ದರು.</p>.<div><blockquote>ಮ್ಯಾನುಯಲ್ ಸ್ಕ್ಯಾವೆಂಜರ್ಗಳಿಗೆ ಭೂಮಿ ಮಂಜೂರು ಮಾಡುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇವರಿಗೆ ಗುರುತಿನ ಚೀಟಿ ವಿತರಿಸಲಾಗುವುದು </blockquote><span class="attribution">ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಶಿಕ್ಷಣ ಪಡೆಯಲು ಹೊರಜಿಲ್ಲೆಯ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ನಗರಕ್ಕೆ ಬರುತ್ತಿದ್ದಾರೆ. ಇನ್ನೂ ನಾಲ್ಕೈದು ಹಾಸ್ಟೆಲ್ಗಳಿಗೆ ಬೇಡಿಕೆ ಇದೆ. ಅಗತ್ಯವಿದ್ದರೆ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಸತಿ ಶಾಲೆಗಳಲ್ಲಿ ಮೂಲಸೌಲಭ್ಯಗಳ ಕೊರತೆ ಪರಿಶೀಲಿಸಬೇಕು. ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ಅವರಿಗೆ ಸೂಚಿಸಿದರು.</p>.<p><strong>ಒತ್ತುವರಿ ಮಾಡಿದರೆ ಕ್ರಮ:</strong></p>.<p>‘ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಕಾನೂನು ಬಾಹಿರ ಕೃತ್ಯಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಜಗಳೂರು ತಾಲ್ಲೂಕಿನ ಚಿದರುವಳ್ಳಿ ಗ್ರಾಮದ 13 ಎಕರೆ ಜಮೀನಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನೇಕ ಬಡ ಕುಟುಂಬಗಳು ಮನೆ ನಿರ್ಮಿಸಿಕೊಂಡಿವೆ. ಆ ಪ್ರದೇಶವನ್ನು ಕಂದಾಯ ಗ್ರಾಮವನ್ನಾಗಿಸಲು ಸರ್ಕಾರಕ್ಕೆ ಪ್ರಸ್ತಾವವನ್ನು ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>‘ಕಂದಾಯ ಗ್ರಾಮವೆಂದು ಘೋಷಣೆಯಾದ ಬಳಿಕ ಅಧಿಕೃತವಾಗಿ ಹಕ್ಕುಪತ್ರ ವಿತರಿಸಲಾಗುವುದು. ಆ ಪ್ರದೇಶದಲ್ಲಿ ಪ್ರಸ್ತುತ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ಒಂದೇ ವೇಳೆ ನಿರ್ಮಾಣ ಕಾರ್ಯಗಳನ್ನು ಕೈಗೊಂಡಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p><strong>51 ಪ್ರಕರಣ ದಾಖಲು: </strong>‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಸೆ.24 ರವರೆಗೆ ಜಿಲ್ಲೆಯಲ್ಲಿ 51 ಪ್ರಕರಣ ದಾಖಲಾಗಿವೆ. ಇದರಲ್ಲಿ 2 ಕೊಲೆ, 4 ಪೋಕ್ಸೊ ಹಾಗೂ 45 ದೌರ್ಜನ್ಯ ಪ್ರಕರಣಗಳಿವೆ. ಈ ಪೈಕಿ 20 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>‘ಕೊಲೆ ಪ್ರಕರಣಗಳಲ್ಲಿ ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲು ದಾಖಲೆಗಳನ್ನು ಸಲ್ಲಿಸಲು ತಿಳಿವಳಿಕೆ ನೀಡಲಾಗಿದೆ. ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿಯ 93, ಪರಿಶಿಷ್ಟ ಪಂಗಡದ 43 ಸಂತ್ರಸ್ತರನ್ನು ಒಳಗೊಂಡಂತೆ 136 ಪ್ರಕರಣಗಳಲ್ಲಿ ₹ 1.2 ಕೋಟಿ ಪರಿಹಾರ ವಿತರಿಸಲಾಗಿದೆ. ನ್ಯಾಯಾಲಯದಲ್ಲಿ 146 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ’ ಎಂದು ಅಧಿಕಾರಿಗಳು ವಿವರಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ, ಕೆಎಸ್ಆರ್ಟಿಸಿ ವಿಭಾಗೀಯ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್ ಹಾಜರಿದ್ದರು.</p>.<div><blockquote>ಮ್ಯಾನುಯಲ್ ಸ್ಕ್ಯಾವೆಂಜರ್ಗಳಿಗೆ ಭೂಮಿ ಮಂಜೂರು ಮಾಡುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇವರಿಗೆ ಗುರುತಿನ ಚೀಟಿ ವಿತರಿಸಲಾಗುವುದು </blockquote><span class="attribution">ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>