ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಶ್ರಿತರ ಕೇಂದ್ರದಲ್ಲಿ ನೃತ್ಯ ಮಾಡಿ ಆತ್ಮಸ್ಥೈರ್ಯ ತುಂಬಿದ ತಹಶೀಲ್ದಾರ್‌

Last Updated 14 ಸೆಪ್ಟೆಂಬರ್ 2021, 6:42 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಕೇಂದ್ರದಲ್ಲಿ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರು ನೃತ್ಯ ಮಾಡಿ ರಂಜಿಸಿದರು.

ಕೇಂದ್ರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆಯ ವೇಳೆ ‘ಸತ್ಯ ಹರಿಶ್ಚಂದ್ರ’ ಚಿತ್ರದ ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಗೂ ‘ಆಕಸ್ಮಿಕ’ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿ ಆತ್ಮಸ್ಥೈರ್ಯ ತುಂಬಿದರು.

ನಿರಾಶ್ರಿತರ ಕೇಂದ್ರದ ಪ್ರಭಾರ ಅಧೀಕ್ಷಕಿ ನಳಿನಿ ಅವರು ನಿರಾಶ್ರಿತರಿಗಾಗಿ ಮ್ಯೂಸಿಕಲ್ ಚೇರ್, ಪಾಸಿಂಗ್ ದ ಬಾಲ್ ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲರೂ ಪಾಲ್ಗೊಂಡು ಖುಷಿಪಟ್ಟರು. ಊರು ಹಾಗೂ ಮನೆ ಕುಟುಂಬ ಬಿಟ್ಟು ಬಂದಿದ್ದವರಿಗೆ ಹಬ್ಬ ಆಚರಣೆ ಮಾಡಲಿಲ್ಲವಲ್ಲಾ ಎಂಬ ಕೊರಗು ನೀಗಿತು.

‘ನಿರಾಶ್ರಿತರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿರಾಶ್ರಿತರು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ರಂಜಿಸಿದರು’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT