<p><strong>ದಾವಣಗೆರೆ:</strong> ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಕೇಂದ್ರದಲ್ಲಿ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರು ನೃತ್ಯ ಮಾಡಿ ರಂಜಿಸಿದರು.</p>.<p>ಕೇಂದ್ರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆಯ ವೇಳೆ ‘ಸತ್ಯ ಹರಿಶ್ಚಂದ್ರ’ ಚಿತ್ರದ ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಗೂ ‘ಆಕಸ್ಮಿಕ’ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿ ಆತ್ಮಸ್ಥೈರ್ಯ ತುಂಬಿದರು.</p>.<p>ನಿರಾಶ್ರಿತರ ಕೇಂದ್ರದ ಪ್ರಭಾರ ಅಧೀಕ್ಷಕಿ ನಳಿನಿ ಅವರು ನಿರಾಶ್ರಿತರಿಗಾಗಿ ಮ್ಯೂಸಿಕಲ್ ಚೇರ್, ಪಾಸಿಂಗ್ ದ ಬಾಲ್ ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲರೂ ಪಾಲ್ಗೊಂಡು ಖುಷಿಪಟ್ಟರು. ಊರು ಹಾಗೂ ಮನೆ ಕುಟುಂಬ ಬಿಟ್ಟು ಬಂದಿದ್ದವರಿಗೆ ಹಬ್ಬ ಆಚರಣೆ ಮಾಡಲಿಲ್ಲವಲ್ಲಾ ಎಂಬ ಕೊರಗು ನೀಗಿತು.</p>.<p>‘ನಿರಾಶ್ರಿತರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿರಾಶ್ರಿತರು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ರಂಜಿಸಿದರು’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಕೇಂದ್ರದಲ್ಲಿ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರು ನೃತ್ಯ ಮಾಡಿ ರಂಜಿಸಿದರು.</p>.<p>ಕೇಂದ್ರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆಯ ವೇಳೆ ‘ಸತ್ಯ ಹರಿಶ್ಚಂದ್ರ’ ಚಿತ್ರದ ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಗೂ ‘ಆಕಸ್ಮಿಕ’ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿ ಆತ್ಮಸ್ಥೈರ್ಯ ತುಂಬಿದರು.</p>.<p>ನಿರಾಶ್ರಿತರ ಕೇಂದ್ರದ ಪ್ರಭಾರ ಅಧೀಕ್ಷಕಿ ನಳಿನಿ ಅವರು ನಿರಾಶ್ರಿತರಿಗಾಗಿ ಮ್ಯೂಸಿಕಲ್ ಚೇರ್, ಪಾಸಿಂಗ್ ದ ಬಾಲ್ ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲರೂ ಪಾಲ್ಗೊಂಡು ಖುಷಿಪಟ್ಟರು. ಊರು ಹಾಗೂ ಮನೆ ಕುಟುಂಬ ಬಿಟ್ಟು ಬಂದಿದ್ದವರಿಗೆ ಹಬ್ಬ ಆಚರಣೆ ಮಾಡಲಿಲ್ಲವಲ್ಲಾ ಎಂಬ ಕೊರಗು ನೀಗಿತು.</p>.<p>‘ನಿರಾಶ್ರಿತರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿರಾಶ್ರಿತರು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ರಂಜಿಸಿದರು’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>