<p><strong>ದಾವಣಗೆರೆ:</strong> ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ, ದೀಪಾವಳಿಯ ಸಂದರ್ಭದಲ್ಲಿ ಮತ್ತೆ ಕಾಣಿಸಿಕೊಂಡಿತು. ಗುಡುಗು ಸಹಿತ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ ಸುರಿಯಿತು. ಇದರಿಂದ ಮೆಕ್ಕೆಜೋಳ ಕಟಾವು ಹಾಗೂ ಹಬ್ಬದ ಸಂಭ್ರಮಕ್ಕೆ ತೊಂದರೆ ಉಂಟಾಯಿತು.</p>.<p>ವಾಯುಭಾರ ಕುಸಿತದಿಂದ ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ನಿರೀಕ್ಷೆಯಂತೆ ಭಾನುವಾರ ಮಧ್ಯಾಹ್ನದಿಂದ ಆರಂಭವಾದ ಮಳೆ, ದಾವಣಗೆರೆಯಲ್ಲಿ ಸಂಜೆಯ ಹೊತ್ತಿಗೆ ಧರೆಗೆ ಇಳಿಯಿತು.</p>.<p>ಹೊನ್ನಾಳಿ, ಹರಿಹರ, ನ್ಯಾಮತಿ, ಚನ್ನಗಿರಿ, ದಾವಣಗೆರೆ ತಾಲ್ಲೂಕಿನ ವಿವಿಧೆಡೆ ಮಳೆ ರಭಸದಿಂದ ಸುರಿಯಿತು. ಕೆಲವೇ ನಿಮಿಷಗಳಲ್ಲಿ ಚರಂಡಿಗಳು ತುಂಬಿ ಹರಿದವು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತು.</p>.<p>ಮುಂಗಾರು ಹಂಗಾಮಿನ ಮೆಕ್ಕೆಜೋಳ ಕಟಾವಿಗೆ ಬಂದಿದ್ದು, ಮಳೆ ಬಿಡುವು ನೀಡಿದ್ದರಿಂದ ಕಟಾವಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರು. ಮತ್ತೆ ಮಳೆ ಸುರಿದ್ದಿದರಿಂದ ರೈತರು ಚಿಂತೆಗೀಡಾಗಿದ್ದಾರೆ. ಆದರೆ, ಈ ಮಳೆಯಿಂದ ಹಿಂಗಾರು ಹಂಗಾಮು ಬಿತ್ತನೆಗೆ ಅನುಕೂಲವಾಗಿದೆ.</p>.<p>ಮಲೇಬೆನ್ನೂರು ಹಾಗೂ ಕಡರನಾಯ್ಕನಹಳ್ಳಿ ಸುತ್ತಲಿನ ಪ್ರದೇಶಗಳಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಹೊತ್ತು ಬಿರು ಮಳೆ ಸುರಿಯಿತು. ಸಂಜೆ 5.30ಕ್ಕೆ ಆರಂಭವಾದ ಮಳೆ ರಾತ್ರಿಯವರೆಗೆ ಬಂದಿತು. ದೀಪಾವಳಿಯ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂ ಬೆಳೆಗಾರರು ಆತಂಕಗೊಂಡಿದ್ದಾರೆ. ಪಟಾಕಿ ವ್ಯಾಪಾರಕ್ಕೂ ಇದರಿಂದ ತೊಂದರೆ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ, ದೀಪಾವಳಿಯ ಸಂದರ್ಭದಲ್ಲಿ ಮತ್ತೆ ಕಾಣಿಸಿಕೊಂಡಿತು. ಗುಡುಗು ಸಹಿತ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ ಸುರಿಯಿತು. ಇದರಿಂದ ಮೆಕ್ಕೆಜೋಳ ಕಟಾವು ಹಾಗೂ ಹಬ್ಬದ ಸಂಭ್ರಮಕ್ಕೆ ತೊಂದರೆ ಉಂಟಾಯಿತು.</p>.<p>ವಾಯುಭಾರ ಕುಸಿತದಿಂದ ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ನಿರೀಕ್ಷೆಯಂತೆ ಭಾನುವಾರ ಮಧ್ಯಾಹ್ನದಿಂದ ಆರಂಭವಾದ ಮಳೆ, ದಾವಣಗೆರೆಯಲ್ಲಿ ಸಂಜೆಯ ಹೊತ್ತಿಗೆ ಧರೆಗೆ ಇಳಿಯಿತು.</p>.<p>ಹೊನ್ನಾಳಿ, ಹರಿಹರ, ನ್ಯಾಮತಿ, ಚನ್ನಗಿರಿ, ದಾವಣಗೆರೆ ತಾಲ್ಲೂಕಿನ ವಿವಿಧೆಡೆ ಮಳೆ ರಭಸದಿಂದ ಸುರಿಯಿತು. ಕೆಲವೇ ನಿಮಿಷಗಳಲ್ಲಿ ಚರಂಡಿಗಳು ತುಂಬಿ ಹರಿದವು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತು.</p>.<p>ಮುಂಗಾರು ಹಂಗಾಮಿನ ಮೆಕ್ಕೆಜೋಳ ಕಟಾವಿಗೆ ಬಂದಿದ್ದು, ಮಳೆ ಬಿಡುವು ನೀಡಿದ್ದರಿಂದ ಕಟಾವಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರು. ಮತ್ತೆ ಮಳೆ ಸುರಿದ್ದಿದರಿಂದ ರೈತರು ಚಿಂತೆಗೀಡಾಗಿದ್ದಾರೆ. ಆದರೆ, ಈ ಮಳೆಯಿಂದ ಹಿಂಗಾರು ಹಂಗಾಮು ಬಿತ್ತನೆಗೆ ಅನುಕೂಲವಾಗಿದೆ.</p>.<p>ಮಲೇಬೆನ್ನೂರು ಹಾಗೂ ಕಡರನಾಯ್ಕನಹಳ್ಳಿ ಸುತ್ತಲಿನ ಪ್ರದೇಶಗಳಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಹೊತ್ತು ಬಿರು ಮಳೆ ಸುರಿಯಿತು. ಸಂಜೆ 5.30ಕ್ಕೆ ಆರಂಭವಾದ ಮಳೆ ರಾತ್ರಿಯವರೆಗೆ ಬಂದಿತು. ದೀಪಾವಳಿಯ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂ ಬೆಳೆಗಾರರು ಆತಂಕಗೊಂಡಿದ್ದಾರೆ. ಪಟಾಕಿ ವ್ಯಾಪಾರಕ್ಕೂ ಇದರಿಂದ ತೊಂದರೆ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>