ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ. ಬಸವರಾಜ ಬಣಕಾರ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಇದುವರೆಗೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾಗಿದ್ದ ಅವರು ಇದೀಗ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದಾರೆ. ಅವರು ಕುಲಸಚಿವರಾಗಿದ್ದ ಪ್ರೊ.ಪಿ. ಕಣ್ಣನ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ಬಣಕಾರ, ‘ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವ ಉದ್ದೇಶಿತ ಗುರಿ ತಲುಪಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಂಶೋಧನೆ, ಅಧ್ಯಯನ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು’ ಎಂದರು.
ಕುಲಪತಿ ಪ್ರೊ. ಎಸ್.ವಿ. ಹಲಸೆ, ಪ್ರೊ. ಕಣ್ಣನ್, ಹಣಕಾಸು ಅಧಿಕಾರಿ ಪ್ರೊ.ಜೆ.ಕೆ. ರಾಜು, ಡೀನ್ಗಳಾದ ಪ್ರೊ.ಕೆ. ಬಿ.ರಂಗಪ್ಪ, ಡಾ. ವೆಂಕಟೇಶ್ ಮಾತನಾಡಿದರು. ವಿಜ್ಞಾನ ನಿಕಾಯದ ಡೀನ್ ಪ್ರೊ. ಗಾಯತ್ರಿ ದೇವರಾಜ್ ಉಪಸ್ಥಿತರಿದ್ದರು.