ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ವಿಶೇಷ ಪರೀಕ್ಷೆ ನಡೆಸುತ್ತಿರುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯ ಇದಾಗಿದೆ. ಪ್ರಸ್ತುತ ವಿಶ್ವವಿದ್ಯಾಲಯದ ಯೋಜನೆಯಿಂದ ಒಟ್ಟು 15,251 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಲ್ಲಿ ಸ್ನಾತಕ ಪದವಿಯ 15,155 ಮತ್ತು ಸ್ನಾತಕೋತ್ತರ ಪದವಿಯ 96 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.