<p>ದಾವಣಗೆರೆ: ಕೊರೊನಾ ನಿಯಮ ಪಾಲಿಸದ ಜವಳಿ ಅಂಗಡಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ತಂಡ ಸೋಮವಾರ ಬಿಸಿಮುಟ್ಟಿಸಿದೆ. ಮಾಸ್ಕ್ ಧರಿಸದ, ಅಂತರ ಕಾಪಾಡಿಕೊಳ್ಳದ ಗ್ರಾಹಕರು ಇದ್ದ ಅಂಗಡಿಗಳಿಗೆ ದಂಡ ವಿಧಿಸಿದ್ದಾರೆ.</p>.<p>ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ, ವಿಜಯಲಕ್ಷ್ಮೀ ರಸ್ತೆ ಸೇರಿ ವಿವಿಧ ರಸ್ತೆಗಳಲ್ಲಿ ಸಂಚರಿಸಿದ ತಂಡವು ಕೊರೊನಾ ನಿಯಂತ್ರಣ ನಿಯಮ ಉಲ್ಲಂಘಿಸಿದರೆ ವ್ಯಾಪಾರ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು,.</p>.<p>ಬಟ್ಟೆ ಅಂಗಡಿ, ಜ್ಯೂವೆಲರ್ಸ್ ಅಂಗಡಿ, ಫ್ಯಾನ್ಸಿ ಅಂಗಡಿಗಳ ಸಹಿತ ವಿವಿಧ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು. ಎಲ್ಲಿಯೂ ಅಂತರ ಕಾಣಲಿಲ್ಲ. ಜನರು ಮತ್ತು ಅಂಗಡಿ ಮಾಲೀಕರ ಈ ವರ್ತನೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಳಿಕಾದೇವಿ ರಸ್ತೆಯಲ್ಲಿನ ಎರಡು ಬಿ.ಎಸ್. ಚನ್ನಬಸಪ್ಪ ಜವಳಿ ಅಂಗಡಿಗಳಿಗೆ ತಲಾ ₹ 50 ಸಾವಿರ ದಂಡ ವಿಧಿಸಿದರು. ಅಂಬರ್ಕರ್ ಪಂಪಣ್ಣ ಜವಳಿ ಅಂಗಡಿಗೆ ₹ 10 ಸಾವಿರ ದಂಡ ಹಾಕಿದರು. ದಂಡ ಪಾವತಿಸಲು ನಿರಾಕರಿಸಿದ್ದಕ್ಕಾಗಿ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಇವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಸ್ವತಃ ಮಾಸ್ಕ್ ವಿತರಿಸಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಂಡು ಅಂತರವನ್ನು ಕಾಯ್ದುಕೊಳ್ಳಿ. ನಿಮ್ಮ ಬಗ್ಗೆ ನೀವು ಜಾಗರೂಕರಾಗಿರಿ. ಹಬ್ಬ- ಮದುವೆ ಸಮಾರಂಭಗಳನ್ನು ಕನಿಷ್ಠ 6 ತಿಂಗಳುಗಳ ಕಾಲ ಮಾಡದೇ ಕೋವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಿ. ಜೀವಕ್ಕಿಂತ ಹಣ, ಸಂಭ್ರಮ ಮುಖ್ಯವಲ್ಲ ಎಂದು ಕಿವಿಮಾತು ಹೇಳಿದರು.</p>.<p>ಕೋವಿಡ್ ನಿಯಮಗಳನ್ನು ಪಾಲಿಸದವರಿಗೆ ದಂಡ ವಿಧಿಸ<br />ಲಾಗುತ್ತದೆ. ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಬೇಕಾಬಿಟ್ಟಿಯಾಗಿ ಉಲ್ಲಂಘನೆ ಮಾಡುವುದನ್ನು ಸಹಿಸುವುದಿಲ್ಲ. ಕೊರೊನಾ ನಿಯಂತ್ರಿಸಲು ಕೇವಲ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತದಿಂದ ಸಾಧ್ಯವಿಲ್ಲ. ಜನರು, ವರ್ತಕರು ಸಹಕಾರ ನೀಡಬೇಕು ಎಂದು ಕೋರಿದರು.</p>.<p>ನಿಯಮ ಉಲ್ಲಂಘನೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಎಚ್ಚರಿಸಿದರು.</p>.<p>ಜಾಗೃತಿ ಅಭಿಯಾನದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ತಹಶೀಲ್ದಾರ್ ಗಿರೀಶ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕೊರೊನಾ ನಿಯಮ ಪಾಲಿಸದ ಜವಳಿ ಅಂಗಡಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ತಂಡ ಸೋಮವಾರ ಬಿಸಿಮುಟ್ಟಿಸಿದೆ. ಮಾಸ್ಕ್ ಧರಿಸದ, ಅಂತರ ಕಾಪಾಡಿಕೊಳ್ಳದ ಗ್ರಾಹಕರು ಇದ್ದ ಅಂಗಡಿಗಳಿಗೆ ದಂಡ ವಿಧಿಸಿದ್ದಾರೆ.</p>.<p>ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ, ವಿಜಯಲಕ್ಷ್ಮೀ ರಸ್ತೆ ಸೇರಿ ವಿವಿಧ ರಸ್ತೆಗಳಲ್ಲಿ ಸಂಚರಿಸಿದ ತಂಡವು ಕೊರೊನಾ ನಿಯಂತ್ರಣ ನಿಯಮ ಉಲ್ಲಂಘಿಸಿದರೆ ವ್ಯಾಪಾರ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು,.</p>.<p>ಬಟ್ಟೆ ಅಂಗಡಿ, ಜ್ಯೂವೆಲರ್ಸ್ ಅಂಗಡಿ, ಫ್ಯಾನ್ಸಿ ಅಂಗಡಿಗಳ ಸಹಿತ ವಿವಿಧ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು. ಎಲ್ಲಿಯೂ ಅಂತರ ಕಾಣಲಿಲ್ಲ. ಜನರು ಮತ್ತು ಅಂಗಡಿ ಮಾಲೀಕರ ಈ ವರ್ತನೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಳಿಕಾದೇವಿ ರಸ್ತೆಯಲ್ಲಿನ ಎರಡು ಬಿ.ಎಸ್. ಚನ್ನಬಸಪ್ಪ ಜವಳಿ ಅಂಗಡಿಗಳಿಗೆ ತಲಾ ₹ 50 ಸಾವಿರ ದಂಡ ವಿಧಿಸಿದರು. ಅಂಬರ್ಕರ್ ಪಂಪಣ್ಣ ಜವಳಿ ಅಂಗಡಿಗೆ ₹ 10 ಸಾವಿರ ದಂಡ ಹಾಕಿದರು. ದಂಡ ಪಾವತಿಸಲು ನಿರಾಕರಿಸಿದ್ದಕ್ಕಾಗಿ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಇವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಸ್ವತಃ ಮಾಸ್ಕ್ ವಿತರಿಸಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಂಡು ಅಂತರವನ್ನು ಕಾಯ್ದುಕೊಳ್ಳಿ. ನಿಮ್ಮ ಬಗ್ಗೆ ನೀವು ಜಾಗರೂಕರಾಗಿರಿ. ಹಬ್ಬ- ಮದುವೆ ಸಮಾರಂಭಗಳನ್ನು ಕನಿಷ್ಠ 6 ತಿಂಗಳುಗಳ ಕಾಲ ಮಾಡದೇ ಕೋವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಿ. ಜೀವಕ್ಕಿಂತ ಹಣ, ಸಂಭ್ರಮ ಮುಖ್ಯವಲ್ಲ ಎಂದು ಕಿವಿಮಾತು ಹೇಳಿದರು.</p>.<p>ಕೋವಿಡ್ ನಿಯಮಗಳನ್ನು ಪಾಲಿಸದವರಿಗೆ ದಂಡ ವಿಧಿಸ<br />ಲಾಗುತ್ತದೆ. ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಬೇಕಾಬಿಟ್ಟಿಯಾಗಿ ಉಲ್ಲಂಘನೆ ಮಾಡುವುದನ್ನು ಸಹಿಸುವುದಿಲ್ಲ. ಕೊರೊನಾ ನಿಯಂತ್ರಿಸಲು ಕೇವಲ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತದಿಂದ ಸಾಧ್ಯವಿಲ್ಲ. ಜನರು, ವರ್ತಕರು ಸಹಕಾರ ನೀಡಬೇಕು ಎಂದು ಕೋರಿದರು.</p>.<p>ನಿಯಮ ಉಲ್ಲಂಘನೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಎಚ್ಚರಿಸಿದರು.</p>.<p>ಜಾಗೃತಿ ಅಭಿಯಾನದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ತಹಶೀಲ್ದಾರ್ ಗಿರೀಶ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>