ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ದಿನಗಳಲ್ಲಿ ಡಿಸಿಎಂ ಅವಕಾಶ: ಶ್ರೀರಾಮುಲು

Last Updated 9 ಫೆಬ್ರುವರಿ 2020, 10:55 IST
ಅಕ್ಷರ ಗಾತ್ರ

ದಾವಣಗೆರೆ: ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಒತ್ತಡದಲ್ಲಿ ಇದ್ದು, ಅವರಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಆಗುವ ಇದೆ ಅವಕಾಶ ಮುಂದೆ ಬರುತ್ತದೆ. ವಾಲ್ಮೀಕಿ ಸಮಾಜಕ್ಕೆ ಯಡಿಯೂರಪ್ಪನವರು ಅವಕಾಶ ಕೊಡುತ್ತಾರೆ. ಅವರು ಕೊಟ್ಟ ಮಾತನ್ನು ಯಾವತ್ತೂ ತಪ್ಪುವುದಿಲ್ಲ. ನಮ್ಮ ಸಮಾಜಕ್ಕೆ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

ಮುಂದಿನ ಎರಡು ದಿವಸ ಬಜೆಟ್ ಪೂರ್ವಭಾವಿ ಸಭೆ ಇದ್ದು, ಸಲಹಗೆಳನ್ನು ನಾವು ಕೊಡುತ್ತೇವೆ ಎಂದು ಹೇಳಿದ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯ ಬಗ್ಗೆ ಮೌನವಾದರು.

ಮಂಡಕ್ಕಿ ವಗ್ಗರಣೆ ಸವಿದ ಶ್ರೀರಾಮುಲು: ದಾವಣಗೆರೆಯ ಹೊರ ವಲಯದಲ್ಲಿರುವ ಶಾಮನೂರು ಆಂಜನೇಯನ ದರ್ಶನ ಪಡೆದ ಸಚಿವ ಶ್ರೀರಾಮುಲು ಪೂಜೆ ಸಲ್ಲಿಸಿದರು.

ದೇವಸ್ಥಾನದ ಹೊರಗೆ ಇರುವ ನಾಗಣ್ಣನ ಹೋಟೆಲ್‌ನಲ್ಲಿ ಮಂಡಕ್ಕಿ ಒಗ್ಗರಣೆ, ಮೆಣಸಿನಕಾಯಿ ತಿಂದರು. ಈ ವೇಳೆ ಶ್ರೀರಾಮುಲು ಅವರನ್ನು ನೋಡಲು ಸಾರ್ವಜನಿಕರು ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT