<p><strong>ದಾವಣಗೆರೆ: </strong>ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒತ್ತಡದಲ್ಲಿ ಇದ್ದು, ಅವರಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.</p>.<p>ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಆಗುವ ಇದೆ ಅವಕಾಶ ಮುಂದೆ ಬರುತ್ತದೆ. ವಾಲ್ಮೀಕಿ ಸಮಾಜಕ್ಕೆ ಯಡಿಯೂರಪ್ಪನವರು ಅವಕಾಶ ಕೊಡುತ್ತಾರೆ. ಅವರು ಕೊಟ್ಟ ಮಾತನ್ನು ಯಾವತ್ತೂ ತಪ್ಪುವುದಿಲ್ಲ. ನಮ್ಮ ಸಮಾಜಕ್ಕೆ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.</p>.<p>ಮುಂದಿನ ಎರಡು ದಿವಸ ಬಜೆಟ್ ಪೂರ್ವಭಾವಿ ಸಭೆ ಇದ್ದು, ಸಲಹಗೆಳನ್ನು ನಾವು ಕೊಡುತ್ತೇವೆ ಎಂದು ಹೇಳಿದ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯ ಬಗ್ಗೆ ಮೌನವಾದರು.</p>.<p>ಮಂಡಕ್ಕಿ ವಗ್ಗರಣೆ ಸವಿದ ಶ್ರೀರಾಮುಲು: ದಾವಣಗೆರೆಯ ಹೊರ ವಲಯದಲ್ಲಿರುವ ಶಾಮನೂರು ಆಂಜನೇಯನ ದರ್ಶನ ಪಡೆದ ಸಚಿವ ಶ್ರೀರಾಮುಲು ಪೂಜೆ ಸಲ್ಲಿಸಿದರು.</p>.<p>ದೇವಸ್ಥಾನದ ಹೊರಗೆ ಇರುವ ನಾಗಣ್ಣನ ಹೋಟೆಲ್ನಲ್ಲಿ ಮಂಡಕ್ಕಿ ಒಗ್ಗರಣೆ, ಮೆಣಸಿನಕಾಯಿ ತಿಂದರು. ಈ ವೇಳೆ ಶ್ರೀರಾಮುಲು ಅವರನ್ನು ನೋಡಲು ಸಾರ್ವಜನಿಕರು ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒತ್ತಡದಲ್ಲಿ ಇದ್ದು, ಅವರಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.</p>.<p>ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಆಗುವ ಇದೆ ಅವಕಾಶ ಮುಂದೆ ಬರುತ್ತದೆ. ವಾಲ್ಮೀಕಿ ಸಮಾಜಕ್ಕೆ ಯಡಿಯೂರಪ್ಪನವರು ಅವಕಾಶ ಕೊಡುತ್ತಾರೆ. ಅವರು ಕೊಟ್ಟ ಮಾತನ್ನು ಯಾವತ್ತೂ ತಪ್ಪುವುದಿಲ್ಲ. ನಮ್ಮ ಸಮಾಜಕ್ಕೆ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.</p>.<p>ಮುಂದಿನ ಎರಡು ದಿವಸ ಬಜೆಟ್ ಪೂರ್ವಭಾವಿ ಸಭೆ ಇದ್ದು, ಸಲಹಗೆಳನ್ನು ನಾವು ಕೊಡುತ್ತೇವೆ ಎಂದು ಹೇಳಿದ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯ ಬಗ್ಗೆ ಮೌನವಾದರು.</p>.<p>ಮಂಡಕ್ಕಿ ವಗ್ಗರಣೆ ಸವಿದ ಶ್ರೀರಾಮುಲು: ದಾವಣಗೆರೆಯ ಹೊರ ವಲಯದಲ್ಲಿರುವ ಶಾಮನೂರು ಆಂಜನೇಯನ ದರ್ಶನ ಪಡೆದ ಸಚಿವ ಶ್ರೀರಾಮುಲು ಪೂಜೆ ಸಲ್ಲಿಸಿದರು.</p>.<p>ದೇವಸ್ಥಾನದ ಹೊರಗೆ ಇರುವ ನಾಗಣ್ಣನ ಹೋಟೆಲ್ನಲ್ಲಿ ಮಂಡಕ್ಕಿ ಒಗ್ಗರಣೆ, ಮೆಣಸಿನಕಾಯಿ ತಿಂದರು. ಈ ವೇಳೆ ಶ್ರೀರಾಮುಲು ಅವರನ್ನು ನೋಡಲು ಸಾರ್ವಜನಿಕರು ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>